<p><strong>ಚಂಡೀಗಢ:</strong> ವರ್ಷಾಂತ್ಯದ ವೇಳೆಗೆ ಹರಿಯಾಣ ವಿಧಾನಸಭೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ, ಆಮ್ ಆದ್ಮಿ ಪಕ್ಷವು (ಎಎಪಿ) ರಾಜ್ಯದಲ್ಲಿ ಬುಧವಾರದಿಂದ ‘ಬದಲಾವ್ ಜನಸಂವಾದ್’ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಿದೆ. </p>.<p>ಈ ಕಾರ್ಯಕ್ರಮದ ಅವಧಿಯಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರು ರಾಜ್ಯದ ಪ್ರತಿಯೊಂದು ಗ್ರಾಮಕ್ಕೆ ತೆರಳಿ, ಪ್ರಚಲಿತ ವಿದ್ಯಮಾನಗಳ ಕುರಿತು ಜನರೊಂದಿಗೆ ಸಂವಾದ ನಡೆಸುವರು ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಹಾಗೂ ರಾಜ್ಯಸಭಾ ಸದಸ್ಯ ಸಂದೀಪ್ ಪಾಠಕ್ ಮಂಗಳವಾರ ಹೇಳಿದ್ದಾರೆ.</p>.<p>ಕರ್ನಾಲ್ನಲ್ಲಿ ಹಮ್ಮಿಕೊಂಡಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಜನರಿಗೆ ಉದ್ಯೋಗ ಸಿಕ್ಕಿದೆಯೇ? ರೈತರಿಗೆ ಪ್ರಯೋಜನಗಳು ಲಭಿಸಿವೆಯೇ? ಮುಂದಿನ ಸರ್ಕಾರ ಹೇಗಿರಬೇಕು ಎಂಬ ಬಗ್ಗೆ ಜನರ ನಿರೀಕ್ಷೆಗಳೇನು ಎಂಬುದೂ ಸೇರಿದಂತೆ ವಿವಿಧ ವಿಚಾರಗಳ ಕುರಿತು ಜನರೊಂದಿಗೆ ಸಂವಾದ ನಡೆಸಲಾಗುವುದು’ ಎಂದು ಹೇಳಿದ್ದಾರೆ.</p>.<p>‘ನೀವು ಇತರ ಪಕ್ಷಗಳಿಗೆ ಪದೇಪದೇ ಅವಕಾಶಗಳನ್ನು ನೀಡಿದ್ದರೂ, ಆ ಪಕ್ಷಗಳೆಲ್ಲಾ ನಿಮಗೆ ವಂಚಿಸಿವೆ ಎಂಬುದನ್ನು ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಜನರಿಗೆ ತಿಳಿಸುವರು. ಈ ಬಾರಿ ಹರಿಯಾಣ ದೊಡ್ಡ ಬದಲಾವಣೆ ನಿರೀಕ್ಷೆಯಲ್ಲಿದೆ ಎಂಬುದನ್ನು ಸಹ ಸಂವಾದದ ವೇಳೆ ಜನರಿಗೆ ಹೇಳುವರು’ ಎಂದು ಪಾಠಕ್ ತಿಳಿಸಿದರು.</p>.<p>‘ವಿಧಾನಸಭೆ ಚುನಾವಣೆಗೆ ಕೇವಲ ಮೂರು ತಿಂಗಳು ಬಾಕಿ ಇರುವ ಕಾರಣ ಎಲ್ಲರೂ ಸನ್ನದ್ಧರಾಗಬೇಕು’ ಎಂದು ಪಾಠಕ್ ಮತ್ತು ಪಕ್ಷದ ಹರಿಯಾಣ ಘಟಕದ ಅಧ್ಯಕ್ಷ ಸುಶೀಲ್ ಗುಪ್ತಾ ಅವರು ಕಾರ್ಯಕರ್ತರಿಗೆ ಸೂಚಿಸಿದರು.</p>.<p><strong>ಗೈರುಹಾಜರು:</strong> ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಕಾರ್ಯಕರ್ತರ ಸಭೆಗೆ ಹಾಜರಾಗಬೇಕಿತ್ತು. ದೆಹಲಿ ಹೈಕೋರ್ಟ್ನಲ್ಲಿ ಅರವಿಂದ ಕೇಜ್ರಿವಾಲ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದ ಕಾರಣ ಅವರು ಸಭೆಗೆ ಹಾಜರಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ:</strong> ವರ್ಷಾಂತ್ಯದ ವೇಳೆಗೆ ಹರಿಯಾಣ ವಿಧಾನಸಭೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ, ಆಮ್ ಆದ್ಮಿ ಪಕ್ಷವು (ಎಎಪಿ) ರಾಜ್ಯದಲ್ಲಿ ಬುಧವಾರದಿಂದ ‘ಬದಲಾವ್ ಜನಸಂವಾದ್’ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಿದೆ. </p>.<p>ಈ ಕಾರ್ಯಕ್ರಮದ ಅವಧಿಯಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರು ರಾಜ್ಯದ ಪ್ರತಿಯೊಂದು ಗ್ರಾಮಕ್ಕೆ ತೆರಳಿ, ಪ್ರಚಲಿತ ವಿದ್ಯಮಾನಗಳ ಕುರಿತು ಜನರೊಂದಿಗೆ ಸಂವಾದ ನಡೆಸುವರು ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಹಾಗೂ ರಾಜ್ಯಸಭಾ ಸದಸ್ಯ ಸಂದೀಪ್ ಪಾಠಕ್ ಮಂಗಳವಾರ ಹೇಳಿದ್ದಾರೆ.</p>.<p>ಕರ್ನಾಲ್ನಲ್ಲಿ ಹಮ್ಮಿಕೊಂಡಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಜನರಿಗೆ ಉದ್ಯೋಗ ಸಿಕ್ಕಿದೆಯೇ? ರೈತರಿಗೆ ಪ್ರಯೋಜನಗಳು ಲಭಿಸಿವೆಯೇ? ಮುಂದಿನ ಸರ್ಕಾರ ಹೇಗಿರಬೇಕು ಎಂಬ ಬಗ್ಗೆ ಜನರ ನಿರೀಕ್ಷೆಗಳೇನು ಎಂಬುದೂ ಸೇರಿದಂತೆ ವಿವಿಧ ವಿಚಾರಗಳ ಕುರಿತು ಜನರೊಂದಿಗೆ ಸಂವಾದ ನಡೆಸಲಾಗುವುದು’ ಎಂದು ಹೇಳಿದ್ದಾರೆ.</p>.<p>‘ನೀವು ಇತರ ಪಕ್ಷಗಳಿಗೆ ಪದೇಪದೇ ಅವಕಾಶಗಳನ್ನು ನೀಡಿದ್ದರೂ, ಆ ಪಕ್ಷಗಳೆಲ್ಲಾ ನಿಮಗೆ ವಂಚಿಸಿವೆ ಎಂಬುದನ್ನು ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಜನರಿಗೆ ತಿಳಿಸುವರು. ಈ ಬಾರಿ ಹರಿಯಾಣ ದೊಡ್ಡ ಬದಲಾವಣೆ ನಿರೀಕ್ಷೆಯಲ್ಲಿದೆ ಎಂಬುದನ್ನು ಸಹ ಸಂವಾದದ ವೇಳೆ ಜನರಿಗೆ ಹೇಳುವರು’ ಎಂದು ಪಾಠಕ್ ತಿಳಿಸಿದರು.</p>.<p>‘ವಿಧಾನಸಭೆ ಚುನಾವಣೆಗೆ ಕೇವಲ ಮೂರು ತಿಂಗಳು ಬಾಕಿ ಇರುವ ಕಾರಣ ಎಲ್ಲರೂ ಸನ್ನದ್ಧರಾಗಬೇಕು’ ಎಂದು ಪಾಠಕ್ ಮತ್ತು ಪಕ್ಷದ ಹರಿಯಾಣ ಘಟಕದ ಅಧ್ಯಕ್ಷ ಸುಶೀಲ್ ಗುಪ್ತಾ ಅವರು ಕಾರ್ಯಕರ್ತರಿಗೆ ಸೂಚಿಸಿದರು.</p>.<p><strong>ಗೈರುಹಾಜರು:</strong> ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಕಾರ್ಯಕರ್ತರ ಸಭೆಗೆ ಹಾಜರಾಗಬೇಕಿತ್ತು. ದೆಹಲಿ ಹೈಕೋರ್ಟ್ನಲ್ಲಿ ಅರವಿಂದ ಕೇಜ್ರಿವಾಲ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದ ಕಾರಣ ಅವರು ಸಭೆಗೆ ಹಾಜರಾಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>