<p><strong>ನವದೆಹಲಿ:</strong> ಅದಾನಿ ಸಮೂಹವು, ಮಧ್ಯಪ್ರದೇಶದಲ್ಲಿ ಕಲ್ಲಿದ್ದಲು ಗಣಿ ಯೋಜನೆಗಾಗಿ ಸರ್ಕಾರಿ ಮತ್ತು ಅರಣ್ಯ ಪ್ರದೇಶದಲ್ಲಿನ ಮರಗಳನ್ನು ಕಡಿಯುವ ಮೂಲಕ ಅರಣ್ಯ ಹಕ್ಕುಗಳ ಕಾಯ್ದೆಯನ್ನು (ಎಫ್ಆರ್ಎ) ಸ್ಪಷ್ಟವಾಗಿ ಉಲ್ಲಂಘಿಸಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಆರೋಪಿಸಿದ್ದಾರೆ. </p>.<p>ಮಧ್ಯಪ್ರದೇಶ ಸರ್ಕಾರ ಈ ಆರೋಪವನ್ನು ಆಧಾರರಹಿತ ಎಂದು ಅಲ್ಲಗಳೆದಿದ್ದು, ಕೇಂದ್ರ ಪರಿಸರ ಸಚಿವಾಲಯವು ಈ ಯೋಜನೆಗೆ ಅಂತಿಮ ಅನುಮೋದನೆ ನೀಡಿದೆ ಎಂದು ಹೇಳಿದೆ. </p>.<p>‘ಮೋದಿ ಸರ್ಕಾರವು 2019ರಲ್ಲಿ ಅದಾನಿ ಸಮೂಹಕ್ಕೆ ಈ ಯೋಜನೆಯನ್ನು ಹಂಚಿಕೆ ಮಾಡಿತ್ತು. 2025ರಲ್ಲಿ ಯಾವುದೇ ಕಾನೂನಿನ ಅನುಮತಿಗಳನ್ನು ಪಡೆಯದೆ ಯೋಜನೆ ಜಾರಿಗೊಳಿಸಲಾಗುತ್ತಿದೆ. ಇದು ‘ಮೋದಾನಿ’ ಕಾನೂನು ವ್ಯವಸ್ಥೆ‘ ಎಂದು ಜೈರಾಮ್ ರಮೇಶ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. </p>.<p>ಧಿರೌಲಿಯಲ್ಲಿ ‘ಎಫ್ಆರ್ಎ’ ಉಲ್ಲಂಘಿಸಿ ಮರಗಳನ್ನು ಕಡಿಯಲಾಗಿದೆ. ಇಲ್ಲಿನ ಗ್ರಾಮಸ್ಥರು, ಸ್ಥಳೀಯ ಬುಡಕಟ್ಟು ಪಂಗಡ ಇದರ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅದಾನಿ ಸಮೂಹವು, ಮಧ್ಯಪ್ರದೇಶದಲ್ಲಿ ಕಲ್ಲಿದ್ದಲು ಗಣಿ ಯೋಜನೆಗಾಗಿ ಸರ್ಕಾರಿ ಮತ್ತು ಅರಣ್ಯ ಪ್ರದೇಶದಲ್ಲಿನ ಮರಗಳನ್ನು ಕಡಿಯುವ ಮೂಲಕ ಅರಣ್ಯ ಹಕ್ಕುಗಳ ಕಾಯ್ದೆಯನ್ನು (ಎಫ್ಆರ್ಎ) ಸ್ಪಷ್ಟವಾಗಿ ಉಲ್ಲಂಘಿಸಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಆರೋಪಿಸಿದ್ದಾರೆ. </p>.<p>ಮಧ್ಯಪ್ರದೇಶ ಸರ್ಕಾರ ಈ ಆರೋಪವನ್ನು ಆಧಾರರಹಿತ ಎಂದು ಅಲ್ಲಗಳೆದಿದ್ದು, ಕೇಂದ್ರ ಪರಿಸರ ಸಚಿವಾಲಯವು ಈ ಯೋಜನೆಗೆ ಅಂತಿಮ ಅನುಮೋದನೆ ನೀಡಿದೆ ಎಂದು ಹೇಳಿದೆ. </p>.<p>‘ಮೋದಿ ಸರ್ಕಾರವು 2019ರಲ್ಲಿ ಅದಾನಿ ಸಮೂಹಕ್ಕೆ ಈ ಯೋಜನೆಯನ್ನು ಹಂಚಿಕೆ ಮಾಡಿತ್ತು. 2025ರಲ್ಲಿ ಯಾವುದೇ ಕಾನೂನಿನ ಅನುಮತಿಗಳನ್ನು ಪಡೆಯದೆ ಯೋಜನೆ ಜಾರಿಗೊಳಿಸಲಾಗುತ್ತಿದೆ. ಇದು ‘ಮೋದಾನಿ’ ಕಾನೂನು ವ್ಯವಸ್ಥೆ‘ ಎಂದು ಜೈರಾಮ್ ರಮೇಶ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. </p>.<p>ಧಿರೌಲಿಯಲ್ಲಿ ‘ಎಫ್ಆರ್ಎ’ ಉಲ್ಲಂಘಿಸಿ ಮರಗಳನ್ನು ಕಡಿಯಲಾಗಿದೆ. ಇಲ್ಲಿನ ಗ್ರಾಮಸ್ಥರು, ಸ್ಥಳೀಯ ಬುಡಕಟ್ಟು ಪಂಗಡ ಇದರ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>