ವಿಶ್ವ ಜಲ ದಿನದ ಪ್ರಯುಕ್ತ ಮಂಗಳವಾರ ಮಾತನಾಡಿದ ಅವರು, 'ಭವಿಷ್ಯದ ಜನ ಸಮುದಾಯಕ್ಕೆ ಯಾವುದೇ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳುವ ಸಲುವಾಗಿ ಸರ್ಕಾರಕ್ಕೆ ನೀರಿನ ಸಂರಕ್ಷಣೆ ಆದ್ಯತೆಯಾಗಿದೆ. ನಮ್ಮ ಮಕ್ಕಳಿಗಾಗಿ ನೀರಿನ ಸಂರಕ್ಷಣೆಗಾಗಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದೆ. ಅಲ್ಲದೆ ಎಲ್ಲರಿಗೂ ನಲ್ಲಿ ನೀರಿನ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ' ಎಂದಿದ್ದಾರೆ.