<p><strong>ಚೆನ್ನೈ</strong>: ವಕ್ಫ್ ತಿದ್ದುಪಡಿ ಮಸೂದೆಯನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ನಟ, ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಇಂದು (ಶುಕ್ರವಾರ) ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿದೆ.</p><p>ಟಿವಿಕೆ ಪ್ರಧಾನ ಕಾರ್ಯದರ್ಶಿ ಎನ್.ಆನಂದ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. </p><p>‘ವಕ್ಫ್ ಮಸೂದೆಯನ್ನು ತಿರಸ್ಕರಿಸೋಣ’, ‘ಮುಸ್ಲಿಮರ ಹಕ್ಕುಗಳನ್ನು ಕಸಿದುಕೊಳ್ಳಬೇಡಿ’ ಮತ್ತು ‘ಅಲ್ಪಸಂಖ್ಯಾತರಿಗೆ ದ್ರೋಹ ಮಾಡಬೇಡಿ’ ಎಂಬ ಘೋಷಣೆಗಳನ್ನು ಕೂಗುತ್ತ ಪಕ್ಷದ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ.</p><p>ವಕ್ಫ್ ಆಸ್ತಿಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡಬಾರದು. ಮಸೂದೆ ಅಂಗೀಕಾರದೊಂದಿಗೆ ವಕ್ಫ್ ಆಸ್ತಿಗಳಿಗೆ ಕೇಂದ್ರ ಬೆದರಿಕೆ ಒಡ್ಡುತ್ತದೆ. ಮಸೂದೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದ್ದಾರೆ.</p><p>ಮಧುರೈ, ಕೊಯಮತ್ತೂರು, ತಿರುಚಿರಾಪಳ್ಳಿ, ತೂತುಕುಡಿ ಮತ್ತು ತಂಜಾವೂರುಗಳಲ್ಲಿ ಟಿವಿಕೆ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ವಕ್ಫ್ ತಿದ್ದುಪಡಿ ಮಸೂದೆಯನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ನಟ, ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಇಂದು (ಶುಕ್ರವಾರ) ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿದೆ.</p><p>ಟಿವಿಕೆ ಪ್ರಧಾನ ಕಾರ್ಯದರ್ಶಿ ಎನ್.ಆನಂದ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. </p><p>‘ವಕ್ಫ್ ಮಸೂದೆಯನ್ನು ತಿರಸ್ಕರಿಸೋಣ’, ‘ಮುಸ್ಲಿಮರ ಹಕ್ಕುಗಳನ್ನು ಕಸಿದುಕೊಳ್ಳಬೇಡಿ’ ಮತ್ತು ‘ಅಲ್ಪಸಂಖ್ಯಾತರಿಗೆ ದ್ರೋಹ ಮಾಡಬೇಡಿ’ ಎಂಬ ಘೋಷಣೆಗಳನ್ನು ಕೂಗುತ್ತ ಪಕ್ಷದ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ.</p><p>ವಕ್ಫ್ ಆಸ್ತಿಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡಬಾರದು. ಮಸೂದೆ ಅಂಗೀಕಾರದೊಂದಿಗೆ ವಕ್ಫ್ ಆಸ್ತಿಗಳಿಗೆ ಕೇಂದ್ರ ಬೆದರಿಕೆ ಒಡ್ಡುತ್ತದೆ. ಮಸೂದೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದ್ದಾರೆ.</p><p>ಮಧುರೈ, ಕೊಯಮತ್ತೂರು, ತಿರುಚಿರಾಪಳ್ಳಿ, ತೂತುಕುಡಿ ಮತ್ತು ತಂಜಾವೂರುಗಳಲ್ಲಿ ಟಿವಿಕೆ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>