<p><strong>ಸಂಭಲ್</strong>: ಶಿಕ್ಷಕಿಯೊಬ್ಬರ ಮೇಲೆ ಆ್ಯಸಿಡ್ ಎರಚಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಎನ್ಕೌಂಟರ್ ನಡೆಸಿ ಬಂಧಿಸಿದ ಘಟನೆ ಉತ್ತರಪ್ರದೇಶದ ಸಂಭಲ್ನಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.</p><p>ಆರೋಪಿಯನ್ನು ಅಮ್ರೋಹಾ ಜಿಲ್ಲೆಯ ಟಿಗ್ರಿ ಗ್ರಾಮದ ನಿವಾಸಿ ನಿಶು ತಿವಾರಿ (30) ಎಂದು ಗುರುತಿಸಲಾಗಿದೆ.</p><p>ಸೆಪ್ಟೆಂಬರ್ 23ರಂದು ಶಿಕ್ಷಕಿಯೊಬ್ಬರು (22) ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದಾಗ ನಖಾಸಾ ಪ್ರದೇಶದ ಬಳಿ ಸ್ಕೂಟರ್ನಲ್ಲಿ ಬಂದ ಆರೋಪಿ ಆಕೆಯ ಮುಖಕ್ಕೆ ಆ್ಯಸಿಡ್ ಎರಚಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಕೃಷ್ಣ ಕುಮಾರ್ ತಿಳಿಸಿದ್ದಾರೆ.</p>.ಗಮನಿಸಿ: ನವರಾತ್ರಿಯಲ್ಲಿ ಈ ಕೆಲಸಗಳನ್ನು ಮಾಡಬಾರದು ಎನ್ನುತ್ತೆ ಜ್ಯೋತಿಷ.ರಾಯಚೂರಿನಲ್ಲಿ ಭಾರಿ ಮಳೆ: ಜನಜೀವನ ಸಂಪೂರ್ಣ ಸ್ತಬ್ಧ. <p>ಈ ದಾಳಿಯಲ್ಲಿ ಶಿಕ್ಷಕಿಗೆ ಶೇ 20ರಿಂದ 30ರಷ್ಟು ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p><p>ಸಂತ್ರಸ್ತೆಯನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸುವ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದರು. ಆರೋಪಿಯಿಂದ ಒಂದು ಪಿಸ್ತೂಲ್, ಎರಡು ಕಾರ್ಟ್ರಿಡ್ಜ್ಗಳು ಮತ್ತು ಸ್ಕೂಟರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.</p>.ಉಳ್ಳಾಗಡ್ಡಿ ದರ ಕುಸಿತ.. ಲಕ್ಷ್ಮೇಶ್ವರದ ರೈತರು ಕಂಗಾಲು!.ಪರಿಶಿಷ್ಟ ಪಂಗಡದೊಳಗೆ ಅಂತರ ಜಾತಿ ವಿವಾಹಕ್ಕೆ ಆರ್ಥಿಕ ಬೆಂಬಲ.ನವರಾತ್ರಿ 5ನೇ ದಿನ | ಸ್ಕಂದ ಮಾತೆಯ ಪೂಜೆ ಹೀಗಿರಲಿ.ಕಾಂತಾರ ಅಧ್ಯಾಯ–1 ಸಿನಿಮಾಕ್ಕೆ ಇಂದಿನಿಂದ ಮುಂಗಡ ಬುಕಿಂಗ್ ಆರಂಭ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಭಲ್</strong>: ಶಿಕ್ಷಕಿಯೊಬ್ಬರ ಮೇಲೆ ಆ್ಯಸಿಡ್ ಎರಚಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಎನ್ಕೌಂಟರ್ ನಡೆಸಿ ಬಂಧಿಸಿದ ಘಟನೆ ಉತ್ತರಪ್ರದೇಶದ ಸಂಭಲ್ನಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.</p><p>ಆರೋಪಿಯನ್ನು ಅಮ್ರೋಹಾ ಜಿಲ್ಲೆಯ ಟಿಗ್ರಿ ಗ್ರಾಮದ ನಿವಾಸಿ ನಿಶು ತಿವಾರಿ (30) ಎಂದು ಗುರುತಿಸಲಾಗಿದೆ.</p><p>ಸೆಪ್ಟೆಂಬರ್ 23ರಂದು ಶಿಕ್ಷಕಿಯೊಬ್ಬರು (22) ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದಾಗ ನಖಾಸಾ ಪ್ರದೇಶದ ಬಳಿ ಸ್ಕೂಟರ್ನಲ್ಲಿ ಬಂದ ಆರೋಪಿ ಆಕೆಯ ಮುಖಕ್ಕೆ ಆ್ಯಸಿಡ್ ಎರಚಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಕೃಷ್ಣ ಕುಮಾರ್ ತಿಳಿಸಿದ್ದಾರೆ.</p>.ಗಮನಿಸಿ: ನವರಾತ್ರಿಯಲ್ಲಿ ಈ ಕೆಲಸಗಳನ್ನು ಮಾಡಬಾರದು ಎನ್ನುತ್ತೆ ಜ್ಯೋತಿಷ.ರಾಯಚೂರಿನಲ್ಲಿ ಭಾರಿ ಮಳೆ: ಜನಜೀವನ ಸಂಪೂರ್ಣ ಸ್ತಬ್ಧ. <p>ಈ ದಾಳಿಯಲ್ಲಿ ಶಿಕ್ಷಕಿಗೆ ಶೇ 20ರಿಂದ 30ರಷ್ಟು ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p><p>ಸಂತ್ರಸ್ತೆಯನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸುವ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದರು. ಆರೋಪಿಯಿಂದ ಒಂದು ಪಿಸ್ತೂಲ್, ಎರಡು ಕಾರ್ಟ್ರಿಡ್ಜ್ಗಳು ಮತ್ತು ಸ್ಕೂಟರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.</p>.ಉಳ್ಳಾಗಡ್ಡಿ ದರ ಕುಸಿತ.. ಲಕ್ಷ್ಮೇಶ್ವರದ ರೈತರು ಕಂಗಾಲು!.ಪರಿಶಿಷ್ಟ ಪಂಗಡದೊಳಗೆ ಅಂತರ ಜಾತಿ ವಿವಾಹಕ್ಕೆ ಆರ್ಥಿಕ ಬೆಂಬಲ.ನವರಾತ್ರಿ 5ನೇ ದಿನ | ಸ್ಕಂದ ಮಾತೆಯ ಪೂಜೆ ಹೀಗಿರಲಿ.ಕಾಂತಾರ ಅಧ್ಯಾಯ–1 ಸಿನಿಮಾಕ್ಕೆ ಇಂದಿನಿಂದ ಮುಂಗಡ ಬುಕಿಂಗ್ ಆರಂಭ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>