<p><strong>ಲಖನೌ</strong>: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವೇಳೆ ಜಾತಿ ವಿವರವನ್ನೂ ಸಂಗ್ರಹಿಸಬೇಕು. ರಾಜ್ಯದಲ್ಲಿ ಸಾಮಾಜಿಕ ನ್ಯಾಯವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅದು ಅಗತ್ಯ ಎಂದು ಸಮಾಜವಾದಿ ಪಕ್ಷದ (ಎಸ್ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಶುಕ್ರವಾರ ಹೇಳಿದ್ದಾರೆ.</p><p>ಪಕ್ಷದ ಪ್ರಧಾನ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಅಖಿಲೇಶ್, ಅಧಿಕಾರಿಗಳು ಎಸ್ಐಆರ್ ವೇಳೆ ಮತದಾರರ ಮಾಹಿತಿ ಪಡೆಯಲು ಮನೆ ಮನೆಗಳಿಗೆ ಭೇಟಿ ನೀಡಲಿದ್ದಾರೆ. ಅದೇ ವೇಳೆ ಜಾತಿ ದತ್ತಾಂಶ ಸಂಗ್ರಹಿಸಲು ಉತ್ತಮ ಅವಕಾಶವಿದೆ ಎಂದಿದ್ದಾರೆ.</p><p>ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 150ನೇ ವರ್ಷದ ಜಯಂತಿ ಪ್ರಯುಕ್ತ ಎಸ್ಪಿ ಕಚೇರಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆ ವೇಳೆ ಅವರು, 'ಇಷ್ಟು ದೊಡ್ಡ ಕಾರ್ಯಕ್ರಮ ಪ್ರಗತಿಯಲ್ಲಿದೆ. ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಅಧಿಕಾರಿಗಳು ಪ್ರತಿಯೊಂದು ಮನೆಗೂ ಭೇಟಿ ನೀಡುತ್ತಿದ್ದಾರೆ. ಜಾತಿ ಮಾಹಿತಿಯನ್ನೂ ಸಂಗ್ರಹಿಸಲು ಒಂದೇಒಂದು ಹೆಚ್ಚುವರಿ ಕಾಲಂ ಸೇರಿಸಬೇಕಿದೆ' ಎಂದಿದ್ದಾರೆ.</p><p>'ಪೂರ್ಣಪ್ರಮಾಣದಲ್ಲಿ ಜಾತಿಗಣತಿ ಮಾಡಲು ಆಗದಿದ್ದರೂ, ಪ್ರಾಥಮಿಕವಾಗಿ ಜಾತಿ ಎಣಿಕೆ ಮಾಡಬಹುದಾಗಿದೆ' ಎಂದು ಪ್ರತಿಪಾದಿಸಿರುವ ಅವರು, ಆ ಅಂಕಿ–ಅಂಶಗಳು ಭವಿಷ್ಯದಲ್ಲಿ ಸಾರ್ವಜನಿಕ ನೀತಿಗಳನ್ನು ಜಾರಿಗೊಳಿಸಲು, ಸಾಮಾಜಿಕ ನ್ಯಾಯಕ್ಕೆ ಅನುಸಾರವಾಗಿ ಎಲ್ಲ ವರ್ಗಗಳಿಗೂ ತಲುಪುವಂತಹ ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸಲು ನೆರವಾಗಲಿದೆ ಎಂದು ಒತ್ತಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವೇಳೆ ಜಾತಿ ವಿವರವನ್ನೂ ಸಂಗ್ರಹಿಸಬೇಕು. ರಾಜ್ಯದಲ್ಲಿ ಸಾಮಾಜಿಕ ನ್ಯಾಯವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅದು ಅಗತ್ಯ ಎಂದು ಸಮಾಜವಾದಿ ಪಕ್ಷದ (ಎಸ್ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಶುಕ್ರವಾರ ಹೇಳಿದ್ದಾರೆ.</p><p>ಪಕ್ಷದ ಪ್ರಧಾನ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಅಖಿಲೇಶ್, ಅಧಿಕಾರಿಗಳು ಎಸ್ಐಆರ್ ವೇಳೆ ಮತದಾರರ ಮಾಹಿತಿ ಪಡೆಯಲು ಮನೆ ಮನೆಗಳಿಗೆ ಭೇಟಿ ನೀಡಲಿದ್ದಾರೆ. ಅದೇ ವೇಳೆ ಜಾತಿ ದತ್ತಾಂಶ ಸಂಗ್ರಹಿಸಲು ಉತ್ತಮ ಅವಕಾಶವಿದೆ ಎಂದಿದ್ದಾರೆ.</p><p>ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 150ನೇ ವರ್ಷದ ಜಯಂತಿ ಪ್ರಯುಕ್ತ ಎಸ್ಪಿ ಕಚೇರಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆ ವೇಳೆ ಅವರು, 'ಇಷ್ಟು ದೊಡ್ಡ ಕಾರ್ಯಕ್ರಮ ಪ್ರಗತಿಯಲ್ಲಿದೆ. ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಅಧಿಕಾರಿಗಳು ಪ್ರತಿಯೊಂದು ಮನೆಗೂ ಭೇಟಿ ನೀಡುತ್ತಿದ್ದಾರೆ. ಜಾತಿ ಮಾಹಿತಿಯನ್ನೂ ಸಂಗ್ರಹಿಸಲು ಒಂದೇಒಂದು ಹೆಚ್ಚುವರಿ ಕಾಲಂ ಸೇರಿಸಬೇಕಿದೆ' ಎಂದಿದ್ದಾರೆ.</p><p>'ಪೂರ್ಣಪ್ರಮಾಣದಲ್ಲಿ ಜಾತಿಗಣತಿ ಮಾಡಲು ಆಗದಿದ್ದರೂ, ಪ್ರಾಥಮಿಕವಾಗಿ ಜಾತಿ ಎಣಿಕೆ ಮಾಡಬಹುದಾಗಿದೆ' ಎಂದು ಪ್ರತಿಪಾದಿಸಿರುವ ಅವರು, ಆ ಅಂಕಿ–ಅಂಶಗಳು ಭವಿಷ್ಯದಲ್ಲಿ ಸಾರ್ವಜನಿಕ ನೀತಿಗಳನ್ನು ಜಾರಿಗೊಳಿಸಲು, ಸಾಮಾಜಿಕ ನ್ಯಾಯಕ್ಕೆ ಅನುಸಾರವಾಗಿ ಎಲ್ಲ ವರ್ಗಗಳಿಗೂ ತಲುಪುವಂತಹ ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸಲು ನೆರವಾಗಲಿದೆ ಎಂದು ಒತ್ತಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>