ಉಗ್ರರಿಗೆ ನೆರವು ನೀಡಿದ ಆರೋಪದಲ್ಲಿ ಇತ್ತೀಚೆಗೆ ಜಮ್ಮು–ಕಾಶ್ಮೀರ ಡಿವೈಎಸ್ಪಿ ದೇವೇಂದ್ರ ಸಿಂಗ್ ಬಂಧಿಸಿದ್ದಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ್ದ ಚೌಧರಿ ಆರ್ಎಸ್ಎಸ್ ಅನ್ನು ಟೀಕಿಸಿದ್ದರು. ‘ಬಣ್ಣ, ನಂಬಿಕೆ ಮತ್ತು ಧರ್ಮವನ್ನು ಲೆಕ್ಕಿಸದೇ ನಮ್ಮ ದೇಶದ ಶತ್ರುಗಳನ್ನು ಖಂಡಿಸಬೇಕು. ಆರೋಪಿ ದೇವೇಂದ್ರ ಸಿಂಗ್ ಬದಲು ದೇವೇಂದ್ರ ಖಾನ್ ಆಗಿದ್ದರೆ, ಆರ್ಎಸ್ಎಸ್ ಟ್ರೋಲ್ ತಂಡವು ಗದ್ದಲವೆಬ್ಬಿಸುತ್ತಿತ್ತು. ದೇಶದ ಶತ್ರುಗಳನ್ನು ಅವರ ವರ್ಣ, ನಂಬಿಕೆ ಮತ್ತು ಧರ್ಮಗಳನ್ನು ಲೆಕ್ಕಿಸದೇ ನಾವು ಖಂಡಿಸಬೇಕು’ ಎಂದು ಹೇಳಿದ್ದರು.