<p><strong>ನವದೆಹಲಿ:</strong> ಆ್ಯಸಿಡ್ ದಾಳಿಗೆ ತುತ್ತಾದ ಸಂತ್ರಸ್ತರು ಪರಿಹಾರ ಪಡೆಯುವಲ್ಲಿ ವಿಳಂಬವಾದರೆ ಆಯಾ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಬಹುದು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.</p>.<p>ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ಪೀಠವು ಮುಂಬೈ ಮೂಲದ ಎನ್ಜಿಒ ಆಸಿಡ್ ಸರ್ವೈವರ್ಸ್ ಸಾಹಸ್ ಫೌಂಡೇಷನ್ ಪರ ವಕೀಲರ ಮನವಿಯನ್ನು ಆಲಿಸಿತು.</p>.<p>ಆಸಿಡ್ ದಾಳಿಯ ಸಂತ್ರಸ್ತರು ಮಹಾರಾಷ್ಟ್ರದ ಅಧಿಕಾರಿಗಳಿಂದ ಪರಿಹಾರವನ್ನು ಪಡೆಯುವುದು ಕಷ್ಟಕರವಾಗಿದೆ ಎಂದು ವಕೀಲರು ಪೀಠದ ಗಮನಕ್ಕೆ ತಂದಾಗ, ‘ಇದರಲ್ಲಿ ವಿಳಂಬವಾಗುತ್ತಿದ್ದರೆ, ಆಸಿಡ್ ದಾಳಿಯ ಸಂತ್ರಸ್ತರು ರಾಜ್ಯ ಕಾನೂನು ಸೇವೆಗಳ ಅಧಿಕಾರಿಗಳನ್ನು (ಎಸ್ಎಲ್ಎಸ್ಎ) ಸಂಪರ್ಕಿಸಲು ಮುಕ್ತರು’ ಎಂದು ಮುಖ್ಯ ನ್ಯಾಯಮೂರ್ತಿಗಳು ಹೇಳಿದರು.</p>.<p>ಎನ್ಜಿಒದ ಅರ್ಜಿಗೆ ಕೇಂದ್ರ ಮತ್ತು 11 ರಾಜ್ಯಗಳು ಉತ್ತರಗಳನ್ನು ಸಲ್ಲಿಸದೇ ಇರುವುದನ್ನು ಗಮನಿಸಿದ ಪೀಠವು, ಉತ್ತರ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡಿ, ವಿಚಾರಣೆಯನ್ನು ಮೇ ತಿಂಗಳ ಕೊನೆಯ ವಾರಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಆ್ಯಸಿಡ್ ದಾಳಿಗೆ ತುತ್ತಾದ ಸಂತ್ರಸ್ತರು ಪರಿಹಾರ ಪಡೆಯುವಲ್ಲಿ ವಿಳಂಬವಾದರೆ ಆಯಾ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಬಹುದು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.</p>.<p>ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ಪೀಠವು ಮುಂಬೈ ಮೂಲದ ಎನ್ಜಿಒ ಆಸಿಡ್ ಸರ್ವೈವರ್ಸ್ ಸಾಹಸ್ ಫೌಂಡೇಷನ್ ಪರ ವಕೀಲರ ಮನವಿಯನ್ನು ಆಲಿಸಿತು.</p>.<p>ಆಸಿಡ್ ದಾಳಿಯ ಸಂತ್ರಸ್ತರು ಮಹಾರಾಷ್ಟ್ರದ ಅಧಿಕಾರಿಗಳಿಂದ ಪರಿಹಾರವನ್ನು ಪಡೆಯುವುದು ಕಷ್ಟಕರವಾಗಿದೆ ಎಂದು ವಕೀಲರು ಪೀಠದ ಗಮನಕ್ಕೆ ತಂದಾಗ, ‘ಇದರಲ್ಲಿ ವಿಳಂಬವಾಗುತ್ತಿದ್ದರೆ, ಆಸಿಡ್ ದಾಳಿಯ ಸಂತ್ರಸ್ತರು ರಾಜ್ಯ ಕಾನೂನು ಸೇವೆಗಳ ಅಧಿಕಾರಿಗಳನ್ನು (ಎಸ್ಎಲ್ಎಸ್ಎ) ಸಂಪರ್ಕಿಸಲು ಮುಕ್ತರು’ ಎಂದು ಮುಖ್ಯ ನ್ಯಾಯಮೂರ್ತಿಗಳು ಹೇಳಿದರು.</p>.<p>ಎನ್ಜಿಒದ ಅರ್ಜಿಗೆ ಕೇಂದ್ರ ಮತ್ತು 11 ರಾಜ್ಯಗಳು ಉತ್ತರಗಳನ್ನು ಸಲ್ಲಿಸದೇ ಇರುವುದನ್ನು ಗಮನಿಸಿದ ಪೀಠವು, ಉತ್ತರ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡಿ, ವಿಚಾರಣೆಯನ್ನು ಮೇ ತಿಂಗಳ ಕೊನೆಯ ವಾರಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>