<p><strong>ನವದೆಹಲಿ:</strong> ಆ್ಯಸಿಡ್ ದಾಳಿ ಪ್ರಕರಣಗಳ ವಿಚಾರಣೆಯಲ್ಲಿ ಆಗುತ್ತಿರುವ ವಿಳಂಬಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ದೇಶದಾದ್ಯಂತ ಬಾಕಿ ಇರುವ ಇಂತಹ ಪ್ರಕರಣಗಳ ಕುರಿತ ವಿವರಗಳನ್ನು ನಾಲ್ಕು ವಾರಗಳೊಳಗೆ ಸಲ್ಲಿಸುವಂತೆ ಎಲ್ಲ ಹೈಕೋರ್ಟ್ಗಳಿಗೆ ಗುರುವಾರ ಸೂಚಿಸಿದೆ.</p>.<p>‘ಆ್ಯಸಿಡ್ ದಾಳಿ ಪ್ರಕರಣಗಳ ವಿಚಾರಣೆಯಲ್ಲಿ ತೋರುವ ವಿಳಂಬವು ನ್ಯಾಯಾಂಗ ವ್ಯವಸ್ಥೆಯ ಅಪಹಾಸ್ಯವೇ ಸರಿ’ ಎಂದು ಮುಖ್ಯನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠ ಹೇಳಿದೆ.</p>.<p>‘ಆ್ಯಸಿಡ್ ದಾಳಿ ಪ್ರಕರಣಗಳ ವಿಲೇವಾರಿಗೆ ವೇಗ ನೀಡುವುದಕ್ಕಾಗಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಬೇಕು’ ಎಂಬ ಸಲಹೆ ನೀಡಿರುವ ಪೀಠವು, ಈ ಸಂಬಂಧ ಕೇಂದ್ರ ಸರ್ಕಾರ ಹಾಗೂ ಅಂಗವಿಕಲರ ಸಬಲೀಕರಣ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ.</p>.<p>ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಕೂಡ ಈ ಪೀಠದಲ್ಲಿದ್ದಾರೆ.</p>.<p>‘ಆ್ಯಸಿಡ್ ದಾಳಿಯ ಸಂತ್ರಸ್ತರನ್ನು ಅಂಗವಿಕಲರು ಎಂಬುದಾಗಿ ಪರಿಗಣಿಸಬೇಕು. ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಕಾಯ್ದೆಯಡಿ ಲಭ್ಯವಿರುವ ಎಲ್ಲ ಸವಲತ್ತುಗಳು ಇವರಿಗೂ ಸಿಗುವಂತಾಗಬೇಕು. ಇದಕ್ಕಾಗಿ ಕಾಯ್ದೆಗೆ ತಿದ್ದುಪಡಿ ತರಬೇಕು ಇಲ್ಲವೇ ಸುಗ್ರೀವಾಜ್ಞೆ ಹೊರಡಿಸಲು ಪರಿಗಣಿಸಿ’ ಎಂದು ಕೇಂದ್ರ ಸರ್ಕಾರಕ್ಕೆ ಪೀಠವು ಸೂಚಿಸಿದೆ.</p>.<p>ಆ್ಯಸಿಡ್ ದಾಳಿಗೆ ಒಳಗಾಗಿರುವ ಶಾಹೀನ್ ಮಲಿಕ್ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆ ವೇಳೆ ಪೀಠ ಈ ಸೂಚನೆಗಳನ್ನು ನೀಡಿದೆ.</p>.<p>ವಿಚಾರಣೆ ವೇಳೆ, ‘ಈ ವಿಚಾರವನ್ನು ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಕ್ರಮ ಕೈಗೊಳ್ಳುವುದು’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಪೀಠಕ್ಕೆ ತಿಳಿಸಿದರು.</p>.<p>ಇದೇ ವೇಳೆ ಸ್ವತಃ ಶಾಹೀನ್ ಮಲಿಕ್ ವಾದ ಮಂಡಿಸಿ,‘ನನ್ನ ಮೇಲೆ 2009ರಲ್ಲಿ ಆ್ಯಸಿಡ್ ದಾಳಿ ನಡೆಯಿತು. 2013ರ ವರೆಗೆ ಪ್ರಕರಣದ ವಿಚಾರಣೆಯಲ್ಲಿ ಯಾವುದೇ ಪ್ರಗತಿ ಇರಲಿಲ್ಲ. ಈಗ ರೋಹಿಣಿ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ’ ಎಂದು ಪೀಠಕ್ಕೆ ಅರುಹಿದರು.</p>.<p>ಈ ವಿಷಯ ಕೇಳಿ ಅಚ್ಚರಿ ವ್ಯಕ್ತಪಡಿಸಿದ ಪೀಠ,‘ಮಲಿಕ್ ಅವರ ಪ್ರಕರಣದ ವಿಚಾರಣೆ 2009ರಿಂದ ವಿಚಾರಣೆಗೆ ಬಾಕಿ ಉಳಿದಿದೆ. ಇದು ನಾಚಿಕೆಗೇಡಿನದು. ರಾಷ್ಟ್ರವೇ ತಲೆತಗ್ಗಿಸುವ ವಿಚಾರ’ ಎಂದು ಅಸಮಾಧಾನ ವ್ಯಕ್ತಪಡಿಸಿತು.</p>.<p>‘ಸಂತ್ರಸ್ತರು ಎದುರಿಸುತ್ತಿರುವ ಸವಾಲುಗಳಿಗೆ ರಾಷ್ಟ್ರ ರಾಜಧಾನಿಯಲ್ಲಿಯೇ ನ್ಯಾಯ ಸಿಗುತ್ತಿಲ್ಲ ಎಂದರೆ ಹೇಗೆ? ಇಂತಹ ಪ್ರಕರಣಗಳಲ್ಲಿ ನ್ಯಾಯ ಕೊಡಿಸುವವರು ಯಾರು?’ ಎಂದು ಸಿಜೆಐ ಸೂರ್ಯ ಕಾಂತ್ ಹೇಳಿದರು.</p>.<p>ಪ್ರಕರಣವನ್ನು ಯಾಕೆ ಇನ್ನೂ ಇತ್ಯರ್ಥಪಡಿಸಲಾಗಿಲ್ಲ ಎಂಬ ಬಗ್ಗೆ ವಿವರಣೆಯೊಂದಿಗೆ ಅರ್ಜಿ ಸಲ್ಲಿಸುವಂತೆ ಮಲಿಕ್ ಅವರಿಗೆ ಸೂಚಿಸಿದ ಸಿಜೆಐ, ಮುಂದಿನ ವಾರದಿಂದ ಪ್ರತಿನಿತ್ಯ ಮಲಿಕ್ ಅವರ ಅರ್ಜಿಯ ವಿಚಾರಣೆ ನಡೆಸಲಾಗುವುದು ಎಂದು ಹೇಳಿದರು.</p>.<div><blockquote>ಬಲವಂತದಿಂದಾಗಿ ಆ್ಯಸಿಡ್ ಸೇವಿಸುವವರು ಹಲವು ಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಆಹಾರ ಸೇವನೆಗೆ ಕೃತಕ ನಾಳಗಳನ್ನು ಅಳವಡಿಸಲಾಗುತ್ತದೆ. ತೀವ್ರವಾದ ಅಂಗವೈಕಲ್ಯದಿಂದ ನರಳಬೇಕಾಗುತ್ತದೆ </blockquote><span class="attribution"> ಶಾಹೀನ್ ಮಲಿಕ್ ಆ್ಯಸಿಡ್ ದಾಳಿ ಸಂತ್ರಸ್ತೆ </span></div>.<div><blockquote>ದೇಹದ ಮೇಲೆ ಆ್ಯಸಿಡ್ ಎರಚಿದ ಘಟನೆಗಳ ಬಗ್ಗೆ ಕೇಳಿರುವೆ. ಸಂತ್ರಸ್ತರಿಗೆ ಬಲವಂತದಿಂದ ಆ್ಯಸಿಡ್ ಕುಡಿಸಿರುವ ಪ್ರಕರಣದ ಬಗ್ಗೆ ಕೇಳಿರಲಿಲ್ಲ. ಇದು ಆಘಾತಕಾರಿ</blockquote><span class="attribution"> ಸೂರ್ಯ ಕಾಂತ್ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಆ್ಯಸಿಡ್ ದಾಳಿ ಪ್ರಕರಣಗಳ ವಿಚಾರಣೆಯಲ್ಲಿ ಆಗುತ್ತಿರುವ ವಿಳಂಬಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ದೇಶದಾದ್ಯಂತ ಬಾಕಿ ಇರುವ ಇಂತಹ ಪ್ರಕರಣಗಳ ಕುರಿತ ವಿವರಗಳನ್ನು ನಾಲ್ಕು ವಾರಗಳೊಳಗೆ ಸಲ್ಲಿಸುವಂತೆ ಎಲ್ಲ ಹೈಕೋರ್ಟ್ಗಳಿಗೆ ಗುರುವಾರ ಸೂಚಿಸಿದೆ.</p>.<p>‘ಆ್ಯಸಿಡ್ ದಾಳಿ ಪ್ರಕರಣಗಳ ವಿಚಾರಣೆಯಲ್ಲಿ ತೋರುವ ವಿಳಂಬವು ನ್ಯಾಯಾಂಗ ವ್ಯವಸ್ಥೆಯ ಅಪಹಾಸ್ಯವೇ ಸರಿ’ ಎಂದು ಮುಖ್ಯನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠ ಹೇಳಿದೆ.</p>.<p>‘ಆ್ಯಸಿಡ್ ದಾಳಿ ಪ್ರಕರಣಗಳ ವಿಲೇವಾರಿಗೆ ವೇಗ ನೀಡುವುದಕ್ಕಾಗಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಬೇಕು’ ಎಂಬ ಸಲಹೆ ನೀಡಿರುವ ಪೀಠವು, ಈ ಸಂಬಂಧ ಕೇಂದ್ರ ಸರ್ಕಾರ ಹಾಗೂ ಅಂಗವಿಕಲರ ಸಬಲೀಕರಣ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ.</p>.<p>ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಕೂಡ ಈ ಪೀಠದಲ್ಲಿದ್ದಾರೆ.</p>.<p>‘ಆ್ಯಸಿಡ್ ದಾಳಿಯ ಸಂತ್ರಸ್ತರನ್ನು ಅಂಗವಿಕಲರು ಎಂಬುದಾಗಿ ಪರಿಗಣಿಸಬೇಕು. ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಕಾಯ್ದೆಯಡಿ ಲಭ್ಯವಿರುವ ಎಲ್ಲ ಸವಲತ್ತುಗಳು ಇವರಿಗೂ ಸಿಗುವಂತಾಗಬೇಕು. ಇದಕ್ಕಾಗಿ ಕಾಯ್ದೆಗೆ ತಿದ್ದುಪಡಿ ತರಬೇಕು ಇಲ್ಲವೇ ಸುಗ್ರೀವಾಜ್ಞೆ ಹೊರಡಿಸಲು ಪರಿಗಣಿಸಿ’ ಎಂದು ಕೇಂದ್ರ ಸರ್ಕಾರಕ್ಕೆ ಪೀಠವು ಸೂಚಿಸಿದೆ.</p>.<p>ಆ್ಯಸಿಡ್ ದಾಳಿಗೆ ಒಳಗಾಗಿರುವ ಶಾಹೀನ್ ಮಲಿಕ್ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆ ವೇಳೆ ಪೀಠ ಈ ಸೂಚನೆಗಳನ್ನು ನೀಡಿದೆ.</p>.<p>ವಿಚಾರಣೆ ವೇಳೆ, ‘ಈ ವಿಚಾರವನ್ನು ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಕ್ರಮ ಕೈಗೊಳ್ಳುವುದು’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಪೀಠಕ್ಕೆ ತಿಳಿಸಿದರು.</p>.<p>ಇದೇ ವೇಳೆ ಸ್ವತಃ ಶಾಹೀನ್ ಮಲಿಕ್ ವಾದ ಮಂಡಿಸಿ,‘ನನ್ನ ಮೇಲೆ 2009ರಲ್ಲಿ ಆ್ಯಸಿಡ್ ದಾಳಿ ನಡೆಯಿತು. 2013ರ ವರೆಗೆ ಪ್ರಕರಣದ ವಿಚಾರಣೆಯಲ್ಲಿ ಯಾವುದೇ ಪ್ರಗತಿ ಇರಲಿಲ್ಲ. ಈಗ ರೋಹಿಣಿ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ’ ಎಂದು ಪೀಠಕ್ಕೆ ಅರುಹಿದರು.</p>.<p>ಈ ವಿಷಯ ಕೇಳಿ ಅಚ್ಚರಿ ವ್ಯಕ್ತಪಡಿಸಿದ ಪೀಠ,‘ಮಲಿಕ್ ಅವರ ಪ್ರಕರಣದ ವಿಚಾರಣೆ 2009ರಿಂದ ವಿಚಾರಣೆಗೆ ಬಾಕಿ ಉಳಿದಿದೆ. ಇದು ನಾಚಿಕೆಗೇಡಿನದು. ರಾಷ್ಟ್ರವೇ ತಲೆತಗ್ಗಿಸುವ ವಿಚಾರ’ ಎಂದು ಅಸಮಾಧಾನ ವ್ಯಕ್ತಪಡಿಸಿತು.</p>.<p>‘ಸಂತ್ರಸ್ತರು ಎದುರಿಸುತ್ತಿರುವ ಸವಾಲುಗಳಿಗೆ ರಾಷ್ಟ್ರ ರಾಜಧಾನಿಯಲ್ಲಿಯೇ ನ್ಯಾಯ ಸಿಗುತ್ತಿಲ್ಲ ಎಂದರೆ ಹೇಗೆ? ಇಂತಹ ಪ್ರಕರಣಗಳಲ್ಲಿ ನ್ಯಾಯ ಕೊಡಿಸುವವರು ಯಾರು?’ ಎಂದು ಸಿಜೆಐ ಸೂರ್ಯ ಕಾಂತ್ ಹೇಳಿದರು.</p>.<p>ಪ್ರಕರಣವನ್ನು ಯಾಕೆ ಇನ್ನೂ ಇತ್ಯರ್ಥಪಡಿಸಲಾಗಿಲ್ಲ ಎಂಬ ಬಗ್ಗೆ ವಿವರಣೆಯೊಂದಿಗೆ ಅರ್ಜಿ ಸಲ್ಲಿಸುವಂತೆ ಮಲಿಕ್ ಅವರಿಗೆ ಸೂಚಿಸಿದ ಸಿಜೆಐ, ಮುಂದಿನ ವಾರದಿಂದ ಪ್ರತಿನಿತ್ಯ ಮಲಿಕ್ ಅವರ ಅರ್ಜಿಯ ವಿಚಾರಣೆ ನಡೆಸಲಾಗುವುದು ಎಂದು ಹೇಳಿದರು.</p>.<div><blockquote>ಬಲವಂತದಿಂದಾಗಿ ಆ್ಯಸಿಡ್ ಸೇವಿಸುವವರು ಹಲವು ಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಆಹಾರ ಸೇವನೆಗೆ ಕೃತಕ ನಾಳಗಳನ್ನು ಅಳವಡಿಸಲಾಗುತ್ತದೆ. ತೀವ್ರವಾದ ಅಂಗವೈಕಲ್ಯದಿಂದ ನರಳಬೇಕಾಗುತ್ತದೆ </blockquote><span class="attribution"> ಶಾಹೀನ್ ಮಲಿಕ್ ಆ್ಯಸಿಡ್ ದಾಳಿ ಸಂತ್ರಸ್ತೆ </span></div>.<div><blockquote>ದೇಹದ ಮೇಲೆ ಆ್ಯಸಿಡ್ ಎರಚಿದ ಘಟನೆಗಳ ಬಗ್ಗೆ ಕೇಳಿರುವೆ. ಸಂತ್ರಸ್ತರಿಗೆ ಬಲವಂತದಿಂದ ಆ್ಯಸಿಡ್ ಕುಡಿಸಿರುವ ಪ್ರಕರಣದ ಬಗ್ಗೆ ಕೇಳಿರಲಿಲ್ಲ. ಇದು ಆಘಾತಕಾರಿ</blockquote><span class="attribution"> ಸೂರ್ಯ ಕಾಂತ್ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>