ಮನೆಗಳ ಹಸ್ತಾಂತರ ಕಾರ್ಯಕ್ರಮ ‘ಗೃಹಪ್ರವೇಶ’ದಲ್ಲಿ ಮಾತನಾಡಿದ ಆದಿತ್ಯನಾಥ್, ‘ಬಡವರ ಜಮೀನನ್ನು ಮುಕ್ತಗೊಳಿಸುವ ಬದಲು ಹಿಂದಿನ ಸರ್ಕಾರವು ಮಾಫಿಯಾದೊಂದಿಗೆ ಕೈಜೋಡಿಸಿತ್ತು. ಆದರೆ, ಈಗಿನ ಸರ್ಕಾರ ಮಾಫಿಯಾದವರಿಂದ ವಶಪಡಿಸಿಕೊಂಡ ಜಮೀನಿನಲ್ಲಿ ಬಡವರಿಗೆ ಮನೆ ನಿರ್ಮಿಸಿಕೊಡುತ್ತಿದೆ. ಈ ಕುರಿತು ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಇದರಿಂದ ಬಡವರಿಗೆ ಸೂರು ದೊರೆತು, ಸರ್ಕಾರದ ಮೇಲಿನ ನಂಬಿಕೆ ಹೆಚ್ಚಾಗುತ್ತದೆ’ ಎಂದರು.