<p><strong>ಕೋಲ್ಕತ್ತ, ಪಶ್ಚಿಮ ಬಂಗಾಳ: ‘</strong>ಬಿಜೆಪಿಯು ಹೆಣದ ಮೇಲೆ ರಾಜಕೀಯ ಮಾಡುತ್ತಿದೆ’ ಎಂದು ತೃಣಮೂಲ ಕಾಂಗ್ರೆಸ್ನ ನಾಯಕ ಅಭಿಷೇಕ್ ಬ್ಯಾನರ್ಜಿ ಆರೋಪಿಸಿದ್ದಾರೆ.</p>.<p>ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಪ್ರಯುಕ್ತ ಪುರುಲಿಯಾ ಜಿಲ್ಲೆಯ ಬಲರಾಂ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸಂತಿರಾಮ್ ಮಹತೊ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಸೋಮವಾರ ಭಾಗವಹಿಸಿ ಅವರು ಮಾತನಾಡಿದರು.</p>.<p>‘2018ರಲ್ಲಿ ಬಿಜೆಪಿಯ ಇಬ್ಬರು ಕಾರ್ಯಕರ್ತರು ಅಸ್ವಾಭಾವಿಕವಾಗಿ ಮೃತಪಟ್ಟಿದ್ದರು. ಈ ಸಾವಿಗೆ ಟಿಎಂಸಿ ಪಕ್ಷವೇ ಕಾರಣ ಎಂದು ಆರೋಪಿಸಲಾಗಿತ್ತು. ಬಿಜೆಪಿಯ ಆಗಿನ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಸಂತ್ರಸ್ತರ ಮನೆಗೆ ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವ ಭರವಸೆ ನೀಡಿದ್ದರು. ಆದರೆ, ಇದುವರೆಗೂ ಆ ಕುಟುಂಬಕ್ಕೆ ಏನೂ ನೆರವು ನೀಡಿಲ್ಲ’ ಎಂದು ದೂರಿದ್ದಾರೆ.</p>.<p class="bodytext">‘ಪುರುಲಿಯಾದ ಬಿಜೆಪಿ ಸಂಸದ ಜ್ಯೋತಿರ್ಮಯಿ ಸಿಂಗ್ ಮಹತೊ ಹಾಗೂ ಬಿಜೆಪಿ ಅಭ್ಯರ್ಥಿ ಕೂಡ ಈ ಬಗ್ಗೆ ಜನರಿಗೆ ಸ್ಪಷ್ಟನೆ ನೀಡಬೇಕು. ಯಾವ ಕಾರಣಕ್ಕಾಗಿ ಉದ್ಯೋಗ ನೀಡಲು ಸಾಧ್ಯವಾಗಲಿಲ್ಲ ಎಂಬುದನ್ನು ವಿವರಿಸಬೇಕು. ಇಬ್ಬರ ಸಾವನ್ನು ರಾಜಕೀಯವಾಗಿ ಬಳಸಿಕೊಂಡ ಬಳಿಕ ಬಿಜೆಪಿ ನಾಯಕರು ಅವರ ಸಂಪರ್ಕವನ್ನು ಕಡಿದುಕೊಂಡಿದ್ದು ಏಕೆ ಎಂಬುದನ್ನು ತಿಳಿಸಬೇಕು’ ಎಂದು ಒತ್ತಾಯಿಸಿದ್ದಾರೆ. </p>.<p class="bodytext">‘ಈ ಸಾವಿನ ಹಿಂದೆ ಟಿಎಂಸಿಯ ಯಾವುದೇ ಕೈವಾಡವಿಲ್ಲ. ಇದೊಂದು ದುರಂತವಾಗಿದ್ದು, ಬಿಜೆಪಿಯು ಈ ಬೆಳವಣಿಗೆಯನ್ನು ಬಳಸಿಕೊಳ್ಳುವ ಮೂಲಕ ಮೃತರಿಗೆ ಅಗೌರವ ತೋರಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ, ಪಶ್ಚಿಮ ಬಂಗಾಳ: ‘</strong>ಬಿಜೆಪಿಯು ಹೆಣದ ಮೇಲೆ ರಾಜಕೀಯ ಮಾಡುತ್ತಿದೆ’ ಎಂದು ತೃಣಮೂಲ ಕಾಂಗ್ರೆಸ್ನ ನಾಯಕ ಅಭಿಷೇಕ್ ಬ್ಯಾನರ್ಜಿ ಆರೋಪಿಸಿದ್ದಾರೆ.</p>.<p>ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಪ್ರಯುಕ್ತ ಪುರುಲಿಯಾ ಜಿಲ್ಲೆಯ ಬಲರಾಂ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸಂತಿರಾಮ್ ಮಹತೊ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಸೋಮವಾರ ಭಾಗವಹಿಸಿ ಅವರು ಮಾತನಾಡಿದರು.</p>.<p>‘2018ರಲ್ಲಿ ಬಿಜೆಪಿಯ ಇಬ್ಬರು ಕಾರ್ಯಕರ್ತರು ಅಸ್ವಾಭಾವಿಕವಾಗಿ ಮೃತಪಟ್ಟಿದ್ದರು. ಈ ಸಾವಿಗೆ ಟಿಎಂಸಿ ಪಕ್ಷವೇ ಕಾರಣ ಎಂದು ಆರೋಪಿಸಲಾಗಿತ್ತು. ಬಿಜೆಪಿಯ ಆಗಿನ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಸಂತ್ರಸ್ತರ ಮನೆಗೆ ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವ ಭರವಸೆ ನೀಡಿದ್ದರು. ಆದರೆ, ಇದುವರೆಗೂ ಆ ಕುಟುಂಬಕ್ಕೆ ಏನೂ ನೆರವು ನೀಡಿಲ್ಲ’ ಎಂದು ದೂರಿದ್ದಾರೆ.</p>.<p class="bodytext">‘ಪುರುಲಿಯಾದ ಬಿಜೆಪಿ ಸಂಸದ ಜ್ಯೋತಿರ್ಮಯಿ ಸಿಂಗ್ ಮಹತೊ ಹಾಗೂ ಬಿಜೆಪಿ ಅಭ್ಯರ್ಥಿ ಕೂಡ ಈ ಬಗ್ಗೆ ಜನರಿಗೆ ಸ್ಪಷ್ಟನೆ ನೀಡಬೇಕು. ಯಾವ ಕಾರಣಕ್ಕಾಗಿ ಉದ್ಯೋಗ ನೀಡಲು ಸಾಧ್ಯವಾಗಲಿಲ್ಲ ಎಂಬುದನ್ನು ವಿವರಿಸಬೇಕು. ಇಬ್ಬರ ಸಾವನ್ನು ರಾಜಕೀಯವಾಗಿ ಬಳಸಿಕೊಂಡ ಬಳಿಕ ಬಿಜೆಪಿ ನಾಯಕರು ಅವರ ಸಂಪರ್ಕವನ್ನು ಕಡಿದುಕೊಂಡಿದ್ದು ಏಕೆ ಎಂಬುದನ್ನು ತಿಳಿಸಬೇಕು’ ಎಂದು ಒತ್ತಾಯಿಸಿದ್ದಾರೆ. </p>.<p class="bodytext">‘ಈ ಸಾವಿನ ಹಿಂದೆ ಟಿಎಂಸಿಯ ಯಾವುದೇ ಕೈವಾಡವಿಲ್ಲ. ಇದೊಂದು ದುರಂತವಾಗಿದ್ದು, ಬಿಜೆಪಿಯು ಈ ಬೆಳವಣಿಗೆಯನ್ನು ಬಳಸಿಕೊಳ್ಳುವ ಮೂಲಕ ಮೃತರಿಗೆ ಅಗೌರವ ತೋರಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>