<p>ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಟ್ರಾದಲ್ಲಿ ನಿರ್ಮಾಣಗೊಳ್ಳಲಿರುವ ಆದಿ ಶಂಕರಾಚಾರ್ಯ ದೇಗುಲಕ್ಕೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು.</p>.<p>ಅಂತರರಾಷ್ಟ್ರಿಯ ವಸ್ತುಸಂಗ್ರಹಾಲಯ ಸೇರಿದಂತೆ ಕಟ್ರಾದ ಅಭಿವೃದ್ಧಿಗೆ ಅಗತ್ಯವಾದ ಹಲವು ಯೋಜನೆಗಳನ್ನು ಇದೇ ವೇಳೆ ಘೋಷಣೆ ಮಾಡಿದರು. </p>.<p>‘1967ರಲ್ಲಿ ರೂಪಿಸಲಾಗಿದ್ದ ದೇಗುಲ ನಿರ್ಮಾಣ ಯೋಜನೆಯು ಆರು ದಶಕಗಳ ಬಳಿಕ ಕಾರ್ಯರೂಪಕ್ಕೆ ಬರುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<p>‘ರಸ್ತೆ ಸಂಪರ್ಕವನ್ನು ಕೂಡ ಸುಧಾರಿಸಲಾಗುವುದು. ಭೂಮಿಕಾ ದೇಗುಲದ ಪುನರ್ನಿರ್ಮಾಣ ಮತ್ತು ಸುಧಾರಿತ ವ್ಯವಸ್ಥೆಗಳನ್ನು ಕಲ್ಪಿಸುವ ಪ್ರಸ್ತಾವವೂ ಇದೆ’ ಎಂದು ಸಿನ್ಹಾ ಅವರುಹೇಳಿದರು. </p>.<p>‘ದೇಶದಾದ್ಯಂತ ಇರುವ ಪ್ರಮುಖ ದೇವಿ ದೇಗುಲಗಳಿಗೆ ಸಂಬಂಧಿಸಿದ ವಸ್ತುಗಳ ಸಂಗ್ರಹಾಲಯ ನಿರ್ಮಿಸಲಾಗುವುದು. ಬೆಳಕು ಮತ್ತು ಧ್ವನಿ ತಂತ್ರಜ್ಞಾನದ ಮೂಲಕ ವಿಶೇಷ ಅನುಭವ ನೀಡುವ ವ್ಯವಸ್ಥೆಯನ್ನು ಮಾಡಲಾಗುವುದು’ ಎಂದರು.</p>.<p>‘ಭೋಲೇನಾಥರ ದರ್ಶನಕ್ಕಾಗಿ ಶಿವ ಖೋರಿಗೆ ತೆರಳುವ ಭಕ್ತರಿಗಾಗಿ ಕಟ್ರಾದಿಂದ ಹೆಲಿಕಾಪ್ಟರ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಟ್ರಾದಲ್ಲಿ ನಿರ್ಮಾಣಗೊಳ್ಳಲಿರುವ ಆದಿ ಶಂಕರಾಚಾರ್ಯ ದೇಗುಲಕ್ಕೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು.</p>.<p>ಅಂತರರಾಷ್ಟ್ರಿಯ ವಸ್ತುಸಂಗ್ರಹಾಲಯ ಸೇರಿದಂತೆ ಕಟ್ರಾದ ಅಭಿವೃದ್ಧಿಗೆ ಅಗತ್ಯವಾದ ಹಲವು ಯೋಜನೆಗಳನ್ನು ಇದೇ ವೇಳೆ ಘೋಷಣೆ ಮಾಡಿದರು. </p>.<p>‘1967ರಲ್ಲಿ ರೂಪಿಸಲಾಗಿದ್ದ ದೇಗುಲ ನಿರ್ಮಾಣ ಯೋಜನೆಯು ಆರು ದಶಕಗಳ ಬಳಿಕ ಕಾರ್ಯರೂಪಕ್ಕೆ ಬರುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿದರು.</p>.<p>‘ರಸ್ತೆ ಸಂಪರ್ಕವನ್ನು ಕೂಡ ಸುಧಾರಿಸಲಾಗುವುದು. ಭೂಮಿಕಾ ದೇಗುಲದ ಪುನರ್ನಿರ್ಮಾಣ ಮತ್ತು ಸುಧಾರಿತ ವ್ಯವಸ್ಥೆಗಳನ್ನು ಕಲ್ಪಿಸುವ ಪ್ರಸ್ತಾವವೂ ಇದೆ’ ಎಂದು ಸಿನ್ಹಾ ಅವರುಹೇಳಿದರು. </p>.<p>‘ದೇಶದಾದ್ಯಂತ ಇರುವ ಪ್ರಮುಖ ದೇವಿ ದೇಗುಲಗಳಿಗೆ ಸಂಬಂಧಿಸಿದ ವಸ್ತುಗಳ ಸಂಗ್ರಹಾಲಯ ನಿರ್ಮಿಸಲಾಗುವುದು. ಬೆಳಕು ಮತ್ತು ಧ್ವನಿ ತಂತ್ರಜ್ಞಾನದ ಮೂಲಕ ವಿಶೇಷ ಅನುಭವ ನೀಡುವ ವ್ಯವಸ್ಥೆಯನ್ನು ಮಾಡಲಾಗುವುದು’ ಎಂದರು.</p>.<p>‘ಭೋಲೇನಾಥರ ದರ್ಶನಕ್ಕಾಗಿ ಶಿವ ಖೋರಿಗೆ ತೆರಳುವ ಭಕ್ತರಿಗಾಗಿ ಕಟ್ರಾದಿಂದ ಹೆಲಿಕಾಪ್ಟರ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>