<p><strong>ಅಮರಾವತಿ/ಹೈದರಾಬಾದ್:</strong> ತೆಲುಗು ಚಿತ್ರರಂಗದ ಜನಪ್ರಿಯ ನಟ ಮತ್ತು ಲೇಖಕ ಪೋಸಾನಿ ಕೃಷ್ಣ ಮುರಳಿ ಅವರನ್ನು ಹೈದರಾಬಾದ್ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಕೃಷ್ಣ ಮುರಳಿ (66) ಅವರನ್ನು ಹೈದರಾಬಾದ್ನಲ್ಲಿ ರಾತ್ರಿ 8.45 ಕ್ಕೆ ಬಂಧಿಸಲಾಗಿದೆ ಎಂದು ಅನ್ನಮಯ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಕೃಷ್ಣರಾವ್ ಪಿಟಿಐಗೆ ಖಚಿತಪಡಿಸಿದ್ದಾರೆ.</p><p>ಹೈದರಾಬಾದ್ನ ಯಲ್ಲರೆಡ್ಡಿಗುಡಾದ ನ್ಯೂ ಸೈನ್ಸ್ ಕಾಲೋನಿ ಬಳಿಯ ಅವರ ನಿವಾಸದಿಂದ ಪೊಲೀಸರು ನಟನನ್ನು ಬಂಧಿಸಿ ಕರೆದೊಯ್ದಿದ್ದಾರೆ.</p><p>ಕೃಷ್ಣ ಮುರಳಿ ಅವರ ಪತ್ನಿಗೆ ನೀಡಿರುವ ಬಂಧನ ನೋಟಿಸ್ ಪ್ರಕಾರ, ಅವರನ್ನು ಬಿಎನ್ಎಸ್ ಸೆಕ್ಷನ್ 196,353 (2), ಮತ್ತು 111 ರೀಡ್ ಮತ್ತು ಬಿಎನ್ಎಸ್ಎಸ್ನ ಸೆಕ್ಷನ್ 47(1) ಮತ್ತು (2) ಅಡಿಯಲ್ಲಿ ಬಂಧಿಸಲಾಗಿದೆ.</p><p>ಆದರೆ, ನಟನ ಬಂಧನಕ್ಕೆ ಕಾರಣವೇನು ಎಂಬುದರ ಕುರಿತು ಹೆಚ್ಚಿನ ಸ್ಪಷ್ಟತೆ ಪೊಲೀಸರಿಂದ ನಿರೀಕ್ಷಿಸಲಾಗಿದೆ.</p><p>ಕೃಷ್ಣ ಮುರಳಿ ಮೇಲಿನ ಆರೋಪವು ಜಾಮೀನು ರಹಿತ ಸ್ವರೂಪದ್ದಾಗಿದ್ದು, ಅವರನ್ನು ರಾಜಂಪೇಟೆಯ 1ನೇ ಹೆಚ್ಚುವರಿ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.</p><p>ಸದ್ಯ ಪೊಲೀಸರು ನಟನನ್ನು ಆಂಧ್ರಪ್ರದೇಶಕ್ಕೆ ಶಿಫ್ಟ್ ಮಾಡುತ್ತಿದ್ದಾರೆ.</p><p>ಗನ್ನವರಂನ ಮಾಜಿ ಶಾಸಕ ಮತ್ತು ವೈಎಸ್ಆರ್ಸಿಪಿ ನಾಯಕ ವಲ್ಲಭನೇನಿ ವಂಶಿ ಬಂಧನದ ಬೆನ್ನಲ್ಲೇ ಕೃಷ್ಣ ಮುರಳಿ ಬಂಧನವಾಗಿದೆ.</p><p>ಕೃಷ್ಣ ಮುರಳಿ ಅವರು ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ಸಿಪಿಯೊಂದಿಗೆ ಗುರುತಿಸಿಕೊಂಡಿದ್ದು, ಹಿಂದಿನ ವೈಎಸ್ಆರ್ಸಿಪಿ ಆಡಳಿತದಲ್ಲಿ ಆಂಧ್ರಪ್ರದೇಶ ಚಲನಚಿತ್ರ, ಟಿವಿ ಮತ್ತು ರಂಗಭೂಮಿ ಅಭಿವೃದ್ಧಿ ನಿಗಮದ (ಎಪಿಎಫ್ಟಿಟಿಡಿಸಿ) ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ/ಹೈದರಾಬಾದ್:</strong> ತೆಲುಗು ಚಿತ್ರರಂಗದ ಜನಪ್ರಿಯ ನಟ ಮತ್ತು ಲೇಖಕ ಪೋಸಾನಿ ಕೃಷ್ಣ ಮುರಳಿ ಅವರನ್ನು ಹೈದರಾಬಾದ್ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಕೃಷ್ಣ ಮುರಳಿ (66) ಅವರನ್ನು ಹೈದರಾಬಾದ್ನಲ್ಲಿ ರಾತ್ರಿ 8.45 ಕ್ಕೆ ಬಂಧಿಸಲಾಗಿದೆ ಎಂದು ಅನ್ನಮಯ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಕೃಷ್ಣರಾವ್ ಪಿಟಿಐಗೆ ಖಚಿತಪಡಿಸಿದ್ದಾರೆ.</p><p>ಹೈದರಾಬಾದ್ನ ಯಲ್ಲರೆಡ್ಡಿಗುಡಾದ ನ್ಯೂ ಸೈನ್ಸ್ ಕಾಲೋನಿ ಬಳಿಯ ಅವರ ನಿವಾಸದಿಂದ ಪೊಲೀಸರು ನಟನನ್ನು ಬಂಧಿಸಿ ಕರೆದೊಯ್ದಿದ್ದಾರೆ.</p><p>ಕೃಷ್ಣ ಮುರಳಿ ಅವರ ಪತ್ನಿಗೆ ನೀಡಿರುವ ಬಂಧನ ನೋಟಿಸ್ ಪ್ರಕಾರ, ಅವರನ್ನು ಬಿಎನ್ಎಸ್ ಸೆಕ್ಷನ್ 196,353 (2), ಮತ್ತು 111 ರೀಡ್ ಮತ್ತು ಬಿಎನ್ಎಸ್ಎಸ್ನ ಸೆಕ್ಷನ್ 47(1) ಮತ್ತು (2) ಅಡಿಯಲ್ಲಿ ಬಂಧಿಸಲಾಗಿದೆ.</p><p>ಆದರೆ, ನಟನ ಬಂಧನಕ್ಕೆ ಕಾರಣವೇನು ಎಂಬುದರ ಕುರಿತು ಹೆಚ್ಚಿನ ಸ್ಪಷ್ಟತೆ ಪೊಲೀಸರಿಂದ ನಿರೀಕ್ಷಿಸಲಾಗಿದೆ.</p><p>ಕೃಷ್ಣ ಮುರಳಿ ಮೇಲಿನ ಆರೋಪವು ಜಾಮೀನು ರಹಿತ ಸ್ವರೂಪದ್ದಾಗಿದ್ದು, ಅವರನ್ನು ರಾಜಂಪೇಟೆಯ 1ನೇ ಹೆಚ್ಚುವರಿ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.</p><p>ಸದ್ಯ ಪೊಲೀಸರು ನಟನನ್ನು ಆಂಧ್ರಪ್ರದೇಶಕ್ಕೆ ಶಿಫ್ಟ್ ಮಾಡುತ್ತಿದ್ದಾರೆ.</p><p>ಗನ್ನವರಂನ ಮಾಜಿ ಶಾಸಕ ಮತ್ತು ವೈಎಸ್ಆರ್ಸಿಪಿ ನಾಯಕ ವಲ್ಲಭನೇನಿ ವಂಶಿ ಬಂಧನದ ಬೆನ್ನಲ್ಲೇ ಕೃಷ್ಣ ಮುರಳಿ ಬಂಧನವಾಗಿದೆ.</p><p>ಕೃಷ್ಣ ಮುರಳಿ ಅವರು ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ಸಿಪಿಯೊಂದಿಗೆ ಗುರುತಿಸಿಕೊಂಡಿದ್ದು, ಹಿಂದಿನ ವೈಎಸ್ಆರ್ಸಿಪಿ ಆಡಳಿತದಲ್ಲಿ ಆಂಧ್ರಪ್ರದೇಶ ಚಲನಚಿತ್ರ, ಟಿವಿ ಮತ್ತು ರಂಗಭೂಮಿ ಅಭಿವೃದ್ಧಿ ನಿಗಮದ (ಎಪಿಎಫ್ಟಿಟಿಡಿಸಿ) ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>