<p><strong>ನವದೆಹಲಿ:</strong> ಪಂಜಾಬ್ ಮತ್ತು ಗುಜರಾತ್ನಲ್ಲಿ ನಡೆದ ಉಪಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಗೆಲುವು ಈ ರಾಜ್ಯಗಳಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಸೆಮಿಫೈನಲ್ ಆಗಿದೆ ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಬುಧವಾರ ಹೇಳಿದ್ದಾರೆ.</p><p>ಗುಜರಾತ್ನ ವಿಸಾವದರ ಮತ್ತು ಪಂಜಾಬ್ನ ಲುಧಿಯಾನ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎಎಪಿ ಗೆಲುವು ಸಾಧಿಸಿದೆ. ಈ ಹಿನ್ನೆಲೆ ಪಕ್ಷವು ಆಯೋಜಿಸಿದ್ದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕೇಜ್ರಿವಾಲ್ ಮಾತನಾಡಿದರು.</p><p>ಕಳೆದ ಮೂರು ವರ್ಷಗಳಿಂದ ಪಂಜಾಬ್ನಲ್ಲಿ ಸರ್ಕಾರ ನಡೆಸುತ್ತಿದ್ದೇವೆ. ಪಂಜಾಬ್ನಲ್ಲಿ ಆಡಳಿತ ವಿರೋಧಿ ಅಲೆಯಲ್ಲ ಆಡಳಿತ ಪರ ಅಲೆ ಇದೆ. 2022 ರ ವಿಧಾನಸಭಾ ಚುನಾವಣೆಯಲ್ಲಿ ನಾವು 92 ಸ್ಥಾನಗಳನ್ನು ಗೆದ್ದಿದ್ದೆವು. 2027ರ ವಿಧಾನಸಭಾ ಚುನಾವಣೆಯಲ್ಲಿ ಪಂಜಾಬ್ನಲ್ಲಿ 100ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಸರ್ಕಾರ ರಚಿಸುತ್ತೇವೆ ಎಂದರು.</p><p>‘ಗುಜರಾತ್ನಲ್ಲಿ ಎಎಪಿ ವ್ಯವಸ್ಥೆಯ ವಿರುದ್ಧ ಹೋರಾಡುತ್ತಿದೆ, ಜನರಿಗೆ ಪ್ರಾಮಾಣಿಕ ರಾಜಕೀಯವನ್ನು ನೀಡಲು ಬಂದಿದ್ದೇವೆ. ಗುಜರಾತ್ನಲ್ಲಿ ಬಿಜೆಪಿಯ ಆಡಳಿತದಿಂದ ಜನರು ಬೇಸತ್ತು ಹೋಗಿದ್ದಾರೆ. ಈ ಮೊದಲು ಅವರಿಗೆ ಬೇರೆ ಆಯ್ಕೆಗಳಿರಲಿಲ್ಲ. ಗುಜರಾತ್ನ ಜನ ಕಾಂಗ್ರೆಸ್ ಅನ್ನು ಆಯ್ಕೆಯಾಗಿ ಇಟ್ಟುಕೊಂಡಿಲ್ಲ. ಬದಲಾಗಿ ಎಎಪಿಯತ್ತ ನೋಡುತ್ತಿದ್ದಾರೆ. ಪಕ್ಷದ ಮೇಲೂ ಭರವಸೆಯನ್ನು ಇಟ್ಟುಕೊಂಡಿದ್ದಾರೆ. 2027ರಲ್ಲಿ ಗುಜರಾತ್ನಲ್ಲಿ ನಾವು ಸರ್ಕಾರ ರಚಿಸುತ್ತೇವೆ’ ಎಂದು ಕೇಜ್ರಿವಾಲ್ ಹೇಳಿದ್ದಾರೆ.</p>.Punjab Assembly Bypolls | ಲುಧಿಯಾನದಲ್ಲಿ ಗೆದ್ದು ಕ್ಷೇತ್ರ ಉಳಿಸಿಕೊಂಡ ಎಎಪಿ.Gujarat Assembly Bypolls: ಬಿಜೆಪಿ, ಎಎಪಿ ತೆಕ್ಕೆಗೆ ತಲಾ ಒಂದು ಕ್ಷೇತ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಂಜಾಬ್ ಮತ್ತು ಗುಜರಾತ್ನಲ್ಲಿ ನಡೆದ ಉಪಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಗೆಲುವು ಈ ರಾಜ್ಯಗಳಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಸೆಮಿಫೈನಲ್ ಆಗಿದೆ ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಬುಧವಾರ ಹೇಳಿದ್ದಾರೆ.</p><p>ಗುಜರಾತ್ನ ವಿಸಾವದರ ಮತ್ತು ಪಂಜಾಬ್ನ ಲುಧಿಯಾನ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎಎಪಿ ಗೆಲುವು ಸಾಧಿಸಿದೆ. ಈ ಹಿನ್ನೆಲೆ ಪಕ್ಷವು ಆಯೋಜಿಸಿದ್ದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕೇಜ್ರಿವಾಲ್ ಮಾತನಾಡಿದರು.</p><p>ಕಳೆದ ಮೂರು ವರ್ಷಗಳಿಂದ ಪಂಜಾಬ್ನಲ್ಲಿ ಸರ್ಕಾರ ನಡೆಸುತ್ತಿದ್ದೇವೆ. ಪಂಜಾಬ್ನಲ್ಲಿ ಆಡಳಿತ ವಿರೋಧಿ ಅಲೆಯಲ್ಲ ಆಡಳಿತ ಪರ ಅಲೆ ಇದೆ. 2022 ರ ವಿಧಾನಸಭಾ ಚುನಾವಣೆಯಲ್ಲಿ ನಾವು 92 ಸ್ಥಾನಗಳನ್ನು ಗೆದ್ದಿದ್ದೆವು. 2027ರ ವಿಧಾನಸಭಾ ಚುನಾವಣೆಯಲ್ಲಿ ಪಂಜಾಬ್ನಲ್ಲಿ 100ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಸರ್ಕಾರ ರಚಿಸುತ್ತೇವೆ ಎಂದರು.</p><p>‘ಗುಜರಾತ್ನಲ್ಲಿ ಎಎಪಿ ವ್ಯವಸ್ಥೆಯ ವಿರುದ್ಧ ಹೋರಾಡುತ್ತಿದೆ, ಜನರಿಗೆ ಪ್ರಾಮಾಣಿಕ ರಾಜಕೀಯವನ್ನು ನೀಡಲು ಬಂದಿದ್ದೇವೆ. ಗುಜರಾತ್ನಲ್ಲಿ ಬಿಜೆಪಿಯ ಆಡಳಿತದಿಂದ ಜನರು ಬೇಸತ್ತು ಹೋಗಿದ್ದಾರೆ. ಈ ಮೊದಲು ಅವರಿಗೆ ಬೇರೆ ಆಯ್ಕೆಗಳಿರಲಿಲ್ಲ. ಗುಜರಾತ್ನ ಜನ ಕಾಂಗ್ರೆಸ್ ಅನ್ನು ಆಯ್ಕೆಯಾಗಿ ಇಟ್ಟುಕೊಂಡಿಲ್ಲ. ಬದಲಾಗಿ ಎಎಪಿಯತ್ತ ನೋಡುತ್ತಿದ್ದಾರೆ. ಪಕ್ಷದ ಮೇಲೂ ಭರವಸೆಯನ್ನು ಇಟ್ಟುಕೊಂಡಿದ್ದಾರೆ. 2027ರಲ್ಲಿ ಗುಜರಾತ್ನಲ್ಲಿ ನಾವು ಸರ್ಕಾರ ರಚಿಸುತ್ತೇವೆ’ ಎಂದು ಕೇಜ್ರಿವಾಲ್ ಹೇಳಿದ್ದಾರೆ.</p>.Punjab Assembly Bypolls | ಲುಧಿಯಾನದಲ್ಲಿ ಗೆದ್ದು ಕ್ಷೇತ್ರ ಉಳಿಸಿಕೊಂಡ ಎಎಪಿ.Gujarat Assembly Bypolls: ಬಿಜೆಪಿ, ಎಎಪಿ ತೆಕ್ಕೆಗೆ ತಲಾ ಒಂದು ಕ್ಷೇತ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>