<p><strong>ನವದೆಹಲಿ:</strong> ‘ಸುಪ್ರೀಂಕೋರ್ಟ್ನಲ್ಲಿ ನಡೆಯುವ ಕಲಾಪಗಳನ್ನು ನೇರ ಪ್ರಸಾರ ಮಾಡಬೇಕು ಎಂಬ ಪ್ರಸ್ತಾವವನ್ನು ಕಾರ್ಯರೂಪಕ್ಕೆ ತರಲು ನಾನು ಒಲವು ಹೊಂದಿದ್ದೇನೆ’ ಎಂದು ಸುಪ್ರೀಂಕೋರ್ಟ್ನ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ಗುರುವಾರ ಹೇಳಿದರು.</p>.<p>ಸುಪ್ರೀಂಕೋರ್ಟ್ ವರ್ಚುವಲ್ ವಿಧಾನದ ಮೂಲಕ ನಡೆಸುವ ಕಲಾಪಗಳನ್ನು ಮಾಧ್ಯಮ ಪ್ರತಿನಿಧಿಗಳೂ ವೀಕ್ಷಿಸಲು ಸಾಧ್ಯವಾಗುವ ಸಲುವಾಗಿ ಅಭಿವೃದ್ಧಿಪಡಿಸಿರುವ ಆ್ಯಪ್ನ ಅನಾವರಣ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಇದನ್ನು ಸಂಪೂರ್ಣವಾಗಿ ಕಾರ್ಯರೂಪಕ್ಕೆ ತರುವ ಮುನ್ನ, ಸುಪ್ರೀಂಕೋರ್ಟ್ನ ಸಹೋದ್ಯೋಗಿಗಳಲ್ಲಿ ಒಮ್ಮತ ಮೂಡಿಸಬೇಕು. ಈ ನಿಟ್ಟಿನಲ್ಲಿ ಪ್ರಯತ್ನಿಸುವೆ’ ಎಂದು ಅವರು ಹೇಳಿದರು.</p>.<p>ತಾವು ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ದಿನಗಳನ್ನು ಮೆಲುಕು ಹಾಕಿದ ಅವರು, ‘ಕೋರ್ಟ್ ಕಲಾಪಗಳ ಕುರಿತು ವರದಿ ಮಾಡುವಾಗ ಪತ್ರಕರ್ತರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದು ನನ್ನ ಅರಿವಿಗೆ ಬಂದಿತ್ತು. ಮಾಹಿತಿಗಾಗಿ ಬಹಳಷ್ಟು ಸಂದರ್ಭಗಳಲ್ಲಿ ಅವರು ವಕೀಲರ ಮೇಲೆಯೇ ಅವಲಂಬಿತರಾಗಿರಬೇಕಾಗುತ್ತಿತ್ತು’ ಎಂದರು.</p>.<p>‘ಪತ್ರಕರ್ತರು ಕೋರ್ಟ್ ಕಲಾಪಗಳಿಗೆ ಹಾಜರಾಗಲು ಅನುಕೂಲವಾಗುವಂಥ ವ್ಯವಸ್ಥೆಯನ್ನು ರೂಪಿಸಬೇಕು ಎಂಬ ಬೇಡಿಕೆ ಆಗಲೇ ಕೇಳಿಬಂದಿದ್ದವು‘ ಎಂದೂ ಹೇಳಿದರು.</p>.<p>ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮಾತನಾಡಿ, ‘ಸುಪ್ರೀಂಕೋರ್ಟ್ನ ಸಿಬ್ಬಂದಿಯೇ ಈ ಆ್ಯಪ್ನ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ಈ ಕಾರ್ಯದಲ್ಲಿ ತೊಡಗಿದ್ದ ಆರು ಜನರಿಗೆ ಕೋವಿಡ್–19 ದೃಢಪಟ್ಟಿದೆ’ ಎಂದರು.</p>.<p>ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್, ಹೇಮಂತ್ ಗುಪ್ತ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಸುಪ್ರೀಂಕೋರ್ಟ್ನಲ್ಲಿ ನಡೆಯುವ ಕಲಾಪಗಳನ್ನು ನೇರ ಪ್ರಸಾರ ಮಾಡಬೇಕು ಎಂಬ ಪ್ರಸ್ತಾವವನ್ನು ಕಾರ್ಯರೂಪಕ್ಕೆ ತರಲು ನಾನು ಒಲವು ಹೊಂದಿದ್ದೇನೆ’ ಎಂದು ಸುಪ್ರೀಂಕೋರ್ಟ್ನ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ಗುರುವಾರ ಹೇಳಿದರು.</p>.<p>ಸುಪ್ರೀಂಕೋರ್ಟ್ ವರ್ಚುವಲ್ ವಿಧಾನದ ಮೂಲಕ ನಡೆಸುವ ಕಲಾಪಗಳನ್ನು ಮಾಧ್ಯಮ ಪ್ರತಿನಿಧಿಗಳೂ ವೀಕ್ಷಿಸಲು ಸಾಧ್ಯವಾಗುವ ಸಲುವಾಗಿ ಅಭಿವೃದ್ಧಿಪಡಿಸಿರುವ ಆ್ಯಪ್ನ ಅನಾವರಣ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಇದನ್ನು ಸಂಪೂರ್ಣವಾಗಿ ಕಾರ್ಯರೂಪಕ್ಕೆ ತರುವ ಮುನ್ನ, ಸುಪ್ರೀಂಕೋರ್ಟ್ನ ಸಹೋದ್ಯೋಗಿಗಳಲ್ಲಿ ಒಮ್ಮತ ಮೂಡಿಸಬೇಕು. ಈ ನಿಟ್ಟಿನಲ್ಲಿ ಪ್ರಯತ್ನಿಸುವೆ’ ಎಂದು ಅವರು ಹೇಳಿದರು.</p>.<p>ತಾವು ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ದಿನಗಳನ್ನು ಮೆಲುಕು ಹಾಕಿದ ಅವರು, ‘ಕೋರ್ಟ್ ಕಲಾಪಗಳ ಕುರಿತು ವರದಿ ಮಾಡುವಾಗ ಪತ್ರಕರ್ತರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದು ನನ್ನ ಅರಿವಿಗೆ ಬಂದಿತ್ತು. ಮಾಹಿತಿಗಾಗಿ ಬಹಳಷ್ಟು ಸಂದರ್ಭಗಳಲ್ಲಿ ಅವರು ವಕೀಲರ ಮೇಲೆಯೇ ಅವಲಂಬಿತರಾಗಿರಬೇಕಾಗುತ್ತಿತ್ತು’ ಎಂದರು.</p>.<p>‘ಪತ್ರಕರ್ತರು ಕೋರ್ಟ್ ಕಲಾಪಗಳಿಗೆ ಹಾಜರಾಗಲು ಅನುಕೂಲವಾಗುವಂಥ ವ್ಯವಸ್ಥೆಯನ್ನು ರೂಪಿಸಬೇಕು ಎಂಬ ಬೇಡಿಕೆ ಆಗಲೇ ಕೇಳಿಬಂದಿದ್ದವು‘ ಎಂದೂ ಹೇಳಿದರು.</p>.<p>ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮಾತನಾಡಿ, ‘ಸುಪ್ರೀಂಕೋರ್ಟ್ನ ಸಿಬ್ಬಂದಿಯೇ ಈ ಆ್ಯಪ್ನ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ಈ ಕಾರ್ಯದಲ್ಲಿ ತೊಡಗಿದ್ದ ಆರು ಜನರಿಗೆ ಕೋವಿಡ್–19 ದೃಢಪಟ್ಟಿದೆ’ ಎಂದರು.</p>.<p>ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್, ಹೇಮಂತ್ ಗುಪ್ತ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>