<p><strong>ನವದೆಹಲಿ: ‘</strong>ಆಪರೇಷನ್ ಸಿಂಧೂರ’ದ ನಂತರ ರಾಜತಾಂತ್ರಿಕ ಕಾರ್ಯಾಚರಣೆಯ ಭಾಗವಾಗಿ ವಿದೇಶಗಳಿಗೆ ಕಳುಹಿಸುತ್ತಿರುವ ಸರ್ವ ಪಕ್ಷಗಳ ನಿಯೋಗಗಳಿಗೆ ಸಂಸದರನ್ನು ಆಯ್ಕೆ ಮಾಡಿರುವ ರೀತಿಗೆ ತಮ್ಮದೇ ಪಕ್ಷದ ಆಕ್ಷೇಪ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಪಕ್ಷಗಳ ಧೋರಣೆಗೆ ಪ್ರತಿಕ್ರಿಯಿಸಲು ಕಾಂಗ್ರೆಸ್ ನಾಯಕ ಶಶಿ ತರೂರ್ ಸೋಮವಾರ ನಿರಾಕರಿಸಿದ್ದಾರೆ.</p>.<p>ಪಹಲ್ಗಾಮ್ನಲ್ಲಿ ನಡೆದ ದಾಳಿಯ ನಂತರ ಭಾರತ-ಪಾಕಿಸ್ತಾನ ಮಿಲಿಟರಿ ಸಂಘರ್ಷದ ಬಗ್ಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರಿಂದ ವಿವರಣೆ ಪಡೆಯುವ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ವಿದೇಶಾಂಗ ವ್ಯವಹಾರಗಳ ಸಂಸತ್ತಿನ ಸ್ಥಾಯಿ ಸಮಿತಿಯ ಅಧ್ಯಕ್ಷರೂ ಆದ ತರೂರ್ ‘ನಾನು ಖಂಡಿತವಾಗಿಯೂ ಆ ವಿಷಯದ ಬಗ್ಗೆ ಮಾತನಾಡುವುದಿಲ್ಲ’ ಎಂದು ಸುದ್ದಿಗಾರರಿಗೆ ತಿಳಿಸಿದರು.</p>.<p>ಬಿಜೆಪಿ ನೇತೃತ್ವದ ಸರ್ಕಾರವು ಸರ್ವಪಕ್ಷಗಳ ಏಳು ನಿಯೋಗಗಳಲ್ಲಿ, ಒಂದು ನಿಯೋಗ ಮುನ್ನಡೆಸಲು ತರೂರ್ ಅವರನ್ನು ಮುಖ್ಯಸ್ಥರಾಗಿ ಆಯ್ಕೆ ಮಾಡಿದೆ. ತರೂರ್ ಅವರ ತಂಡವು ಅಮೆರಿಕ ಮತ್ತು ಇತರ ನಾಲ್ಕು ದೇಶಗಳಿಗೆ ಭೇಟಿ ನೀಡಲಿದೆ.</p>.<p>ಸರ್ವ ಪಕ್ಷಗಳ ನಿಯೋಗಕ್ಕೆ ಕಾಂಗ್ರೆಸ್ ಸೂಚಿಸಿದ ನಾಲ್ವರ ಹೆಸರಲ್ಲಿ ತರೂರ್ ಹೆಸರು ಇರಲಿಲ್ಲ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: ‘</strong>ಆಪರೇಷನ್ ಸಿಂಧೂರ’ದ ನಂತರ ರಾಜತಾಂತ್ರಿಕ ಕಾರ್ಯಾಚರಣೆಯ ಭಾಗವಾಗಿ ವಿದೇಶಗಳಿಗೆ ಕಳುಹಿಸುತ್ತಿರುವ ಸರ್ವ ಪಕ್ಷಗಳ ನಿಯೋಗಗಳಿಗೆ ಸಂಸದರನ್ನು ಆಯ್ಕೆ ಮಾಡಿರುವ ರೀತಿಗೆ ತಮ್ಮದೇ ಪಕ್ಷದ ಆಕ್ಷೇಪ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಪಕ್ಷಗಳ ಧೋರಣೆಗೆ ಪ್ರತಿಕ್ರಿಯಿಸಲು ಕಾಂಗ್ರೆಸ್ ನಾಯಕ ಶಶಿ ತರೂರ್ ಸೋಮವಾರ ನಿರಾಕರಿಸಿದ್ದಾರೆ.</p>.<p>ಪಹಲ್ಗಾಮ್ನಲ್ಲಿ ನಡೆದ ದಾಳಿಯ ನಂತರ ಭಾರತ-ಪಾಕಿಸ್ತಾನ ಮಿಲಿಟರಿ ಸಂಘರ್ಷದ ಬಗ್ಗೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರಿಂದ ವಿವರಣೆ ಪಡೆಯುವ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ವಿದೇಶಾಂಗ ವ್ಯವಹಾರಗಳ ಸಂಸತ್ತಿನ ಸ್ಥಾಯಿ ಸಮಿತಿಯ ಅಧ್ಯಕ್ಷರೂ ಆದ ತರೂರ್ ‘ನಾನು ಖಂಡಿತವಾಗಿಯೂ ಆ ವಿಷಯದ ಬಗ್ಗೆ ಮಾತನಾಡುವುದಿಲ್ಲ’ ಎಂದು ಸುದ್ದಿಗಾರರಿಗೆ ತಿಳಿಸಿದರು.</p>.<p>ಬಿಜೆಪಿ ನೇತೃತ್ವದ ಸರ್ಕಾರವು ಸರ್ವಪಕ್ಷಗಳ ಏಳು ನಿಯೋಗಗಳಲ್ಲಿ, ಒಂದು ನಿಯೋಗ ಮುನ್ನಡೆಸಲು ತರೂರ್ ಅವರನ್ನು ಮುಖ್ಯಸ್ಥರಾಗಿ ಆಯ್ಕೆ ಮಾಡಿದೆ. ತರೂರ್ ಅವರ ತಂಡವು ಅಮೆರಿಕ ಮತ್ತು ಇತರ ನಾಲ್ಕು ದೇಶಗಳಿಗೆ ಭೇಟಿ ನೀಡಲಿದೆ.</p>.<p>ಸರ್ವ ಪಕ್ಷಗಳ ನಿಯೋಗಕ್ಕೆ ಕಾಂಗ್ರೆಸ್ ಸೂಚಿಸಿದ ನಾಲ್ವರ ಹೆಸರಲ್ಲಿ ತರೂರ್ ಹೆಸರು ಇರಲಿಲ್ಲ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>