<p><strong>ನವದೆಹಲಿ:</strong> ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಎಎಪಿ ಅಧಿಕಾರದಲ್ಲಿದ್ದಾಗಲೂ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವನ್ನು ತಡೆಯಲಾಗಲಿಲ್ಲ ಎಂದು ಜರಿದಿರುವ ಕಾಂಗ್ರೆಸ್ ಖಜಾಂಚಿ ಅಜಯ್ ಮಾಕನ್, ಎಎಪಿಯ ಬೆಳವಣಿಗೆಯಿಂದ ಕೇಸರಿ ಪಾಳಯಕ್ಕೆ ಮಾತ್ರ ಪ್ರಯೋಜನ ಎಂದು ವಾಗ್ದಾಳಿ ನಡೆಸಿದರು.</p>.<p>ಕಾಂಗ್ರೆಸ್ನ ನೂತನ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>‘ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರನ್ನು ದೇಶ ವಿರೋಧಿ ಎಂದು ನಾನು ಈ ಹಿಂದೆ ನೀಡಿದ್ದ ಹೇಳಿಕೆಗೆ ಈಗಲೂ ಬದ್ಧನಿದ್ದೇನೆ. ಆದರೆ ಇದು ನನ್ನ ವೈಯಕ್ತಿಕ ಅಭಿಪ್ರಾಯವಷ್ಟೇ’ ಎಂದು ಅವರು ಪ್ರತಿಕ್ರಿಯಿಸಿದರು.</p>.<p>‘ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ, ಅಲ್ಲಿನ ಏಳೂ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಜಯಿಸಿದ್ದೆವು. ಈ ಮೂಲಕ ರಾಷ್ಟ್ರಮಟ್ಟದಲ್ಲಿ ಬಿಜೆಪಿ ಬೆಳವಣಿಗೆಗೆ ತಡೆಯೊಡ್ಡಿದ್ದೆವು. ಆದರೆ ಎಎಪಿ ಅವಧಿಯಲ್ಲಿ ಅದು ಉಲ್ಟಾ ಆಗಿದೆ’ ಎಂದು ಅವರು ಆರೋಪಿಸಿದರು.</p>.<p>ದೆಹಲಿಯಲ್ಲಿ ಕಾಂಗ್ರೆಸ್ ಅನ್ನು ದುರ್ಬಲಗೊಳಿಸುವ ಮೂಲಕ ಬಿಜೆಪಿಯನ್ನು ಎದುರಿಸಬಹುದು ಎಂದು ಯಾರಾದರೂ ಅಂದುಕೊಂಡಿದ್ದರೆ ಅದು ಸರಿಯಲ್ಲ ಎಂದು ಅವರು ಹೇಳಿದರು.</p>.<p>ದೆಹಲಿ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದರೆ ಎಎಪಿಯನ್ನು ಕಾಂಗ್ರೆಸ್ ಬೆಂಬಲಿಸುತ್ತದೆಯೇ ಎಂಬ ಪ್ರಶ್ನೆಗೆ, ‘ಕೇಜ್ರಿವಾಲ್ ಬೆಳೆದರೆ, ಅದರಿಂದ ಬಿಜೆಪಿಗೆ ಅನುಕೂಲವಾಗುತ್ತದೆ. ಬಿಜೆಪಿಯನ್ನು ಸೋಲಿಸಲು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಅನ್ನು ಬಲಿಷ್ಠಗೊಳಿಸಬೇಕಾದ ಅನಿವಾರ್ಯತೆಯಿದೆ. ರಾಜಧಾನಿಯಲ್ಲಿ ನಮ್ಮ ಸಂಘಟನೆ ದುರ್ಬಲವಾಗಿದ್ದರೆ, ಬಿಜೆಪಿಯನ್ನು ಕಟ್ಟಿಹಾಕುವುದು ಅಸಾಧ್ಯ’ ಎಂದರು.</p>.<p>‘2013ರಲ್ಲಿ ಕೇಜ್ರಿವಾಲ್ ಅವರ 49 ದಿನಗಳ ಸರ್ಕಾರಕ್ಕೆ ಬೆಂಬಲ ನೀಡಿದ್ದರಿಂದ ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ ಎಎಪಿ ಜತೆ ಮೈತ್ರಿ ಮಾಡಿಕೊಂಡಿದ್ದರಿಂದ ಕಾಂಗ್ರೆಸ್ ತೊಂದರೆ ಅನುಭವಿಸಿದೆ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ’ ಎಂದು ಅವರು ತಿಳಿಸಿದರು.</p>.<p>ಕೇಜ್ರಿವಾಲ್ ಅವರು ಜೈಲಿನಿಂದ ಹೊರಬಂದ ಮರು ದಿನವೇ ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಲ್ಲಿ ಎಎಪಿ ಸ್ಪರ್ಧಿಸಲಿದೆ ಎಂದು ಏಕಪಕ್ಷೀಯವಾಗಿ ಘೋಷಿಸಿದ್ದರು. ಅದೂ ಸೀಟು ಹಂಚಿಕೆ ಕುರಿತ ಮಾತುಕತೆ ಅಂತಿಮ ಹಂತದಲ್ಲಿದ್ದಾಗ ಈ ರೀತಿ ನಡೆದುಕೊಂಡಿದ್ದರು. ಅದೇ ರೀತಿ ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಒಂದು ದಿನ ಬಳಿಕ ಎಎಪಿಯು ದೆಹಲಿ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ದಿಸುವುದಾಗಿ ಘೋಷಿಸಿತ್ತು ಎಂದು ಮಾಕನ್ ನೆನಪು ಮಾಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಎಎಪಿ ಅಧಿಕಾರದಲ್ಲಿದ್ದಾಗಲೂ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವನ್ನು ತಡೆಯಲಾಗಲಿಲ್ಲ ಎಂದು ಜರಿದಿರುವ ಕಾಂಗ್ರೆಸ್ ಖಜಾಂಚಿ ಅಜಯ್ ಮಾಕನ್, ಎಎಪಿಯ ಬೆಳವಣಿಗೆಯಿಂದ ಕೇಸರಿ ಪಾಳಯಕ್ಕೆ ಮಾತ್ರ ಪ್ರಯೋಜನ ಎಂದು ವಾಗ್ದಾಳಿ ನಡೆಸಿದರು.</p>.<p>ಕಾಂಗ್ರೆಸ್ನ ನೂತನ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.</p>.<p>‘ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರನ್ನು ದೇಶ ವಿರೋಧಿ ಎಂದು ನಾನು ಈ ಹಿಂದೆ ನೀಡಿದ್ದ ಹೇಳಿಕೆಗೆ ಈಗಲೂ ಬದ್ಧನಿದ್ದೇನೆ. ಆದರೆ ಇದು ನನ್ನ ವೈಯಕ್ತಿಕ ಅಭಿಪ್ರಾಯವಷ್ಟೇ’ ಎಂದು ಅವರು ಪ್ರತಿಕ್ರಿಯಿಸಿದರು.</p>.<p>‘ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ, ಅಲ್ಲಿನ ಏಳೂ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಜಯಿಸಿದ್ದೆವು. ಈ ಮೂಲಕ ರಾಷ್ಟ್ರಮಟ್ಟದಲ್ಲಿ ಬಿಜೆಪಿ ಬೆಳವಣಿಗೆಗೆ ತಡೆಯೊಡ್ಡಿದ್ದೆವು. ಆದರೆ ಎಎಪಿ ಅವಧಿಯಲ್ಲಿ ಅದು ಉಲ್ಟಾ ಆಗಿದೆ’ ಎಂದು ಅವರು ಆರೋಪಿಸಿದರು.</p>.<p>ದೆಹಲಿಯಲ್ಲಿ ಕಾಂಗ್ರೆಸ್ ಅನ್ನು ದುರ್ಬಲಗೊಳಿಸುವ ಮೂಲಕ ಬಿಜೆಪಿಯನ್ನು ಎದುರಿಸಬಹುದು ಎಂದು ಯಾರಾದರೂ ಅಂದುಕೊಂಡಿದ್ದರೆ ಅದು ಸರಿಯಲ್ಲ ಎಂದು ಅವರು ಹೇಳಿದರು.</p>.<p>ದೆಹಲಿ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದರೆ ಎಎಪಿಯನ್ನು ಕಾಂಗ್ರೆಸ್ ಬೆಂಬಲಿಸುತ್ತದೆಯೇ ಎಂಬ ಪ್ರಶ್ನೆಗೆ, ‘ಕೇಜ್ರಿವಾಲ್ ಬೆಳೆದರೆ, ಅದರಿಂದ ಬಿಜೆಪಿಗೆ ಅನುಕೂಲವಾಗುತ್ತದೆ. ಬಿಜೆಪಿಯನ್ನು ಸೋಲಿಸಲು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಅನ್ನು ಬಲಿಷ್ಠಗೊಳಿಸಬೇಕಾದ ಅನಿವಾರ್ಯತೆಯಿದೆ. ರಾಜಧಾನಿಯಲ್ಲಿ ನಮ್ಮ ಸಂಘಟನೆ ದುರ್ಬಲವಾಗಿದ್ದರೆ, ಬಿಜೆಪಿಯನ್ನು ಕಟ್ಟಿಹಾಕುವುದು ಅಸಾಧ್ಯ’ ಎಂದರು.</p>.<p>‘2013ರಲ್ಲಿ ಕೇಜ್ರಿವಾಲ್ ಅವರ 49 ದಿನಗಳ ಸರ್ಕಾರಕ್ಕೆ ಬೆಂಬಲ ನೀಡಿದ್ದರಿಂದ ಮತ್ತು 2024ರ ಲೋಕಸಭಾ ಚುನಾವಣೆಯಲ್ಲಿ ಎಎಪಿ ಜತೆ ಮೈತ್ರಿ ಮಾಡಿಕೊಂಡಿದ್ದರಿಂದ ಕಾಂಗ್ರೆಸ್ ತೊಂದರೆ ಅನುಭವಿಸಿದೆ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ’ ಎಂದು ಅವರು ತಿಳಿಸಿದರು.</p>.<p>ಕೇಜ್ರಿವಾಲ್ ಅವರು ಜೈಲಿನಿಂದ ಹೊರಬಂದ ಮರು ದಿನವೇ ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಲ್ಲಿ ಎಎಪಿ ಸ್ಪರ್ಧಿಸಲಿದೆ ಎಂದು ಏಕಪಕ್ಷೀಯವಾಗಿ ಘೋಷಿಸಿದ್ದರು. ಅದೂ ಸೀಟು ಹಂಚಿಕೆ ಕುರಿತ ಮಾತುಕತೆ ಅಂತಿಮ ಹಂತದಲ್ಲಿದ್ದಾಗ ಈ ರೀತಿ ನಡೆದುಕೊಂಡಿದ್ದರು. ಅದೇ ರೀತಿ ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಒಂದು ದಿನ ಬಳಿಕ ಎಎಪಿಯು ದೆಹಲಿ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ದಿಸುವುದಾಗಿ ಘೋಷಿಸಿತ್ತು ಎಂದು ಮಾಕನ್ ನೆನಪು ಮಾಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>