ನವದೆಹಲಿ: ಮುಖ್ಯಮಂತ್ರಿ ಕೇಜ್ರಿವಾಲ್ ಬಂಧನದ ವಿರುದ್ಧ ಜನರ ಬೆಂಬಲ ಪಡೆಯಲು ರಾಷ್ಟ್ರ ರಾಜಧಾನಿಯ ನಾಲ್ಕು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಎಎಪಿಯು 200 ‘ಸಂಕಲ್ಪ ಸಭೆ’ಗಳನ್ನು ನಡೆಸಲಿದೆ ಎಂದು ಪಕ್ಷದ ಮುಖಂಡ ಗೋಪಾಲ್ ರಾಯ್ ಸೋಮವಾರ ತಿಳಿಸಿದ್ದಾರೆ.
ದೆಹಲಿಯ 40 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುವ ‘ಸಂಕಲ್ಪ ಸಭೆ’ಗಳಲ್ಲಿ ಪಕ್ಷದ ಹಿರಿಯ ನಾಯಕರು ಮತ್ತು ಮಂತ್ರಿಗಳು ಭಾಗವಹಿಸಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಮತ್ತು ಗೋಪಾಲ್ ರಾಯ್ ಸಭೆಗಳ ನೇತೃತ್ವ ವಹಿಸಲಿದ್ದಾರೆ.