<p><strong>ಲಖನೌ</strong>: ‘ರೈತರನ್ನು ನೇರವಾಗಿ ಎದುರಿಸುವ ಧೈರ್ಯವಿಲ್ಲದೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಬೆಳೆ ಹಾನಿ ಬಗ್ಗೆ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ’ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಟೀಕಿಸಿದ್ದಾರೆ.</p><p>ಭಾನುವಾರ ಯೋಗಿ ಆದಿತ್ಯನಾಥ ಅವರು ಮೆಕ್ಕೆಜೋಳ ಬೆಳೆಯ ವೈಮಾನಿಕ ಸಮೀಕ್ಷೆ ನಡೆಸಿದ್ದರು.</p><p>ಈ ಬಗ್ಗೆ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಯಾದವ್, ‘ಸಮಯದ ಅಭಾವವಲ್ಲ, ರೈತರ ಕೋಪಕ್ಕೆ ಬಲಿಯಾಗಬಹುದೆಂಬ ಭಯದಿಂದ ರೈತರನ್ನು ನೇರವಾಗಿ ಭೇಟಿಯಾಗುವುದನ್ನು ತಪ್ಪಿಸಿದ್ದಾರೆ’ ಎಂದು ಹೇಳಿದ್ದಾರೆ.</p><p>‘ಬೆಳೆ ಹಾನಿ ಬಗ್ಗೆ ವೈಮಾನಿಕ ಸಮೀಕ್ಷೆ ನಡೆಸಲು ಸಮಯದ ಕೊರತೆಯಿಲ್ಲ. ಆದರೆ, ರೈತರ ಕೋಪವನ್ನು ನೆಲದ ಮೇಲೆ ಎದುರಿಸಲು ಅಗತ್ಯವಾದ 'ಧೈರ್ಯ'ದ ಕೊರತೆಯಿದೆ’ ಎಂದು ಪರೋಕ್ಷವಾಗಿ ಕುಟುಕಿದ್ದಾರೆ.</p><p>‘ಬಿಡಾಡಿ ದನಗಳ ಹಾವಳಿಯಿಂದ ರೈತರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಬಿಡಾಡಿ ದನಗಳನ್ನು ಅಷ್ಟು ಎತ್ತರದಿಂದ ನೋಡಲು ಸಾಧ್ಯವೇ ಎಂದು ರೈತರು ಕೇಳುತ್ತಿದ್ದಾರೆ’ ಎಂದಿದ್ದಾರೆ.</p><p>ಅಕಾಲಿಕ ಮಳೆ ಮತ್ತು ಬೀದಿ ದನಗಳ ಹಾವಳಿಯಿಂದಾಗಿ ಉಂಟಾಗುತ್ತಿರುವ ಬೆಳೆ ಹಾನಿಯ ಬಗ್ಗೆ ರೈತರಿಂದ ಅನೇಕ ದೂರುಗಳು ಬಂದಿವೆ. ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಈ ಸಮಸ್ಯೆ ಇನ್ನಷ್ಟು ಬಿಗಡಾಯಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ‘ರೈತರನ್ನು ನೇರವಾಗಿ ಎದುರಿಸುವ ಧೈರ್ಯವಿಲ್ಲದೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಬೆಳೆ ಹಾನಿ ಬಗ್ಗೆ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ’ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಟೀಕಿಸಿದ್ದಾರೆ.</p><p>ಭಾನುವಾರ ಯೋಗಿ ಆದಿತ್ಯನಾಥ ಅವರು ಮೆಕ್ಕೆಜೋಳ ಬೆಳೆಯ ವೈಮಾನಿಕ ಸಮೀಕ್ಷೆ ನಡೆಸಿದ್ದರು.</p><p>ಈ ಬಗ್ಗೆ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಯಾದವ್, ‘ಸಮಯದ ಅಭಾವವಲ್ಲ, ರೈತರ ಕೋಪಕ್ಕೆ ಬಲಿಯಾಗಬಹುದೆಂಬ ಭಯದಿಂದ ರೈತರನ್ನು ನೇರವಾಗಿ ಭೇಟಿಯಾಗುವುದನ್ನು ತಪ್ಪಿಸಿದ್ದಾರೆ’ ಎಂದು ಹೇಳಿದ್ದಾರೆ.</p><p>‘ಬೆಳೆ ಹಾನಿ ಬಗ್ಗೆ ವೈಮಾನಿಕ ಸಮೀಕ್ಷೆ ನಡೆಸಲು ಸಮಯದ ಕೊರತೆಯಿಲ್ಲ. ಆದರೆ, ರೈತರ ಕೋಪವನ್ನು ನೆಲದ ಮೇಲೆ ಎದುರಿಸಲು ಅಗತ್ಯವಾದ 'ಧೈರ್ಯ'ದ ಕೊರತೆಯಿದೆ’ ಎಂದು ಪರೋಕ್ಷವಾಗಿ ಕುಟುಕಿದ್ದಾರೆ.</p><p>‘ಬಿಡಾಡಿ ದನಗಳ ಹಾವಳಿಯಿಂದ ರೈತರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಬಿಡಾಡಿ ದನಗಳನ್ನು ಅಷ್ಟು ಎತ್ತರದಿಂದ ನೋಡಲು ಸಾಧ್ಯವೇ ಎಂದು ರೈತರು ಕೇಳುತ್ತಿದ್ದಾರೆ’ ಎಂದಿದ್ದಾರೆ.</p><p>ಅಕಾಲಿಕ ಮಳೆ ಮತ್ತು ಬೀದಿ ದನಗಳ ಹಾವಳಿಯಿಂದಾಗಿ ಉಂಟಾಗುತ್ತಿರುವ ಬೆಳೆ ಹಾನಿಯ ಬಗ್ಗೆ ರೈತರಿಂದ ಅನೇಕ ದೂರುಗಳು ಬಂದಿವೆ. ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಈ ಸಮಸ್ಯೆ ಇನ್ನಷ್ಟು ಬಿಗಡಾಯಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>