<p><strong>ನವದೆಹಲಿ:</strong> ಕೊರೊನಾ ಲಾಕ್ಡೌನ್ ಅವಧಿಯಲ್ಲಿ ತೊಂದರೆಗೆ ಸಿಲುಕಿದವರಿಗೆ ಸಹಾಯ ಮಾಡಿ ರಾಷ್ಟ್ರದಾದ್ಯಂತ ಗಮನ ಸೆಳೆದಿರುವ ಬಾಲಿವುಡ್ ನಟರಾದ ಅಕ್ಷಯ್ ಕುಮಾರ್ ಹಾಗೂ ಸೋನುಸೂದ್ ಅವರಿಗೆ ಭಾರತರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ಹಲವರು ಟ್ವಿಟರ್ನಲ್ಲಿ ಒತ್ತಾಯಿಸಿದ್ದಾರೆ.</p>.<p>ಇದಕ್ಕೆ ಪುರಾವೆಯನ್ನೂ ನೀಡಿರುವ ಟ್ವಿಟಿಗರು ಅಕ್ಷಯ್ ಕುಮಾರ್ ಪುಲ್ವಾಮದಲ್ಲಿ ಸೈನಿಕರ ಮೇಲೆ ದಾಳಿ, ಅಸ್ಸಾಂ ಪ್ರವಾಹ,<br />ಚೆನ್ನೈನಲ್ಲಿ ಸಂಭವಿಸಿದ ಪ್ರವಾಹ, ಕೊರೊನಾ ಅವಧಿಯಲ್ಲಿ ಸಮಸ್ಯೆಗೆ ಸಿಲುಕಿದವರಿಗೆ ಸಹಾಯ ಮಾಡಿರುವುದು, ಸೋನು ಸೂದ್<br />ಕೊರೊನಾ ಸಮಯದಲ್ಲಿ ವಲಸೆ ಕಾರ್ಮಿಕರು ಅವರ ಸ್ವಂತ ಸ್ಥಳಕ್ಕೆ ತಲುಪಲು ಸ್ವಂತ ಹಣದಲ್ಲಿ ಬಸ್ ವ್ಯವಸ್ಥೆ ಮಾಡಿರುವುದು,<br />ಕೊರೊನಾ ಸೇವೆಯಲ್ಲಿ ತೊಡಗಿದ್ದವರಿಗೆ ತಮ್ಮ ಹೋಟೆಲ್ ಸಂಪೂರ್ಣ ಬಿಟ್ಟುಕೊಟ್ಟಿರುವುದು, 1500 ಪಿಪಿಇ ಕಿಟ್ಗಳನ್ನು ವೈದ್ಯರಿಗೆ ನೀಡಿರುವುದನ್ನು ಗಮನಿಸಿದರೆ ಇವರಿಗೆ ಜನರ ಮೇಲೆ ಇರುವ ಸೇವಾ ಮನೋಭಾವವನ್ನು ಎತ್ತಿ ತೋರಿಸುತ್ತದೆ ಎಂದಿದ್ದಾರೆ.</p>.<p>ಈ ಕುರಿತ ಟ್ವೀಟ್ಗಳು ಟ್ರೆಂಡ್ ಆಗಿವೆ. ಇವೆಲ್ಲಾ ಆರಂಭವಾಗಿದ್ದು, ಸುಹೇಲ್ ಎಂಬುವವರು ಟ್ವೀಟ್ ಮಾಡಿ ಮಾಜಿ ಪ್ರಧಾನಿ ದಿವಂಗತ<br />ಪಿ.ವಿ.ನರಸಿಂಹರಾವ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಒತ್ತಾಯಿಸಿದರು. ಇದುವರೆಗೆ ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರಿಗೆ ಮರಣೋತ್ತರ ಭಾರತರತ್ನ ಪ್ರಶಸ್ತಿ ನೀಡಿಲ್ಲ. ನರಸಿಂಹರಾವ್ ಯಾರದ್ದೇ ಸೇವಕರಾಗಿರಲಿಲ್ಲ. ತಮ್ಮದೇ ನಿರ್ಧಾರಗಳಿಂದ ದೇಶಕ್ಕೆ ಉತ್ತಮ ಕೊಡುಗೆಗಳನ್ನು ನೀಡಿದ್ದವರು. ಈಗಲಾದರೂ ಈ ಸರ್ಕಾರ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಆಗ್ರಹಿಸಿದ್ದಾರೆ.</p>.<p>2014ರ ಜೂನ್ 28ರಂದು ನರಸಿಂಹರಾವ್ ಹುಟ್ಟುಹಬ್ಬದ ದಿನ ಕೆಸಿಆರ್ ಕೂಡ ನರಸಿಂಹರಾವ್ ಅವರಿಗೆ ಭಾರತರತ್ನ ಪ್ರಶಸ್ತಿ ಕೊಡಬೇಕೆಂದು ಒತ್ತಾಯಿಸಿದ್ದರು. ಇದಲ್ಲದೆ, ಟ್ವಿಟಗರು ಫೀಲ್ಡ್ ಮಾರ್ಷಲ್ ಕಾರಿಯಪ್ಪ, ಪದ್ಮಭೂಷಣ, ಪದ್ಮವಿಭೂಷಣ ಸಾಮ್ ಮಾಣಿಕ್ ಷಾ ಅವರಿಗೂ ಭಾರತ ರತ್ನ ನೀಡಬೇಕೆಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೊರೊನಾ ಲಾಕ್ಡೌನ್ ಅವಧಿಯಲ್ಲಿ ತೊಂದರೆಗೆ ಸಿಲುಕಿದವರಿಗೆ ಸಹಾಯ ಮಾಡಿ ರಾಷ್ಟ್ರದಾದ್ಯಂತ ಗಮನ ಸೆಳೆದಿರುವ ಬಾಲಿವುಡ್ ನಟರಾದ ಅಕ್ಷಯ್ ಕುಮಾರ್ ಹಾಗೂ ಸೋನುಸೂದ್ ಅವರಿಗೆ ಭಾರತರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ಹಲವರು ಟ್ವಿಟರ್ನಲ್ಲಿ ಒತ್ತಾಯಿಸಿದ್ದಾರೆ.</p>.<p>ಇದಕ್ಕೆ ಪುರಾವೆಯನ್ನೂ ನೀಡಿರುವ ಟ್ವಿಟಿಗರು ಅಕ್ಷಯ್ ಕುಮಾರ್ ಪುಲ್ವಾಮದಲ್ಲಿ ಸೈನಿಕರ ಮೇಲೆ ದಾಳಿ, ಅಸ್ಸಾಂ ಪ್ರವಾಹ,<br />ಚೆನ್ನೈನಲ್ಲಿ ಸಂಭವಿಸಿದ ಪ್ರವಾಹ, ಕೊರೊನಾ ಅವಧಿಯಲ್ಲಿ ಸಮಸ್ಯೆಗೆ ಸಿಲುಕಿದವರಿಗೆ ಸಹಾಯ ಮಾಡಿರುವುದು, ಸೋನು ಸೂದ್<br />ಕೊರೊನಾ ಸಮಯದಲ್ಲಿ ವಲಸೆ ಕಾರ್ಮಿಕರು ಅವರ ಸ್ವಂತ ಸ್ಥಳಕ್ಕೆ ತಲುಪಲು ಸ್ವಂತ ಹಣದಲ್ಲಿ ಬಸ್ ವ್ಯವಸ್ಥೆ ಮಾಡಿರುವುದು,<br />ಕೊರೊನಾ ಸೇವೆಯಲ್ಲಿ ತೊಡಗಿದ್ದವರಿಗೆ ತಮ್ಮ ಹೋಟೆಲ್ ಸಂಪೂರ್ಣ ಬಿಟ್ಟುಕೊಟ್ಟಿರುವುದು, 1500 ಪಿಪಿಇ ಕಿಟ್ಗಳನ್ನು ವೈದ್ಯರಿಗೆ ನೀಡಿರುವುದನ್ನು ಗಮನಿಸಿದರೆ ಇವರಿಗೆ ಜನರ ಮೇಲೆ ಇರುವ ಸೇವಾ ಮನೋಭಾವವನ್ನು ಎತ್ತಿ ತೋರಿಸುತ್ತದೆ ಎಂದಿದ್ದಾರೆ.</p>.<p>ಈ ಕುರಿತ ಟ್ವೀಟ್ಗಳು ಟ್ರೆಂಡ್ ಆಗಿವೆ. ಇವೆಲ್ಲಾ ಆರಂಭವಾಗಿದ್ದು, ಸುಹೇಲ್ ಎಂಬುವವರು ಟ್ವೀಟ್ ಮಾಡಿ ಮಾಜಿ ಪ್ರಧಾನಿ ದಿವಂಗತ<br />ಪಿ.ವಿ.ನರಸಿಂಹರಾವ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಒತ್ತಾಯಿಸಿದರು. ಇದುವರೆಗೆ ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರಿಗೆ ಮರಣೋತ್ತರ ಭಾರತರತ್ನ ಪ್ರಶಸ್ತಿ ನೀಡಿಲ್ಲ. ನರಸಿಂಹರಾವ್ ಯಾರದ್ದೇ ಸೇವಕರಾಗಿರಲಿಲ್ಲ. ತಮ್ಮದೇ ನಿರ್ಧಾರಗಳಿಂದ ದೇಶಕ್ಕೆ ಉತ್ತಮ ಕೊಡುಗೆಗಳನ್ನು ನೀಡಿದ್ದವರು. ಈಗಲಾದರೂ ಈ ಸರ್ಕಾರ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಆಗ್ರಹಿಸಿದ್ದಾರೆ.</p>.<p>2014ರ ಜೂನ್ 28ರಂದು ನರಸಿಂಹರಾವ್ ಹುಟ್ಟುಹಬ್ಬದ ದಿನ ಕೆಸಿಆರ್ ಕೂಡ ನರಸಿಂಹರಾವ್ ಅವರಿಗೆ ಭಾರತರತ್ನ ಪ್ರಶಸ್ತಿ ಕೊಡಬೇಕೆಂದು ಒತ್ತಾಯಿಸಿದ್ದರು. ಇದಲ್ಲದೆ, ಟ್ವಿಟಗರು ಫೀಲ್ಡ್ ಮಾರ್ಷಲ್ ಕಾರಿಯಪ್ಪ, ಪದ್ಮಭೂಷಣ, ಪದ್ಮವಿಭೂಷಣ ಸಾಮ್ ಮಾಣಿಕ್ ಷಾ ಅವರಿಗೂ ಭಾರತ ರತ್ನ ನೀಡಬೇಕೆಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>