<p><strong>ನವದೆಹಲಿ</strong>: ದೆಹಲಿ ವಿಧಾನಸಭಾ ಚುನಾವಣಾ ಅಖಾಡದಲ್ಲಿ ಆರೋಪ–ಪ್ರತ್ಯಾರೋಪಗಳು, ಪ್ರತಿಭಟನೆಗಳ ಅಬ್ಬರ ಜೋರಾಗಿದೆ.</p><p>ನಮ್ಮ ಪಕ್ಷದ ಶಾಸಕ ರುತುರಾಜ್ ಝಾ ಅವರ ಬಗ್ಗೆ ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಅವರು ರಾಷ್ಟ್ರೀಯ ಸುದ್ದಿವಾಹಿನಿಯೊಂದರ ಚರ್ಚೆ ವೇಳೆ ಅವಹೇಳನಕಾರಿ ಪದ ಬಳಸಿದ್ದಾರೆ ಎಂದು ಆರೋಪಿಸಿರುವ ಎಎಪಿ ಸಂಸದ ಸಂಜಯ್ ಸಿಂಗ್, ಈ ಸಂಬಂಧ ನಾಳೆ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ.</p><p>ಮಂಗಳವಾರ ರಾಷ್ಟ್ರೀಯ ಸುದ್ದಿವಾಹಿನಿಯೊಂದರ ಚರ್ಚೆ ಸಂದರ್ಭದಲ್ಲಿ ಪೂರ್ವಾಂಚಲ ಮೂಲದ ಝಾ ವಿರುದ್ಧ ಪೂನಾವಾಲಾ ಅಸಭ್ಯ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ. </p><p>‘ಮೈಥಿಲ್ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಝಾ ಅವರ ಬಗ್ಗೆ ಬಿಜೆಪಿ ವಕ್ತಾರರು ರಾಷ್ಟ್ರೀಯ ಸುದ್ದಿ ವಾಹಿನಿಯಲ್ಲಿ ಅವಹೇಳನಕಾರಿ ಪದ ಬಳಕೆ ಮಾಡಿದ್ದಾರೆ. ಈ ಬಗ್ಗೆ ಬಿಜೆಪಿ ಸಂಸದ ಮನೋಜ್ ತಿವಾರಿಯನ್ನು ಕೇಳಲು ಇಚ್ಛಿಸುತ್ತೇನೆ. ಮೈಥಿಲ್ ಬ್ರಾಹ್ಮಣ ಸಮುದಾಯದ ಶಾಸಕನನ್ನು ನಿಂದಿಸಲಾಗಿದೆ. ನೀವು ಎಲ್ಲಿದ್ದೀರಿ? ಏಕೆ ಮಾತನಾಡುತ್ತಿಲ್ಲ?’ಎಂದು ಸಂಜಯ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದ್ದಾರೆ.</p><p> ‘ಈ ಸಂಬಂಧ ದೆಹಲಿಯಾದ್ಯಂತ ಗುರುವಾರ ನಾವು ಪ್ರತಿಭಟನೆ ನಡೆಸುತ್ತೇವೆ. ಪೂರ್ವಾಂಚಲಿಗಳಿರುವ ಪ್ರದೇಶಗಳಲ್ಲಿ ಇಂದಿನಿಂದ ನಮ್ಮ ಸಭೆಗಳು ಆರಂಭವಾಗಲಿವೆ. ಈ ಅಪಮಾನದ ಬಗ್ಗೆ ನಾವು ಅವರಿಗೆ ತಿಳಿಸುತ್ತೇವೆ. ಈ ಸಂಬಂಧ ಬಿಜೆಪಿ ವಿರುದ್ಧ ಮತ ಚಲಾಯಿಸುವ ಮೂಲಕ ಸೇಡು ತೀರಿಸಿಕೊಳ್ಳುವಂತೆ ನಾನು ಅವರಲ್ಲಿ ಮನವಿ ಮಾಡುವೆ’ಎಂದಿದ್ದಾರೆ.</p> <p>70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಮತದಾನ ನಡೆಯಲಿದೆ. ಫೆಬ್ರುವವರಿ 8ರಂದು ಫಲಿತಾಂಶ ಹೊರಬೀಳಲಿದೆ.</p> .ನಾನು ಮೃತಪಟ್ಟರೆ ಎಎಪಿಯೇ ಕಾರಣ: ಉಪವಾಸ ಆರಂಭಿಸಿದ ಬಿಜೆಪಿಯ ಶೆಹಜಾದ್ ಪೂನಾವಾಲಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿ ವಿಧಾನಸಭಾ ಚುನಾವಣಾ ಅಖಾಡದಲ್ಲಿ ಆರೋಪ–ಪ್ರತ್ಯಾರೋಪಗಳು, ಪ್ರತಿಭಟನೆಗಳ ಅಬ್ಬರ ಜೋರಾಗಿದೆ.</p><p>ನಮ್ಮ ಪಕ್ಷದ ಶಾಸಕ ರುತುರಾಜ್ ಝಾ ಅವರ ಬಗ್ಗೆ ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಅವರು ರಾಷ್ಟ್ರೀಯ ಸುದ್ದಿವಾಹಿನಿಯೊಂದರ ಚರ್ಚೆ ವೇಳೆ ಅವಹೇಳನಕಾರಿ ಪದ ಬಳಸಿದ್ದಾರೆ ಎಂದು ಆರೋಪಿಸಿರುವ ಎಎಪಿ ಸಂಸದ ಸಂಜಯ್ ಸಿಂಗ್, ಈ ಸಂಬಂಧ ನಾಳೆ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ.</p><p>ಮಂಗಳವಾರ ರಾಷ್ಟ್ರೀಯ ಸುದ್ದಿವಾಹಿನಿಯೊಂದರ ಚರ್ಚೆ ಸಂದರ್ಭದಲ್ಲಿ ಪೂರ್ವಾಂಚಲ ಮೂಲದ ಝಾ ವಿರುದ್ಧ ಪೂನಾವಾಲಾ ಅಸಭ್ಯ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ. </p><p>‘ಮೈಥಿಲ್ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಝಾ ಅವರ ಬಗ್ಗೆ ಬಿಜೆಪಿ ವಕ್ತಾರರು ರಾಷ್ಟ್ರೀಯ ಸುದ್ದಿ ವಾಹಿನಿಯಲ್ಲಿ ಅವಹೇಳನಕಾರಿ ಪದ ಬಳಕೆ ಮಾಡಿದ್ದಾರೆ. ಈ ಬಗ್ಗೆ ಬಿಜೆಪಿ ಸಂಸದ ಮನೋಜ್ ತಿವಾರಿಯನ್ನು ಕೇಳಲು ಇಚ್ಛಿಸುತ್ತೇನೆ. ಮೈಥಿಲ್ ಬ್ರಾಹ್ಮಣ ಸಮುದಾಯದ ಶಾಸಕನನ್ನು ನಿಂದಿಸಲಾಗಿದೆ. ನೀವು ಎಲ್ಲಿದ್ದೀರಿ? ಏಕೆ ಮಾತನಾಡುತ್ತಿಲ್ಲ?’ಎಂದು ಸಂಜಯ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದ್ದಾರೆ.</p><p> ‘ಈ ಸಂಬಂಧ ದೆಹಲಿಯಾದ್ಯಂತ ಗುರುವಾರ ನಾವು ಪ್ರತಿಭಟನೆ ನಡೆಸುತ್ತೇವೆ. ಪೂರ್ವಾಂಚಲಿಗಳಿರುವ ಪ್ರದೇಶಗಳಲ್ಲಿ ಇಂದಿನಿಂದ ನಮ್ಮ ಸಭೆಗಳು ಆರಂಭವಾಗಲಿವೆ. ಈ ಅಪಮಾನದ ಬಗ್ಗೆ ನಾವು ಅವರಿಗೆ ತಿಳಿಸುತ್ತೇವೆ. ಈ ಸಂಬಂಧ ಬಿಜೆಪಿ ವಿರುದ್ಧ ಮತ ಚಲಾಯಿಸುವ ಮೂಲಕ ಸೇಡು ತೀರಿಸಿಕೊಳ್ಳುವಂತೆ ನಾನು ಅವರಲ್ಲಿ ಮನವಿ ಮಾಡುವೆ’ಎಂದಿದ್ದಾರೆ.</p> <p>70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಮತದಾನ ನಡೆಯಲಿದೆ. ಫೆಬ್ರುವವರಿ 8ರಂದು ಫಲಿತಾಂಶ ಹೊರಬೀಳಲಿದೆ.</p> .ನಾನು ಮೃತಪಟ್ಟರೆ ಎಎಪಿಯೇ ಕಾರಣ: ಉಪವಾಸ ಆರಂಭಿಸಿದ ಬಿಜೆಪಿಯ ಶೆಹಜಾದ್ ಪೂನಾವಾಲಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>