<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳ ಸರ್ಕಾರವು ಪ್ರಾಣಿ ವಧೆ ಮಾರ್ಗಸೂಚಿಗೆ ಸಂಬಂಧಿಸಿದಂತೆ ನೀಡಿರುವ ಸಾರ್ವಜನಿಕ ಪ್ರಕಟಣೆ ವಿಚಾರದಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಮಧ್ಯಪ್ರವೇಶಿಸುವಂತೆ ಕಾಂಗ್ರೆಸ್ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಭಾನುವಾರ ಆಗ್ರಹಿಸಿದ್ದಾರೆ.</p>.<p>ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರಿಗೆ ಪತ್ರ ಬರೆದಿರುವ ಚೌಧರಿ, ‘ರಾಜ್ಯ ಸರ್ಕಾರದ ಸಾರ್ವಜನಿಕ ಪ್ರಕಟಣೆಯು ನಿರ್ದಿಷ್ಟವಾಗಿ ಮುರ್ಷಿದಾಬಾದ್ ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಗೊಂದಲ ಮತ್ತು ಗಲಭೆಗಳಿಗೆ ಕಾರಣವಾಗುವಂತಿದೆ’ ಎಂದು ಅವರು ಹೇಳಿದ್ದಾರೆ.</p>.<p>ಮುರ್ಷಿದಾಬಾದ್ ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯದವರೇ ಹೆಚ್ಚಿದ್ದಾರೆ. ಇಂಥ ಪ್ರದೇಶಗಳನ್ನು ಗುರುತಿಸಿ ಜನರು ತಮ್ಮ ಧಾರ್ಮಿಕ ನಂಬಿಕೆಯನ್ನು ಅನುಸರಿಸಲು ಅವಕಾಶ ನೀಡಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.</p>.<p>ಅಧಿಕೃತ ಪ್ರಮಾಣಪತ್ರ (ಫಿಟ್ನೆಸ್ ಸರ್ಟಿಫಿಕೇಟ್) ಇಲ್ಲದೆ ಎತ್ತು, ಆಕಳು, ಎಮ್ಮೆ ಮತ್ತು ಕೋಣಗಳನ್ನು ವಧೆ ಮಾಡುವಂತಿಲ್ಲ ಎಂದು ಮೇ 13ರಂದು ನೋಟಿಸ್ ಮೂಲಕ ತಿಳಿಸಲಾಗಿತ್ತು.</p>.<div><blockquote>ಬಿಜೆಪಿ ಆಡಳಿತದಲ್ಲಿರುವ ದೇಶದ ಇತರ ರಾಜ್ಯಗಳಲ್ಲಿ ಗೋವುಗಳಿಗೆ ಜನನ ಪ್ರಮಾಣಪತ್ರ ನೀಡುತ್ತದೆಯೇ?</blockquote><span class="attribution"> ತೃಣಮೂಲ ಕಾಂಗ್ರೆಸ್</span></div>.<p><strong>ಗೋವುಗಳ ಜನನ ಪ್ರಮಾಣಪತ್ರ ತೋರಿಸಿ: ಬಿಜೆಪಿ ಶಾಸಕಿ</strong></p><p>ಪಶ್ಚಿಮ ಬಂಗಾಳದ ಬಿಜೆಪಿಯ ನೂತನ ಶಾಸಕಿ, ರೇಖಾ ಪಾತ್ರಾ ಅವರು ಗೋವುಗಳಿದ್ದ ವಾಹನವನ್ನು ತಡೆದು, ಗೋವುಗಳನ್ನು ಕಸಾಯಿಖಾನೆಗೆ ರವಾನಿಸುವ ಮುನ್ನ ಅವುಗಳ ಜನನ ಪ್ರಮಾಣಪತ್ರವನ್ನು ತೋರಿಸಬೇಕು ಎಂದು ಆಗ್ರಹಿಸಿದ್ದಾರೆ ಎಂಬುದಾಗಿ ಎನ್.ಡಿ.ಟಿ.ವಿ. ವರದಿ ಮಾಡಿದೆ.</p><p>ಹಿಂಗಲ್ಗಂಜ್ನ ಲೇಬುಖಾಲಿ ಪ್ರದೇಶದಲ್ಲಿ ವಾಹನವನ್ನು ತಡೆದು, ಗೋವುಗಳನ್ನು ಕೆಳಗಿಳಿಸಿದರು. ಅವುಗಳನ್ನು ರಸ್ತೆಬದಿಯ ಮರಗಳಿಗೆ ಕಟ್ಟಿಹಾಕಿ, ಕುಡಿಯಲು ನೀರು, ಆಹಾರ ನೀಡಿದರು.</p><p>‘ಅನಧಿಕೃತ ಗೋವು ವ್ಯಾಪಾರಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಸುವೇಂದು ಅಧಿಕಾರಿ ಸೂಚಿಸಿದ್ದಾರೆ. ಸರ್ಕಾರದ<br>ನೂತನ ಮಾರ್ಗಸೂಚಿ ಅನ್ವಯ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಗೋವುಗಳನ್ನು ಕಸಾಯಿಖಾನೆಗೆ ಕಳಿಸುವಂತಿಲ್ಲ’ ಎಂದು ಹೇಳಿದರು.</p><p>‘ಅಕ್ರಮವಾಗಿ ಗೋವುಗಳನ್ನು ಸಾಗಿಸುವುದು ಕಂಡುಬಂದಲ್ಲಿ ಅವರನ್ನು ತಡೆದು, ಗೋವುಗಳ<br>ಜನನ ಪ್ರಮಾಣಪತ್ರವನ್ನು ತೋರಿಸುವಂತೆ ಕೇಳಲಾಗುವುದು. ಪ್ರಮಾಣಪತ್ರ ಸಲ್ಲಿಸಲು ವಿಫಲವಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳ ಸರ್ಕಾರವು ಪ್ರಾಣಿ ವಧೆ ಮಾರ್ಗಸೂಚಿಗೆ ಸಂಬಂಧಿಸಿದಂತೆ ನೀಡಿರುವ ಸಾರ್ವಜನಿಕ ಪ್ರಕಟಣೆ ವಿಚಾರದಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಮಧ್ಯಪ್ರವೇಶಿಸುವಂತೆ ಕಾಂಗ್ರೆಸ್ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಭಾನುವಾರ ಆಗ್ರಹಿಸಿದ್ದಾರೆ.</p>.<p>ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರಿಗೆ ಪತ್ರ ಬರೆದಿರುವ ಚೌಧರಿ, ‘ರಾಜ್ಯ ಸರ್ಕಾರದ ಸಾರ್ವಜನಿಕ ಪ್ರಕಟಣೆಯು ನಿರ್ದಿಷ್ಟವಾಗಿ ಮುರ್ಷಿದಾಬಾದ್ ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಗೊಂದಲ ಮತ್ತು ಗಲಭೆಗಳಿಗೆ ಕಾರಣವಾಗುವಂತಿದೆ’ ಎಂದು ಅವರು ಹೇಳಿದ್ದಾರೆ.</p>.<p>ಮುರ್ಷಿದಾಬಾದ್ ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯದವರೇ ಹೆಚ್ಚಿದ್ದಾರೆ. ಇಂಥ ಪ್ರದೇಶಗಳನ್ನು ಗುರುತಿಸಿ ಜನರು ತಮ್ಮ ಧಾರ್ಮಿಕ ನಂಬಿಕೆಯನ್ನು ಅನುಸರಿಸಲು ಅವಕಾಶ ನೀಡಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.</p>.<p>ಅಧಿಕೃತ ಪ್ರಮಾಣಪತ್ರ (ಫಿಟ್ನೆಸ್ ಸರ್ಟಿಫಿಕೇಟ್) ಇಲ್ಲದೆ ಎತ್ತು, ಆಕಳು, ಎಮ್ಮೆ ಮತ್ತು ಕೋಣಗಳನ್ನು ವಧೆ ಮಾಡುವಂತಿಲ್ಲ ಎಂದು ಮೇ 13ರಂದು ನೋಟಿಸ್ ಮೂಲಕ ತಿಳಿಸಲಾಗಿತ್ತು.</p>.<div><blockquote>ಬಿಜೆಪಿ ಆಡಳಿತದಲ್ಲಿರುವ ದೇಶದ ಇತರ ರಾಜ್ಯಗಳಲ್ಲಿ ಗೋವುಗಳಿಗೆ ಜನನ ಪ್ರಮಾಣಪತ್ರ ನೀಡುತ್ತದೆಯೇ?</blockquote><span class="attribution"> ತೃಣಮೂಲ ಕಾಂಗ್ರೆಸ್</span></div>.<p><strong>ಗೋವುಗಳ ಜನನ ಪ್ರಮಾಣಪತ್ರ ತೋರಿಸಿ: ಬಿಜೆಪಿ ಶಾಸಕಿ</strong></p><p>ಪಶ್ಚಿಮ ಬಂಗಾಳದ ಬಿಜೆಪಿಯ ನೂತನ ಶಾಸಕಿ, ರೇಖಾ ಪಾತ್ರಾ ಅವರು ಗೋವುಗಳಿದ್ದ ವಾಹನವನ್ನು ತಡೆದು, ಗೋವುಗಳನ್ನು ಕಸಾಯಿಖಾನೆಗೆ ರವಾನಿಸುವ ಮುನ್ನ ಅವುಗಳ ಜನನ ಪ್ರಮಾಣಪತ್ರವನ್ನು ತೋರಿಸಬೇಕು ಎಂದು ಆಗ್ರಹಿಸಿದ್ದಾರೆ ಎಂಬುದಾಗಿ ಎನ್.ಡಿ.ಟಿ.ವಿ. ವರದಿ ಮಾಡಿದೆ.</p><p>ಹಿಂಗಲ್ಗಂಜ್ನ ಲೇಬುಖಾಲಿ ಪ್ರದೇಶದಲ್ಲಿ ವಾಹನವನ್ನು ತಡೆದು, ಗೋವುಗಳನ್ನು ಕೆಳಗಿಳಿಸಿದರು. ಅವುಗಳನ್ನು ರಸ್ತೆಬದಿಯ ಮರಗಳಿಗೆ ಕಟ್ಟಿಹಾಕಿ, ಕುಡಿಯಲು ನೀರು, ಆಹಾರ ನೀಡಿದರು.</p><p>‘ಅನಧಿಕೃತ ಗೋವು ವ್ಯಾಪಾರಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಸುವೇಂದು ಅಧಿಕಾರಿ ಸೂಚಿಸಿದ್ದಾರೆ. ಸರ್ಕಾರದ<br>ನೂತನ ಮಾರ್ಗಸೂಚಿ ಅನ್ವಯ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಗೋವುಗಳನ್ನು ಕಸಾಯಿಖಾನೆಗೆ ಕಳಿಸುವಂತಿಲ್ಲ’ ಎಂದು ಹೇಳಿದರು.</p><p>‘ಅಕ್ರಮವಾಗಿ ಗೋವುಗಳನ್ನು ಸಾಗಿಸುವುದು ಕಂಡುಬಂದಲ್ಲಿ ಅವರನ್ನು ತಡೆದು, ಗೋವುಗಳ<br>ಜನನ ಪ್ರಮಾಣಪತ್ರವನ್ನು ತೋರಿಸುವಂತೆ ಕೇಳಲಾಗುವುದು. ಪ್ರಮಾಣಪತ್ರ ಸಲ್ಲಿಸಲು ವಿಫಲವಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>