ಇನ್ನೊಂದೆಡೆ ರಜನಿಕಾಂತ್, ಚಿರಂಜೀವಿ ಸೇರಿ ಹಲವು ನಟ–ನಟಿಯರಿಗೆ ರಾಮ ಮಂದಿರ ಕಾರ್ಯಕ್ರಮದ ಆಮಂತ್ರಣ ಹೋಗಿದೆ. ಆದರೆ, ಪ್ರಭಾಸ್ ಅವರಿಗೆ ಆಮಂತ್ರಣ ಹೋಗಿದೆಯೋ? ಇಲ್ಲವೋ? ಎಂಬುದನ್ನು ಅವರ ಕಡೆಯವರು ಸ್ಪಷ್ಟಪಡಿಸಿಲ್ಲ ಎಂದೂ ಹೇಳಿದೆ.
ಜ.22 ರಂದು ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ, ಮೈಸೂರಿನ ಅರುಣ್ ಯೋಗಿರಾಜ್ ಅವರು ಕೆತ್ತಿರುವ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ.
ಪ್ರಭಾಸ್ ಅಭಿನಯದ ಸಲಾರ್ ಪಾರ್ಟ್– 1 ಜ.20 ರಂದು ನೆಟ್ಫ್ಲಿಕ್ಸ್ ಒಟಿಟಿಯಲ್ಲಿ ತೆರೆಕಾಣಲಿದೆ.