ನವದೆಹಲಿ: ರಾಜ್ಯಸಭೆಗೆ ಮರು ಆಯ್ಕೆಯಾಗಿರುವ ಎಎಪಿ ಮುಖಂಡ ಸಂಜಯ್ ಸಿಂಗ್ ಅವರು ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್ ಅವರಿಂದ ಎರಡನೇ ಅವಧಿಗೆ ಮಂಗಳವಾರ ಪ್ರಮಾಣವಚನ ಸ್ವೀಕರಿಸಿದರು.
ಸಂಸತ್ತಿನಲ್ಲಿರುವ ಧನಕರ್ ಅವರ ಕಚೇರಿಯಲ್ಲಿ ತಮ್ಮ ತಂದೆ, ತಾಯಿ, ಹೆಂಡತಿ, ಮಗ ಮತ್ತು ಮಗಳ ಸಮ್ಮುಖದಲ್ಲಿ ಸಂಜಯ್ ಸಿಂಗ್ ಅವರು ಪ್ರಮಾಣವಚನ ಪಡೆದುಕೊಂಡರು.
ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಗರಣದಲ್ಲಿನ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಸಂಜಯ್ ಸಿಂಗ್ ಬಂಧನಕ್ಕೆ ಒಳಗಾಗಿದ್ದರು. ಈಗ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಹೀಗಾಗಿ, ತಿಹಾರ್ ಕಾರಾಗೃಹದಲ್ಲಿದ್ದ ಸಿಂಗ್ ಅವರನ್ನು ಸ್ಥಳೀಯ ನ್ಯಾಯಾಲಯದ ಆದೇಶದ ಮೇರೆಗೆ ಬಿಗಿ ಬಂದೋಬಸ್ತ್ನಲ್ಲಿ ಸಂಸತ್ತಿಗೆ ಕರೆತರಲಾಯಿತು.