<p><strong>ನವದೆಹಲಿ :</strong> ಷೇರು ಮಾರುಕಟ್ಟೆ ನಿಯಂತ್ರಣ ವ್ಯವಸ್ಥೆಯನ್ನು ಬಲಪಡಿಸುವ ಸಲುವಾಗಿ ತಜ್ಞರ ಸಮಿತಿ ರಚಿಸುವ ಸಲಹೆಗೆ ಸಂಬಂಧಿಸಿದ ಮಾಹಿತಿಯನ್ನು ಮುಚ್ಚಿದ ಲಕೋಟೆಯಲ್ಲಿ ಸ್ವೀಕರಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.</p>.<p>ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು, ತಜ್ಞರ ಸಮಿತಿ ರಚಿಸುವ ಕುರಿತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮಂಡಿಸಿದ ವಾದ ಆಲಿಸಿದ ಬಳಿಕ ಈ ನಿಲುವನ್ನು ಪ್ರಕಟಿಸಿತು. ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ ಹಾಗೂ ಜೆ.ಬಿ.ಪಾರ್ದೀವಾಲಾ ಈ ಪೀಠದಲ್ಲಿದ್ದಾರೆ.</p>.<p>‘ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರ ಹಿತರಕ್ಷಣೆ ಮುಖ್ಯ. ಹೀಗಾಗಿ ಈ ವಿಷಯದಲ್ಲಿ ಸಂಪೂರ್ಣ ಪಾರದರ್ಶಕತೆ ಅಗತ್ಯ’ ಎಂದು ನ್ಯಾಯಪೀಠ ಹೇಳಿತು. ಅಲ್ಲದೇ, ಹಾಲಿ ನ್ಯಾಯಮೂರ್ತಿಯೊಬ್ಬರಿಂದ ಉದ್ದೇಶಿತ ತಜ್ಞರ ಸಮಿತಿಯ ಕಾರ್ಯನಿರ್ವಹಣೆಯ ಮೇಲ್ವಿಚಾರಣೆ ನಡೆಸುವ ಸಾಧ್ಯತೆಯನ್ನು ತಳ್ಳಿ ಹಾಕಿತು.</p>.<p>‘ತಜ್ಞರ ಸಮಿತಿಯೊಂದನ್ನು ರಚಿಸಲಾಗುವುದು. ಆಗ, ನ್ಯಾಯಾಲಯದ ಬಗ್ಗೆ ಎಲ್ಲರಲ್ಲೂ ವಿಶ್ವಾಸ ಮೂಡುತ್ತದೆ. ಈ ವಿಷಯ ಕುರಿತ ವಿಚಾರಣೆಯನ್ನು ಸುಪ್ರೀಂ ಕೋರ್ಟ್ನ ಹಾಲಿ ನ್ಯಾಯಮೂರ್ತಿ ನಡೆಸುವರು, ಆದರೆ ಅವರು ಸಮಿತಿಯ ಭಾಗವಾಗಿರುವುದಿಲ್ಲ’<br />ಎಂದು ಮುಖ್ಯನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು.</p>.<p>ಹಿಂಡನ್ಬರ್ಗ್ ರಿಸರ್ಚ್ನ ವರದಿಯ ನಂತರ ಅದಾನಿ ಸಮೂಹದ ಷೇರುಗಳ ಮೌಲ್ಯದಲ್ಲಿ ಸುಮಾರು ₹10 ಲಕ್ಷ ಕೋಟಿಯಷ್ಟು ನಷ್ಟವಾಗಿದೆ. ಇದರಿಂದ ದೇಶದ ಹೂಡಿಕೆದಾರರಿಗೆ ನಷ್ಟವಾಗಿದೆ. ಇಂತಹ ನಷ್ಟವನ್ನು ತಪ್ಪಿಸಲು ಅಗತ್ಯ ವ್ಯವಸ್ಥೆ ಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಹಲವು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಕಳೆದ ವಾರ ವಿಚಾರಣೆಗೆ ಎತ್ತಿಕೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ :</strong> ಷೇರು ಮಾರುಕಟ್ಟೆ ನಿಯಂತ್ರಣ ವ್ಯವಸ್ಥೆಯನ್ನು ಬಲಪಡಿಸುವ ಸಲುವಾಗಿ ತಜ್ಞರ ಸಮಿತಿ ರಚಿಸುವ ಸಲಹೆಗೆ ಸಂಬಂಧಿಸಿದ ಮಾಹಿತಿಯನ್ನು ಮುಚ್ಚಿದ ಲಕೋಟೆಯಲ್ಲಿ ಸ್ವೀಕರಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.</p>.<p>ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು, ತಜ್ಞರ ಸಮಿತಿ ರಚಿಸುವ ಕುರಿತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮಂಡಿಸಿದ ವಾದ ಆಲಿಸಿದ ಬಳಿಕ ಈ ನಿಲುವನ್ನು ಪ್ರಕಟಿಸಿತು. ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ ಹಾಗೂ ಜೆ.ಬಿ.ಪಾರ್ದೀವಾಲಾ ಈ ಪೀಠದಲ್ಲಿದ್ದಾರೆ.</p>.<p>‘ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರ ಹಿತರಕ್ಷಣೆ ಮುಖ್ಯ. ಹೀಗಾಗಿ ಈ ವಿಷಯದಲ್ಲಿ ಸಂಪೂರ್ಣ ಪಾರದರ್ಶಕತೆ ಅಗತ್ಯ’ ಎಂದು ನ್ಯಾಯಪೀಠ ಹೇಳಿತು. ಅಲ್ಲದೇ, ಹಾಲಿ ನ್ಯಾಯಮೂರ್ತಿಯೊಬ್ಬರಿಂದ ಉದ್ದೇಶಿತ ತಜ್ಞರ ಸಮಿತಿಯ ಕಾರ್ಯನಿರ್ವಹಣೆಯ ಮೇಲ್ವಿಚಾರಣೆ ನಡೆಸುವ ಸಾಧ್ಯತೆಯನ್ನು ತಳ್ಳಿ ಹಾಕಿತು.</p>.<p>‘ತಜ್ಞರ ಸಮಿತಿಯೊಂದನ್ನು ರಚಿಸಲಾಗುವುದು. ಆಗ, ನ್ಯಾಯಾಲಯದ ಬಗ್ಗೆ ಎಲ್ಲರಲ್ಲೂ ವಿಶ್ವಾಸ ಮೂಡುತ್ತದೆ. ಈ ವಿಷಯ ಕುರಿತ ವಿಚಾರಣೆಯನ್ನು ಸುಪ್ರೀಂ ಕೋರ್ಟ್ನ ಹಾಲಿ ನ್ಯಾಯಮೂರ್ತಿ ನಡೆಸುವರು, ಆದರೆ ಅವರು ಸಮಿತಿಯ ಭಾಗವಾಗಿರುವುದಿಲ್ಲ’<br />ಎಂದು ಮುಖ್ಯನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು.</p>.<p>ಹಿಂಡನ್ಬರ್ಗ್ ರಿಸರ್ಚ್ನ ವರದಿಯ ನಂತರ ಅದಾನಿ ಸಮೂಹದ ಷೇರುಗಳ ಮೌಲ್ಯದಲ್ಲಿ ಸುಮಾರು ₹10 ಲಕ್ಷ ಕೋಟಿಯಷ್ಟು ನಷ್ಟವಾಗಿದೆ. ಇದರಿಂದ ದೇಶದ ಹೂಡಿಕೆದಾರರಿಗೆ ನಷ್ಟವಾಗಿದೆ. ಇಂತಹ ನಷ್ಟವನ್ನು ತಪ್ಪಿಸಲು ಅಗತ್ಯ ವ್ಯವಸ್ಥೆ ಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಹಲವು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಕಳೆದ ವಾರ ವಿಚಾರಣೆಗೆ ಎತ್ತಿಕೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>