ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮರನಾಥ ಯಾತ್ರೆ: ತಗ್ಗಿದ ಮಳೆ ಅಬ್ಬರ, ಜಮ್ಮುವಿನಿಂದ ಹೊರಟ ಭಕ್ತರ ತಂಡ

Published 18 ಆಗಸ್ಟ್ 2023, 2:25 IST
Last Updated 18 ಆಗಸ್ಟ್ 2023, 2:25 IST
ಅಕ್ಷರ ಗಾತ್ರ

ಶ್ರೀನಗರ: ‘ಅಮರನಾಥನ ದರ್ಶನ ಪಡೆಯಲು ಭಕ್ತರ ಗುಂಪೊಂದು ಬಿಗಿ ಭದ್ರತೆಯ ನಡುವೆ ಇಂದು (ಶುಕ್ರವಾರ) ಬೆಳಿಗ್ಗೆ ಜಮ್ಮುವಿನಿಂದ ಹೊರಟಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಕ್ತರು ಸಾಗುವ ಹಾದಿಯಲ್ಲಿ ಬಿಗಿ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇಂದಿನಿಂದ ಅಮರನಾಥ ಯಾತ್ರೆ ಮತ್ತೆ ಆರಂಭವಾಗಿದ್ದು, ಮುಂದಿನ 11 ದಿನಗಳ ಕಾಲ ಯಾತ್ರೆ ಮುಂದುವರಿಯಲಿದೆ ಎಂದು ಎಡಿಜಿಪಿ ಮುಕೇಶ್‌ ಸಿಂಗ್ ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ರಸ್ತೆಗಳು ಜಲಾವೃತವಾಗಿದ್ದ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿತ್ತು.

ಜುಲೈ 1ರಿಂದ ಅಮರನಾಥ ಯಾತ್ರೆ ಆರಂಭವಾದಾಗಿನಿಂದ ಇಲ್ಲಿಯವರೆಗೆ 3 ಲಕ್ಷಕ್ಕೂ ಹೆಚ್ಚು ಭಕ್ತರು ದೇಗುಲಕ್ಕೆ ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT