<p><strong>ನವದೆಹಲಿ:</strong> ‘ಶೆಲ್ ಕಂಪನಿಗಳ ಮೂಲಕ ಹಣ ಅಕ್ರಮ ವರ್ಗಾವಣೆ ಸೇರಿದಂತೆ ಅದಾನಿ ಸಮೂಹ ವಿರುದ್ಧದ ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿ ಕೂಡಲೇ ತನಿಖೆ ಆರಂಭಿಸಬೇಕು’ ಎಂದು ಒತ್ತಾಯಿಸಿ ವಿವಿಧ ವಿರೋಧ ಪಕ್ಷಗಳ ನಾಯಕರು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಬುಧವಾರ ಪತ್ರ ಬರೆದಿದ್ದಾರೆ.</p>.<p>‘ಅದಾನಿ ಸಮೂಹದ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಇ.ಡಿ ಮೌನ ತಾಳಬಾರದು ಹಾಗೂ ತನಗಿರುವ ಅಧಿಕಾರವನ್ನು ಬಿಟ್ಟುಕೊಡಬಾರದು ’ ಎಂದು ಇ.ಡಿ ನಿರ್ದೇಶಕ ಎಸ್.ಕೆ.ಮಿಶ್ರಾ ಅವರಿಗೆ ಇ–ಮೇಲ್ ಮೂಲಕ ಕಳಿಸಿರುವ ಪತ್ರದಲ್ಲಿ ವಿವರಿಸಿದ್ದಾರೆ.</p>.<p>ಕಾಂಗ್ರೆಸ್, ಸಿಪಿಐ, ಸಿಪಿಎಂ, ಜೆಡಿಯು, ಶಿವಸೇನಾ (ಉದ್ಧವ್ ಠಾಕ್ರೆ ಬಣ), ಆರ್ಜೆಡಿ, ಡಿಎಂಕೆ, ಜೆಎಂಎಂ, ಎಎಪಿ, ಐಯುಎಂಎಲ್, ವಿಸಿಕೆ, ಕೇರಳ ಕಾಂಗ್ರೆಸ್ ಪಕ್ಷಗಳ ನಾಯಕರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ.</p>.<p>‘ಇತ್ತೀಚಿನ ದಿನಗಳಲ್ಲಿ ಜಾರಿ ನಿರ್ದೇಶನಾಲಯವು ರಾಜಕೀಯವಾಗಿ ಅನುಕೂಲ ಮಾಡಿಕೊಟ್ಟಿದೆ ಎನ್ನಲಾದ ರೀತಿಯಲ್ಲಿ ಕೆಲ ಪ್ರಕರಣಗಳಲ್ಲಿ ತನಿಖೆ ನಡೆಸಿರುವುದು ನಮಗೆ ತಿಳಿದಿದೆ. ಅದಾನಿ ಸಮೂಹದ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸಲು ಸುಪ್ರೀಂಕೋರ್ಟ್ ನೇಮಿಸಿರುವ ಆಯೋಗದ ಮಿತಿಗಳ ಬಗ್ಗೆಯೂ ಅರಿವಿದೆ. ಹೀಗಾಗಿ, ಈ ವಿಷಯದಲ್ಲಿ ಇ.ಡಿ ತನ್ನ ಕಾರ್ಯವ್ಯಾಪ್ತಿ ಹಾಗೂ ಜವಾಬ್ದಾರಿಯಿಂದ ವಿಮುಖವಾಗುವುದು ಸರಿಯಲ್ಲ’ ಎಂದೂ ಅವರು ಪತ್ರದಲ್ಲಿ ವಿವರಿಸಿದ್ದಾರೆ.</p>.<p>ಪೊಲೀಸರಿಂದ ತಡೆ: ಇದಕ್ಕೂ ಮುನ್ನ, ವಿರೋಧ ಪಕ್ಷಗಳ ಮುಖಂಡರು, ದೂರು ಸಲ್ಲಿಸುವ ಸಲುವಾಗಿ ಸಂಸತ್ ಭವನದಿಂದ ಇ.ಡಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಕೈಗೊಂಡರು. ಆದರೆ, ಪೊಲೀಸರು ಇದಕ್ಕೆ ಅವಕಾಶ ನೀಡದೇ, ವಿಜಯ ಚೌಕದಲ್ಲಿಯೇ ವಿಪಕ್ಷಗಳ ನಾಯಕರನ್ನು ತಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಶೆಲ್ ಕಂಪನಿಗಳ ಮೂಲಕ ಹಣ ಅಕ್ರಮ ವರ್ಗಾವಣೆ ಸೇರಿದಂತೆ ಅದಾನಿ ಸಮೂಹ ವಿರುದ್ಧದ ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿ ಕೂಡಲೇ ತನಿಖೆ ಆರಂಭಿಸಬೇಕು’ ಎಂದು ಒತ್ತಾಯಿಸಿ ವಿವಿಧ ವಿರೋಧ ಪಕ್ಷಗಳ ನಾಯಕರು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಬುಧವಾರ ಪತ್ರ ಬರೆದಿದ್ದಾರೆ.</p>.<p>‘ಅದಾನಿ ಸಮೂಹದ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಇ.ಡಿ ಮೌನ ತಾಳಬಾರದು ಹಾಗೂ ತನಗಿರುವ ಅಧಿಕಾರವನ್ನು ಬಿಟ್ಟುಕೊಡಬಾರದು ’ ಎಂದು ಇ.ಡಿ ನಿರ್ದೇಶಕ ಎಸ್.ಕೆ.ಮಿಶ್ರಾ ಅವರಿಗೆ ಇ–ಮೇಲ್ ಮೂಲಕ ಕಳಿಸಿರುವ ಪತ್ರದಲ್ಲಿ ವಿವರಿಸಿದ್ದಾರೆ.</p>.<p>ಕಾಂಗ್ರೆಸ್, ಸಿಪಿಐ, ಸಿಪಿಎಂ, ಜೆಡಿಯು, ಶಿವಸೇನಾ (ಉದ್ಧವ್ ಠಾಕ್ರೆ ಬಣ), ಆರ್ಜೆಡಿ, ಡಿಎಂಕೆ, ಜೆಎಂಎಂ, ಎಎಪಿ, ಐಯುಎಂಎಲ್, ವಿಸಿಕೆ, ಕೇರಳ ಕಾಂಗ್ರೆಸ್ ಪಕ್ಷಗಳ ನಾಯಕರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ.</p>.<p>‘ಇತ್ತೀಚಿನ ದಿನಗಳಲ್ಲಿ ಜಾರಿ ನಿರ್ದೇಶನಾಲಯವು ರಾಜಕೀಯವಾಗಿ ಅನುಕೂಲ ಮಾಡಿಕೊಟ್ಟಿದೆ ಎನ್ನಲಾದ ರೀತಿಯಲ್ಲಿ ಕೆಲ ಪ್ರಕರಣಗಳಲ್ಲಿ ತನಿಖೆ ನಡೆಸಿರುವುದು ನಮಗೆ ತಿಳಿದಿದೆ. ಅದಾನಿ ಸಮೂಹದ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸಲು ಸುಪ್ರೀಂಕೋರ್ಟ್ ನೇಮಿಸಿರುವ ಆಯೋಗದ ಮಿತಿಗಳ ಬಗ್ಗೆಯೂ ಅರಿವಿದೆ. ಹೀಗಾಗಿ, ಈ ವಿಷಯದಲ್ಲಿ ಇ.ಡಿ ತನ್ನ ಕಾರ್ಯವ್ಯಾಪ್ತಿ ಹಾಗೂ ಜವಾಬ್ದಾರಿಯಿಂದ ವಿಮುಖವಾಗುವುದು ಸರಿಯಲ್ಲ’ ಎಂದೂ ಅವರು ಪತ್ರದಲ್ಲಿ ವಿವರಿಸಿದ್ದಾರೆ.</p>.<p>ಪೊಲೀಸರಿಂದ ತಡೆ: ಇದಕ್ಕೂ ಮುನ್ನ, ವಿರೋಧ ಪಕ್ಷಗಳ ಮುಖಂಡರು, ದೂರು ಸಲ್ಲಿಸುವ ಸಲುವಾಗಿ ಸಂಸತ್ ಭವನದಿಂದ ಇ.ಡಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಕೈಗೊಂಡರು. ಆದರೆ, ಪೊಲೀಸರು ಇದಕ್ಕೆ ಅವಕಾಶ ನೀಡದೇ, ವಿಜಯ ಚೌಕದಲ್ಲಿಯೇ ವಿಪಕ್ಷಗಳ ನಾಯಕರನ್ನು ತಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>