‘ಇಡೀ ದಿನ ಕಾರ್ಯಕರ್ತರು ಹಾಗೂ ನಾಯಕರನ್ನು ವಶಕ್ಕೆ ಪಡೆಯಲಾಗಿದೆ. ಇಡೀ ದೇಶ ಕೇಜ್ರಿವಾಲ್ ಅವರ ಬಂಧನಕ್ಕೆ ಆಕ್ರೋಶ ಹಾಗೂ ದುಃಖ ವ್ಯಕ್ತಪಡಿಸಿದೆ. ಶನಿವಾರ ಬೆಳಿಗ್ಗೆ 10 ಗಂಟೆಗೆ ಎಎಪಿಯ ಎಲ್ಲಾ ಶಾಸಕರು, ಕೌನ್ಸಿಲರ್ಗಳು, ಸಿಬ್ಬಂದಿಗಳು, ಇಂಡಿಯಾ ಮೈತ್ರಿಕೂಟದ ಪ್ರತಿನಿಧಿಗಳು ಪ್ರಜಾಪ್ರಭುತ್ವ ಉಳಿಸುವ ಪ್ರತಿಜ್ಞೆ ಮಾಡಲಿದ್ದೇವೆ. ಭಗತ್ಸಿಂಗ್, ರಾಜಗುರು, ಸುಖದೇವ್ ಅವರ ಹುತಾತ್ಮ ದಿನವಾದ ಶನಿವಾರದಂದು ಶಹೀದಿ ಪಾರ್ಕ್ನಲ್ಲಿ ನಾವು ಸಮಾವೇಶಗೊಳ್ಳಲಿದ್ದೇವೆ. ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ರೈ ಹೇಳಿದ್ದಾರೆ.