<p><strong>ಜೈಪುರ</strong>: ಸಾಮಾನ್ಯವಾಗಿ ಆರೋಪಿಗಳನ್ನು ಪತ್ತೆ ಮಾಡಲು ಪೊಲೀಸ್ ಇಲಾಖೆ ಲಕ್ಷಗಟ್ಟಲೆ ಹಣವನ್ನು ಬಹುಮಾನವಾಗಿ ನೀಡುವುದಾಗಿ ಘೋಷಣೆ ಮಾಡುತ್ತದೆ. ಆದರೆ ರಾಜಸ್ಥಾನದಲ್ಲಿ ಆರೋಪಿಯೊಬ್ಬನ ಪತ್ತೆ ಮಾಡಿದರೆ 50 ಪೈಸೆ ಬಹುಮಾನ ನೀಡುವುದಾಗಿ ಘೋಷಿಸಲಾಗಿದೆ.</p><p>ಇಲ್ಲಿಯ ಸಿಂಘನಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಆರೋಪಿಯಾಗಿರುವ ಯೋಗೇಶ್ ಮೇಘವಾಲ್ ಪತ್ತೆಗೆ ಈ ಕ್ರಮ ಕೈಗೊಳ್ಳಲಾಗಿದೆ. </p><p>ಜುಂಜುನು ಪ್ರದೇಶದ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ವಿಷ್ಣೋಯ್ ಅವರು ಈ ಹೊಸ ಪ್ರಯೋಗ ಮಾಡಿದ್ದು, ಆರೋಪಿಯನ್ನು ಪತ್ತೆ ಮಾಡಿದರೆ ಅಥವಾ ಆರೋಪಿ ಇರುವ ಸ್ಥಳದ ಬಗ್ಗೆ ಸರಿಯಾದ ಮಾಹಿತಿ ನೀಡಿದರೆ 50 ಪೈಸೆ ಬಹುಮಾನ ನೀಡುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ.</p><p>ಈ ಮೂಲಕ, ‘ಸಮಾಜದಲ್ಲಿ ಆರೋಪಿಯ ಸ್ಥಾನಮಾನವು ಚಾಲ್ತಿಯಲ್ಲಿ ಇಲ್ಲದ 50 ಪೈಸೆಗೆ ಸಮ, ಹೀಗಾಗಿ ಅವರನ್ನು ಕಾನೂನಿಗೆ ಒಪ್ಪಿಸಿ ಎನ್ನುವ ಧನಾತ್ಮಕ ಸಂದೇಶವನ್ನು ಸಾರ್ವಜನಿಕರಿಗೆ ನೀಡುತ್ತಿದ್ದೇವೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ</strong>: ಸಾಮಾನ್ಯವಾಗಿ ಆರೋಪಿಗಳನ್ನು ಪತ್ತೆ ಮಾಡಲು ಪೊಲೀಸ್ ಇಲಾಖೆ ಲಕ್ಷಗಟ್ಟಲೆ ಹಣವನ್ನು ಬಹುಮಾನವಾಗಿ ನೀಡುವುದಾಗಿ ಘೋಷಣೆ ಮಾಡುತ್ತದೆ. ಆದರೆ ರಾಜಸ್ಥಾನದಲ್ಲಿ ಆರೋಪಿಯೊಬ್ಬನ ಪತ್ತೆ ಮಾಡಿದರೆ 50 ಪೈಸೆ ಬಹುಮಾನ ನೀಡುವುದಾಗಿ ಘೋಷಿಸಲಾಗಿದೆ.</p><p>ಇಲ್ಲಿಯ ಸಿಂಘನಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಆರೋಪಿಯಾಗಿರುವ ಯೋಗೇಶ್ ಮೇಘವಾಲ್ ಪತ್ತೆಗೆ ಈ ಕ್ರಮ ಕೈಗೊಳ್ಳಲಾಗಿದೆ. </p><p>ಜುಂಜುನು ಪ್ರದೇಶದ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ವಿಷ್ಣೋಯ್ ಅವರು ಈ ಹೊಸ ಪ್ರಯೋಗ ಮಾಡಿದ್ದು, ಆರೋಪಿಯನ್ನು ಪತ್ತೆ ಮಾಡಿದರೆ ಅಥವಾ ಆರೋಪಿ ಇರುವ ಸ್ಥಳದ ಬಗ್ಗೆ ಸರಿಯಾದ ಮಾಹಿತಿ ನೀಡಿದರೆ 50 ಪೈಸೆ ಬಹುಮಾನ ನೀಡುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ.</p><p>ಈ ಮೂಲಕ, ‘ಸಮಾಜದಲ್ಲಿ ಆರೋಪಿಯ ಸ್ಥಾನಮಾನವು ಚಾಲ್ತಿಯಲ್ಲಿ ಇಲ್ಲದ 50 ಪೈಸೆಗೆ ಸಮ, ಹೀಗಾಗಿ ಅವರನ್ನು ಕಾನೂನಿಗೆ ಒಪ್ಪಿಸಿ ಎನ್ನುವ ಧನಾತ್ಮಕ ಸಂದೇಶವನ್ನು ಸಾರ್ವಜನಿಕರಿಗೆ ನೀಡುತ್ತಿದ್ದೇವೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>