<p><strong>ನವದೆಹಲಿ</strong>: ‘ಯುವಕ ಅಥವಾ ಯುವತಿ ತಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಅಧಿಕಾರ ಹೊಂದಿದ್ದಾರೆ. ಕುಟುಂಬದ ಗೌರವ, ಕೆಲವೇ ಜನರ ಚಿಂತನೆಯು ಅವರ ಈ ಅಧಿಕಾರವನ್ನು ಬಲಿ ತೆಗೆದುಕೊಳ್ಳಬಾರದು’ ಎಂದು ಸುಪ್ರೀಂಕೋರ್ಟ್ ಪ್ರತಿಪಾದಿಸಿದೆ.</p>.<p>‘ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರತಿಪಾದಿಸಿರುವ ಜಾತಿ, ವರ್ಗ ರಹಿತ ಸಮಾಜ ನಿರ್ಮಾಣಕ್ಕೆ ಅಂತರ ಜಾತಿ ವಿವಾಹಗಳು ಅಗತ್ಯ’ ಎಂದು ನ್ಯಾಯಮೂರ್ತಿಗಳಾದ ಸಂಜಯಕಿಶನ್ ಕೌಲ್ ಹಾಗೂ ಹೃಷಿಕೇಶ್ ರಾಯ್ ಅವರಿರುವ ನ್ಯಾಯಪೀಠ ಅಭಿಪ್ರಾಯಪಟ್ಟಿತು.</p>.<p>‘ಅಂತರಜಾತಿ ವಿವಾಹ ಸಾಮಾಜಿಕವಾಗಿ ಬಹಳ ಸೂಕ್ಷ್ಮವಾದ ಸಂಗತಿ. ಇಂತಹ ಪ್ರಕರಣಗಳ ನಿರ್ವಹಣೆಗೆ ಸೂಕ್ತ ಮಾರ್ಗಸೂಚಿಗಳನ್ನು ರಚಿಸಿ, ತರಬೇತಿ ಆಯೋಜಿಸಬೇಕು’ ಎಂದು ನ್ಯಾಯಪೀಠ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿತು.</p>.<p>ಎಂ.ಎ.,ಬಿ.ಇಡಿ ಪದವಿ ಪಡೆದಿರುವ ಬೆಳಗಾವಿ ಮೂಲದ ಯುವತಿ, ಉತ್ತರ ಪ್ರದೇಶ ಮೂಲದ ಸಹಾಯಕ ಪ್ರಾಧ್ಯಾಪಕರೊಬ್ಬರನ್ನು ಪ್ರೀತಿಸಿ, ಮದುವೆಯಾಗಿದ್ದರು. ಪಾಲಕರಿಗೆ ತಿಳಿಸದೇ ಸಹಾಯಕ ಪ್ರಾಧ್ಯಾಪಕನೊಂದಿಗೆ ಹೋಗಿದ್ದರು.</p>.<p>ಈ ಸಂಬಂಧ ಯುವತಿ ತಂದೆ, ತನ್ನ ಮಗಳು ಕಾಣೆಯಾಗಿದ್ದಾಳೆ ಎಂದು 2020ರ ಅಕ್ಟೋಬರ್ 14ರಂದು ದೂರು ದಾಖಲಿಸಿದ್ದರು.</p>.<p>ಈ ದೂರಿನ ಕುರಿತು ತನಿಖೆ ನಡೆಸಿದ್ದ ಪೊಲೀಸ್ ಅಧಿಕಾರಿ, ಯುವತಿ ಖುದ್ದಾಗಿ ಠಾಣೆಗೆ ಬಂದು ತನ್ನ ಹೇಳಿಕೆ ದಾಖಲಿಸಬೇಕು. ತಪ್ಪಿದಲ್ಲಿ, ಆಕೆ ಪತಿ ವಿರುದ್ಧ ಅಪಹರಣ ಪ್ರಕರಣ ದಾಖಲಿಸುವುದಾಗಿ ಹೇಳಿದ್ದರು.</p>.<p>ಪೊಲೀಸರ ಈ ಧೋರಣೆಯನ್ನು ಪ್ರಶ್ನಿಸಿ, ಈ ದಂಪತಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.</p>.<p>ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಪೊಲೀಸ್ ಅಧಿಕಾರಿಗಳ ವರ್ತನೆಯನ್ನು ತರಾಟೆಗೆ ತೆಗೆದುಕೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಯುವಕ ಅಥವಾ ಯುವತಿ ತಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಅಧಿಕಾರ ಹೊಂದಿದ್ದಾರೆ. ಕುಟುಂಬದ ಗೌರವ, ಕೆಲವೇ ಜನರ ಚಿಂತನೆಯು ಅವರ ಈ ಅಧಿಕಾರವನ್ನು ಬಲಿ ತೆಗೆದುಕೊಳ್ಳಬಾರದು’ ಎಂದು ಸುಪ್ರೀಂಕೋರ್ಟ್ ಪ್ರತಿಪಾದಿಸಿದೆ.</p>.<p>‘ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರತಿಪಾದಿಸಿರುವ ಜಾತಿ, ವರ್ಗ ರಹಿತ ಸಮಾಜ ನಿರ್ಮಾಣಕ್ಕೆ ಅಂತರ ಜಾತಿ ವಿವಾಹಗಳು ಅಗತ್ಯ’ ಎಂದು ನ್ಯಾಯಮೂರ್ತಿಗಳಾದ ಸಂಜಯಕಿಶನ್ ಕೌಲ್ ಹಾಗೂ ಹೃಷಿಕೇಶ್ ರಾಯ್ ಅವರಿರುವ ನ್ಯಾಯಪೀಠ ಅಭಿಪ್ರಾಯಪಟ್ಟಿತು.</p>.<p>‘ಅಂತರಜಾತಿ ವಿವಾಹ ಸಾಮಾಜಿಕವಾಗಿ ಬಹಳ ಸೂಕ್ಷ್ಮವಾದ ಸಂಗತಿ. ಇಂತಹ ಪ್ರಕರಣಗಳ ನಿರ್ವಹಣೆಗೆ ಸೂಕ್ತ ಮಾರ್ಗಸೂಚಿಗಳನ್ನು ರಚಿಸಿ, ತರಬೇತಿ ಆಯೋಜಿಸಬೇಕು’ ಎಂದು ನ್ಯಾಯಪೀಠ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿತು.</p>.<p>ಎಂ.ಎ.,ಬಿ.ಇಡಿ ಪದವಿ ಪಡೆದಿರುವ ಬೆಳಗಾವಿ ಮೂಲದ ಯುವತಿ, ಉತ್ತರ ಪ್ರದೇಶ ಮೂಲದ ಸಹಾಯಕ ಪ್ರಾಧ್ಯಾಪಕರೊಬ್ಬರನ್ನು ಪ್ರೀತಿಸಿ, ಮದುವೆಯಾಗಿದ್ದರು. ಪಾಲಕರಿಗೆ ತಿಳಿಸದೇ ಸಹಾಯಕ ಪ್ರಾಧ್ಯಾಪಕನೊಂದಿಗೆ ಹೋಗಿದ್ದರು.</p>.<p>ಈ ಸಂಬಂಧ ಯುವತಿ ತಂದೆ, ತನ್ನ ಮಗಳು ಕಾಣೆಯಾಗಿದ್ದಾಳೆ ಎಂದು 2020ರ ಅಕ್ಟೋಬರ್ 14ರಂದು ದೂರು ದಾಖಲಿಸಿದ್ದರು.</p>.<p>ಈ ದೂರಿನ ಕುರಿತು ತನಿಖೆ ನಡೆಸಿದ್ದ ಪೊಲೀಸ್ ಅಧಿಕಾರಿ, ಯುವತಿ ಖುದ್ದಾಗಿ ಠಾಣೆಗೆ ಬಂದು ತನ್ನ ಹೇಳಿಕೆ ದಾಖಲಿಸಬೇಕು. ತಪ್ಪಿದಲ್ಲಿ, ಆಕೆ ಪತಿ ವಿರುದ್ಧ ಅಪಹರಣ ಪ್ರಕರಣ ದಾಖಲಿಸುವುದಾಗಿ ಹೇಳಿದ್ದರು.</p>.<p>ಪೊಲೀಸರ ಈ ಧೋರಣೆಯನ್ನು ಪ್ರಶ್ನಿಸಿ, ಈ ದಂಪತಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.</p>.<p>ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಪೊಲೀಸ್ ಅಧಿಕಾರಿಗಳ ವರ್ತನೆಯನ್ನು ತರಾಟೆಗೆ ತೆಗೆದುಕೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>