‘ಒಮ್ಮೆ ಶಾಲೆಯಿಂದ ವಾಪಸಾಗುತ್ತಿದ್ದಾಗ ಅವನನ್ನು ತಡೆದ ಪೊಲೀಸರು, ರಸ್ತೆಯಲ್ಲಿ ತೆವಳುವಂತಹ ಶಿಕ್ಷೆ ನೀಡಿದ್ದರು. ಈ ಅವಮಾನಕರ ಘಟನೆಯು ಅವನ ಮನಸ್ಸಿನ ಮೇಲೆ ಬಹಳ ಪರಿಣಾಮ ಬೀರಿತ್ತು. ಆ ಘಟನೆಯನ್ನು ಅದಿಲ್ ಆಗಾಗ್ಗೆ ನೆನಪಿಸಿಕೊಳ್ಳುತ್ತಿದ್ದ. 22 ವರ್ಷದ ದಾರ್ 12ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದ್ದಾನೆ. 2017ರಲ್ಲಿ ಧಾರ್ಮಿಕ ಶಿಕ್ಷಣ ಕೋರ್ಸ್ಗೆ ಸೇರಿಕೊಂಡಿದ್ದ. ಆದರೆ, 2018ರ ಮಾರ್ಚ್ನಲ್ಲಿ ಇದ್ದಕ್ಕಿದ್ದಂತೆ ಕಾಣೆಯಾದ. ಅವನನ್ನು ನೋಡಿದ್ದು ಅದೇ ಕೊನೆಯ ಬಾರಿ. ಸೈಕಲ್ ಹತ್ತಿ ಹೊರಟುಹೋಗಿದ್ದ ಅದಿಲ್ಗಾಗಿ ಕಾದಿದ್ದೆವು. ಅವನು ಭಯೋತ್ಪಾದನೆ ಸಂಘಟನೆ ಸೇರಿದ್ದಾನೆ ಎಂಬ ವಿಷಯ ಸಾಮಾಜಿಕ ಜಾಲತಾಣಗಳಿಂದ ತಿಳಿಯಿತು’ ಎಂದು ಅವರು ಹೇಳಿದ್ದಾರೆ.