<p><strong>ನವದೆಹಲಿ</strong>: ಇತ್ತೀಚೆಗೆ ಬಂಧಿಸಲಾದ ಐವರು ಸಾಮಾಜಿಕ ಕಾರ್ಯಕರ್ತರು ನಿಷೇಧಿತ ಸಿಪಿಐ (ಮಾವೊವಾದಿ) ಗುಂಪಿನ ಜತೆ ಸಂಪರ್ಕ ಹೊಂದಿರುವುದನ್ನು ದೃಢಪಡಿಸುವ ಸಾಕ್ಷ್ಯಗಳು ದೊರೆತಿವೆ. ಆ ಕಾರಣಕ್ಕಾಗಿ ಅವರನ್ನು ಬಂಧಿಸಲಾಗಿದೆಯೇ ಹೊರತು ಭಿನ್ನ ನಿಲುವುಗಳನ್ನು ಹೊಂದಿದ್ದರು ಎಂಬುದಕ್ಕಲ್ಲ ಎಂದು ಮಹಾರಾಷ್ಟ್ರ ಸರ್ಕಾರವು ಸುಪ್ರೀಂ ಕೋರ್ಟ್ಗೆ ಬುಧವಾರ ತಿಳಿಸಿದೆ.</p>.<p>ಇತಿಹಾಸಕಾರ್ತಿ ರೊಮಿಲಾ ಥಾಪರ್,ಅರ್ಥಶಾಸ್ತ್ರಜ್ಞರಾದ ಪ್ರಭಾತ್ ಪಟ್ನಾಯಕ್ ಮತ್ತು ದೇವಕಿ ಜೈನ್, ಸಮಾಜಶಾಸ್ತ್ರಜ್ಞ ಸತೀಶ್ ದೇಶಪಾಂಡೆ ಮತ್ತು ಕಾನೂನು ತಜ್ಞೆ ಮಾಜಾ ದಾರೂವಾಲಾ ಅವರು ಬಂಧನವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಸಂಬಂಧಿಸಿ ಮಹಾರಾಷ್ಟ್ರ ಸರ್ಕಾರವು ಸುಪ್ರೀಂ ಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದೆ. ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಕ್ಕಾಗಿಯೇ ಅವರನ್ನು ಬಂಧಿಸಲಾಗಿದೆ ಎಂಬುದನ್ನು ಅಲ್ಲಗಳೆಯುವ ಸಾಕ್ಷ್ಯಗಳು ಇವೆ ಎಂದು ಪ್ರಮಾಣಪತ್ರದಲ್ಲಿ ಹೇಳಲಾಗಿದೆ.</p>.<p>ಪ್ರಕರಣಕ್ಕೆ ಸಂಬಂಧಿಸಿ ಅರ್ಜಿ ಸಲ್ಲಿಸಲು ಈ ಐವರಿಗೆ ಏನು ಹಕ್ಕಿದೆ ಎಂದು ಪ್ರಶ್ನಿಸಲಾಗಿದೆ.</p>.<p>ಮಹಾರಾಷ್ಟ್ರ ಪೊಲೀಸರು ದೇಶದ ವಿವಿಧ ಭಾಗಗಳಲ್ಲಿದ್ದ ಎಡಪಂಥೀಯ ಕಾರ್ಯಕರ್ತರ ಮನೆಗಳ ಮೇಲೆ ಆಗಸ್ಟ್ 28ರಂದು ರಾತ್ರಿ ದಾಳಿ ನಡೆಸಿ ಐವರನ್ನು ಬಂಧಿಸಿದ್ದರು. ಈ ಕಾರ್ಯಾಚರಣೆಯ ಬಗ್ಗೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.</p>.<p>ತೆಲುಗು ಕವಿ ವರವರ ರಾವ್ ಅವರನ್ನು ಹೈದರಾಬಾದ್ನಲ್ಲಿ ಬಂಧಿಸಲಾಗಿತ್ತು. ವೆರ್ನನ್ ಗೊನ್ಸಾಲ್ವೆಸ್ ಮತ್ತು ಅರುಣ್ ಫೆರೆರಾ ಅವರನ್ನು ಮುಂಬೈ ಹಾಗೂ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತೆ ಸುಧಾ ಬಾರಧ್ವಜ್ ಅವರನ್ನು ಫರೀದಾಬಾದ್, ನಾಗರಿಕ ಹಕ್ಕುಗಳ ಕಾರ್ಯಕರ್ತ ಗೌತಮ್ ನವ್ಲಖಾ ಅವರನ್ನು ದೆಹಲಿಯಲ್ಲಿ ಬಂಧಿಸಲಾಗಿತ್ತು. ಈ ಎಲ್ಲರನ್ನೂ ಇದೇ 6ರವರೆಗೆ (ಗುರುವಾರ) ಗೃಹ ಬಂಧನದಲ್ಲಿ ಇರಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು.</p>.<p>ಈ ಎಲ್ಲರೂ ಭೀಮಾ–ಕೋರೆಗಾಂವ್ ಹಿಂಸಾಚಾರದ ಜತೆ ನಂಟು ಹೊಂದಿದ್ದಾರೆ. ದೇಶದಾದ್ಯಂತ ಹಿಂಸಾಚಾರ ನಡೆಸುವ ಮತ್ತು ಭದ್ರತಾ ಪಡೆಗಳ ಮೇಲೆ ಹೊಂಚು ದಾಳಿ ನಡೆಸುವ ಪಿತೂರಿ ನಡೆಸಿದ್ದಾರೆ ಎಂಬ ಆರೋಪವನ್ನು ಇವರ ಮೇಲೆ ಹೊರಿಸಲಾಗಿತ್ತು.</p>.<p>ಎಲ್ಗಾರ್ ಪರಿಷತ್ ಡಿಸೆಂಬರ್ 31ರಂದು ನಡೆಸಿದ್ದ ಕಾರ್ಯಕ್ರಮವು ಭೀಮಾ–ಕೋರೆಗಾಂವ್ ಗ್ರಾಮದಲ್ಲಿ ಹಿಂಸಾಚಾರಕ್ಕೆ ತಿರುಗಿತ್ತು. ಇದರ ತನಿಖೆಯ ಭಾಗವಾಗಿ ಪೊಲೀಸರು ದಾಳಿಗಳನ್ನು ನಡೆಸಿದ್ದರು.</p>.<p>**</p>.<p>ನ್ಯಾಯಾಲಯ ನಿರ್ಧಾರ ಕೈಗೊಳ್ಳುವ ಮೊದಲೇ ಎಲ್ಲವನ್ನೂ ಬಹಿರಂಗಪಡಿಸಲಾಗುತ್ತದೆ. ನಗರ ನಕ್ಸಲರು, ಹಿಂದೂ ಉಗ್ರರು ಎಂಬ ಹಣೆಪಟ್ಟಿ ಕಟ್ಟುವ ಬದಲಿಗೆ ತಕ್ಷಣವೇ ಆರೋಪಪಟ್ಟಿ ಸಲ್ಲಿಸಿ.</p>.<p><em><strong>–ಉದ್ಧವ್ ಠಾಕ್ರೆ,ಶಿವಸೇನಾ ಮುಖ್ಯಸ್ಥ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಇತ್ತೀಚೆಗೆ ಬಂಧಿಸಲಾದ ಐವರು ಸಾಮಾಜಿಕ ಕಾರ್ಯಕರ್ತರು ನಿಷೇಧಿತ ಸಿಪಿಐ (ಮಾವೊವಾದಿ) ಗುಂಪಿನ ಜತೆ ಸಂಪರ್ಕ ಹೊಂದಿರುವುದನ್ನು ದೃಢಪಡಿಸುವ ಸಾಕ್ಷ್ಯಗಳು ದೊರೆತಿವೆ. ಆ ಕಾರಣಕ್ಕಾಗಿ ಅವರನ್ನು ಬಂಧಿಸಲಾಗಿದೆಯೇ ಹೊರತು ಭಿನ್ನ ನಿಲುವುಗಳನ್ನು ಹೊಂದಿದ್ದರು ಎಂಬುದಕ್ಕಲ್ಲ ಎಂದು ಮಹಾರಾಷ್ಟ್ರ ಸರ್ಕಾರವು ಸುಪ್ರೀಂ ಕೋರ್ಟ್ಗೆ ಬುಧವಾರ ತಿಳಿಸಿದೆ.</p>.<p>ಇತಿಹಾಸಕಾರ್ತಿ ರೊಮಿಲಾ ಥಾಪರ್,ಅರ್ಥಶಾಸ್ತ್ರಜ್ಞರಾದ ಪ್ರಭಾತ್ ಪಟ್ನಾಯಕ್ ಮತ್ತು ದೇವಕಿ ಜೈನ್, ಸಮಾಜಶಾಸ್ತ್ರಜ್ಞ ಸತೀಶ್ ದೇಶಪಾಂಡೆ ಮತ್ತು ಕಾನೂನು ತಜ್ಞೆ ಮಾಜಾ ದಾರೂವಾಲಾ ಅವರು ಬಂಧನವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಸಂಬಂಧಿಸಿ ಮಹಾರಾಷ್ಟ್ರ ಸರ್ಕಾರವು ಸುಪ್ರೀಂ ಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದೆ. ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಕ್ಕಾಗಿಯೇ ಅವರನ್ನು ಬಂಧಿಸಲಾಗಿದೆ ಎಂಬುದನ್ನು ಅಲ್ಲಗಳೆಯುವ ಸಾಕ್ಷ್ಯಗಳು ಇವೆ ಎಂದು ಪ್ರಮಾಣಪತ್ರದಲ್ಲಿ ಹೇಳಲಾಗಿದೆ.</p>.<p>ಪ್ರಕರಣಕ್ಕೆ ಸಂಬಂಧಿಸಿ ಅರ್ಜಿ ಸಲ್ಲಿಸಲು ಈ ಐವರಿಗೆ ಏನು ಹಕ್ಕಿದೆ ಎಂದು ಪ್ರಶ್ನಿಸಲಾಗಿದೆ.</p>.<p>ಮಹಾರಾಷ್ಟ್ರ ಪೊಲೀಸರು ದೇಶದ ವಿವಿಧ ಭಾಗಗಳಲ್ಲಿದ್ದ ಎಡಪಂಥೀಯ ಕಾರ್ಯಕರ್ತರ ಮನೆಗಳ ಮೇಲೆ ಆಗಸ್ಟ್ 28ರಂದು ರಾತ್ರಿ ದಾಳಿ ನಡೆಸಿ ಐವರನ್ನು ಬಂಧಿಸಿದ್ದರು. ಈ ಕಾರ್ಯಾಚರಣೆಯ ಬಗ್ಗೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.</p>.<p>ತೆಲುಗು ಕವಿ ವರವರ ರಾವ್ ಅವರನ್ನು ಹೈದರಾಬಾದ್ನಲ್ಲಿ ಬಂಧಿಸಲಾಗಿತ್ತು. ವೆರ್ನನ್ ಗೊನ್ಸಾಲ್ವೆಸ್ ಮತ್ತು ಅರುಣ್ ಫೆರೆರಾ ಅವರನ್ನು ಮುಂಬೈ ಹಾಗೂ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತೆ ಸುಧಾ ಬಾರಧ್ವಜ್ ಅವರನ್ನು ಫರೀದಾಬಾದ್, ನಾಗರಿಕ ಹಕ್ಕುಗಳ ಕಾರ್ಯಕರ್ತ ಗೌತಮ್ ನವ್ಲಖಾ ಅವರನ್ನು ದೆಹಲಿಯಲ್ಲಿ ಬಂಧಿಸಲಾಗಿತ್ತು. ಈ ಎಲ್ಲರನ್ನೂ ಇದೇ 6ರವರೆಗೆ (ಗುರುವಾರ) ಗೃಹ ಬಂಧನದಲ್ಲಿ ಇರಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು.</p>.<p>ಈ ಎಲ್ಲರೂ ಭೀಮಾ–ಕೋರೆಗಾಂವ್ ಹಿಂಸಾಚಾರದ ಜತೆ ನಂಟು ಹೊಂದಿದ್ದಾರೆ. ದೇಶದಾದ್ಯಂತ ಹಿಂಸಾಚಾರ ನಡೆಸುವ ಮತ್ತು ಭದ್ರತಾ ಪಡೆಗಳ ಮೇಲೆ ಹೊಂಚು ದಾಳಿ ನಡೆಸುವ ಪಿತೂರಿ ನಡೆಸಿದ್ದಾರೆ ಎಂಬ ಆರೋಪವನ್ನು ಇವರ ಮೇಲೆ ಹೊರಿಸಲಾಗಿತ್ತು.</p>.<p>ಎಲ್ಗಾರ್ ಪರಿಷತ್ ಡಿಸೆಂಬರ್ 31ರಂದು ನಡೆಸಿದ್ದ ಕಾರ್ಯಕ್ರಮವು ಭೀಮಾ–ಕೋರೆಗಾಂವ್ ಗ್ರಾಮದಲ್ಲಿ ಹಿಂಸಾಚಾರಕ್ಕೆ ತಿರುಗಿತ್ತು. ಇದರ ತನಿಖೆಯ ಭಾಗವಾಗಿ ಪೊಲೀಸರು ದಾಳಿಗಳನ್ನು ನಡೆಸಿದ್ದರು.</p>.<p>**</p>.<p>ನ್ಯಾಯಾಲಯ ನಿರ್ಧಾರ ಕೈಗೊಳ್ಳುವ ಮೊದಲೇ ಎಲ್ಲವನ್ನೂ ಬಹಿರಂಗಪಡಿಸಲಾಗುತ್ತದೆ. ನಗರ ನಕ್ಸಲರು, ಹಿಂದೂ ಉಗ್ರರು ಎಂಬ ಹಣೆಪಟ್ಟಿ ಕಟ್ಟುವ ಬದಲಿಗೆ ತಕ್ಷಣವೇ ಆರೋಪಪಟ್ಟಿ ಸಲ್ಲಿಸಿ.</p>.<p><em><strong>–ಉದ್ಧವ್ ಠಾಕ್ರೆ,ಶಿವಸೇನಾ ಮುಖ್ಯಸ್ಥ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>