<p><strong>ಚೆನ್ನೈ:</strong> ಭಾಷೆ ಎಂಬ ಗಂಭೀರ ವಿಷಯವನ್ನು ಕ್ಷುಲ್ಲಕಗೊಳಿಸಿರುವ ಬಿಜೆಪಿ ಮತ್ತು ಆಡಳಿತಾರೂಢ ಡಿಎಂಕೆ ಪಕ್ಷಗಳು ಸಾಮಾಜಿಕ ಮಾಧ್ಯಮದಲ್ಲಿ ಎಳೆಸುಗಳಂತೆ ಕಿತ್ತಾಡುತ್ತಿದ್ದಾರೆ ಎಂದು ನಟ, ರಾಜಕಾರಣಿ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸ್ಥಾಪಕ ವಿಜಯ್ ಆರೋಪಿಸಿದ್ದಾರೆ.</p><p>ಪಕ್ಷದ ವಾರ್ಷಿಕೋತ್ಸವ ಸಂಭ್ರಮಾಚರಣೆ ವೇಳೆ ಮಲ್ಲಪುರಂನಲ್ಲಿ ಮಾತನಾಡಿದ ವಿಜಯ್, ಬಿಜೆಪಿಯು ಡಿಎಂಕೆ ಪಕ್ಷದ #ಗೆಟ್ಔಟ್ಮೋದಿ ಅಭಿಯಾನಕ್ಕೆ #ಗೆಟ್ಔಟ್ಸ್ಟಾಲಿನ್ ಎನ್ನುವ ಅಭಿಯಾನ ಮಾಡಿತು. ಈ ಹ್ಯಾಷ್ಟ್ಯಾಗ್ ಜಗಳ ಎಲ್ಕೆಜಿ ಮತ್ತು ಯುಕೆಜಿ ಮಕ್ಕಳ ಕಿತ್ತಾಟದಂತಾಗಿದೆ ಎಂದರು.</p><p>ರಾಜ್ಯಗಳಿಗೆ ಅನುದಾನ ಕೊಡುವುದು ಕೇಂದ್ರದ ಕರ್ತವ್ಯ, ಅದನ್ನು ಪಡೆಯುವುದು ರಾಜ್ಯಗಳ ಹಕ್ಕು. ಆದರೆ ನಮ್ಮ ರಾಜಕೀಯ ಮತ್ತು ಸಿದ್ಧಾಂತ ವಿರೋಧಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹ್ಯಾಷ್ಟ್ಯಾಗ್ ಮೂಲಕ ಕಿತ್ತಾಡುತ್ತಿದ್ದಾರೆ. ಏನಾಗುತ್ತಿದೆ ಇಲ್ಲಿ? ಎಂದು ಪ್ರಶ್ನಿಸಿದರು.</p><p>ಟಿವಿಕೆ ಪಕ್ಷ ಎಲ್ಲಾ ಭಾಷೆಗಳನ್ನು ಗೌರವಿಸುತ್ತದೆ. ಆದರೆ ಬೇರೆ ಭಾಷೆಗೋಸ್ಕರ ಸ್ವಂತ ಗೌರವವನ್ನು ಬಿಟ್ಟುಕೊಡುವುದಿಲ್ಲ. ವೈಯಕ್ತಿಕವಾಗಿ ಯಾವ ಭಾಷೆಯನ್ನಾದರೂ ಕಲಿಯಬಹುದು. ಆದರೆ ರಾಜ್ಯ ಭಾಷೆಯನ್ನು ಬಿಟ್ಟು ಬೇರೆ ಭಾಷೆಯನ್ನು ಮುಂದಿಟ್ಟುಕೊಂಡು ಅದನ್ನು ರಾಜಕೀಯವಾಗಿ ಹೇರುವುದು ಸ್ವೀಕಾರಾರ್ಹವಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಭಾಷೆ ಎಂಬ ಗಂಭೀರ ವಿಷಯವನ್ನು ಕ್ಷುಲ್ಲಕಗೊಳಿಸಿರುವ ಬಿಜೆಪಿ ಮತ್ತು ಆಡಳಿತಾರೂಢ ಡಿಎಂಕೆ ಪಕ್ಷಗಳು ಸಾಮಾಜಿಕ ಮಾಧ್ಯಮದಲ್ಲಿ ಎಳೆಸುಗಳಂತೆ ಕಿತ್ತಾಡುತ್ತಿದ್ದಾರೆ ಎಂದು ನಟ, ರಾಜಕಾರಣಿ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸ್ಥಾಪಕ ವಿಜಯ್ ಆರೋಪಿಸಿದ್ದಾರೆ.</p><p>ಪಕ್ಷದ ವಾರ್ಷಿಕೋತ್ಸವ ಸಂಭ್ರಮಾಚರಣೆ ವೇಳೆ ಮಲ್ಲಪುರಂನಲ್ಲಿ ಮಾತನಾಡಿದ ವಿಜಯ್, ಬಿಜೆಪಿಯು ಡಿಎಂಕೆ ಪಕ್ಷದ #ಗೆಟ್ಔಟ್ಮೋದಿ ಅಭಿಯಾನಕ್ಕೆ #ಗೆಟ್ಔಟ್ಸ್ಟಾಲಿನ್ ಎನ್ನುವ ಅಭಿಯಾನ ಮಾಡಿತು. ಈ ಹ್ಯಾಷ್ಟ್ಯಾಗ್ ಜಗಳ ಎಲ್ಕೆಜಿ ಮತ್ತು ಯುಕೆಜಿ ಮಕ್ಕಳ ಕಿತ್ತಾಟದಂತಾಗಿದೆ ಎಂದರು.</p><p>ರಾಜ್ಯಗಳಿಗೆ ಅನುದಾನ ಕೊಡುವುದು ಕೇಂದ್ರದ ಕರ್ತವ್ಯ, ಅದನ್ನು ಪಡೆಯುವುದು ರಾಜ್ಯಗಳ ಹಕ್ಕು. ಆದರೆ ನಮ್ಮ ರಾಜಕೀಯ ಮತ್ತು ಸಿದ್ಧಾಂತ ವಿರೋಧಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹ್ಯಾಷ್ಟ್ಯಾಗ್ ಮೂಲಕ ಕಿತ್ತಾಡುತ್ತಿದ್ದಾರೆ. ಏನಾಗುತ್ತಿದೆ ಇಲ್ಲಿ? ಎಂದು ಪ್ರಶ್ನಿಸಿದರು.</p><p>ಟಿವಿಕೆ ಪಕ್ಷ ಎಲ್ಲಾ ಭಾಷೆಗಳನ್ನು ಗೌರವಿಸುತ್ತದೆ. ಆದರೆ ಬೇರೆ ಭಾಷೆಗೋಸ್ಕರ ಸ್ವಂತ ಗೌರವವನ್ನು ಬಿಟ್ಟುಕೊಡುವುದಿಲ್ಲ. ವೈಯಕ್ತಿಕವಾಗಿ ಯಾವ ಭಾಷೆಯನ್ನಾದರೂ ಕಲಿಯಬಹುದು. ಆದರೆ ರಾಜ್ಯ ಭಾಷೆಯನ್ನು ಬಿಟ್ಟು ಬೇರೆ ಭಾಷೆಯನ್ನು ಮುಂದಿಟ್ಟುಕೊಂಡು ಅದನ್ನು ರಾಜಕೀಯವಾಗಿ ಹೇರುವುದು ಸ್ವೀಕಾರಾರ್ಹವಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>