ಈ ಕುರಿತು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿರುವ ಸಚಿವಾಲಯದ ವಕ್ತಾರ ರಣಧೀರ ಜೈಸ್ವಾಲ್,‘ಈ ವಿಚಾರವಾಗಿ ಮೇ 21ರಂದು ಕರ್ನಾಟಕ ಸರ್ಕಾರ ಮನವಿ ಸಲ್ಲಿಸಿತ್ತು. ಭಾರತೀಯ ಪಾಸ್ಪೋರ್ಟ್ ಕಾಯ್ದೆ ಪ್ರಕಾರ, ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ರದ್ದತಿಗೆ ಸಂಬಂಧಿಸಿದ ಪ್ರಕ್ರಿಯೆಗೆ ಮೇ 23ರಂದು ಚಾಲನೆ ನೀಡಲಾಗಿದೆ’ ಎಂದು ಹೇಳಿದ್ದಾರೆ.