<p><strong>ಡೆಹ್ರಾಡೂನ್:</strong> ಜೋಶಿಮಠದಲ್ಲಿ ಭೂಕುಸಿತದಿಂದ ಸಂತ್ರಸ್ತ ಕುಟುಂಬಗಳು ಮತ್ತು ವ್ಯಕ್ತಿಗಳಿಗೆ ಆರು ತಿಂಗಳ ಕಾಲ ವಿದ್ಯುತ್ ಮತ್ತು ನೀರಿನ ಬಿಲ್ಗಳ ಮನ್ನಾ ಸೇರಿದಂತೆ ಅನೇಕ ಪರಿಹಾರ ಕ್ರಮಗಳಿಗೆ ಉತ್ತರಾಖಂಡ ಸರ್ಕಾರ ಮುಂದಾಗಿದೆ. </p>.<p>ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಣಿವೆ ರಾಜ್ಯದ ಎಲ್ಲಾ ಪಟ್ಟಣಗಳ ವಾಹಕ ಸಾಮರ್ಥ್ಯದ ಬಗ್ಗೆ ಅಧ್ಯಯನ ನಡೆಸಲು ನಿರ್ಧರಿಸಲಾಗಿದೆ.</p>.<p>ಕೋಟಿ ಫಾರ್ಮ್, ಪಿಪಲಕೋಟಿ, ಗೌಚಾರ್ ಮೊದಲಾದೆಡೆ ಗುರುತಿಸಲಾದ ಸ್ಥಳಗಳಲ್ಲಿ ಜೋಶಿಮಠದ ಸಂತ್ರಸ್ತರಿಗೆ ತಾತ್ಕಾಲಿಕ ಪುನರ್ವಸತಿ ಕಲ್ಪಿಸಲು ಸಂಪುಟ ತಾತ್ವಿಕ ಅನುಮೋದನೆ ನೀಡಿತು.</p>.<p>ಒಂದು ವರ್ಷದವರೆಗೆ ಸಂತ್ರಸ್ತರ ಬ್ಯಾಂಕ್ ಸಾಲ ಮರುಪಾವತಿ ತಡೆಗೆ ಸರ್ಕಾರ ನಿರ್ಧರಿಸಿದೆ. ಸಹಕಾರಿ ಬ್ಯಾಂಕ್ಗಳ ಸಾಲ ಮರುಪಾವತಿಗೆ ಈ ನಿರ್ಧಾರ ತಕ್ಷಣದಿಂದಲೇ ಅನ್ವಯವಾಗಲಿದೆ. ವಾಣಿಜ್ಯ ಬ್ಯಾಂಕ್ಗಳು ಕೂಡ ಇದೇ ರೀತಿ ಒಂದು ವರ್ಷ ಕಾಲಾವಕಾಶ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಲಿದೆ ಎಂದು ಮುಖ್ಯ ಕಾರ್ಯದರ್ಶಿ ಎಸ್.ಎಸ್. ಸಂಧು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಸಂತ್ರಸ್ತ ಕುಟುಂಬಗಳಿಗೆ ಮಾಸಿಕ ಬಾಡಿಗೆ ಪಾವತಿಸಲು ರಾಜ್ಯ ಸರ್ಕಾರ ನೀಡುತ್ತಿರುವ ಮೊತ್ತವನ್ನು ತಿಂಗಳಿಗೆ ₹4,000 ನಿಂದ ₹5,000 ಕ್ಕೆ ಹೆಚ್ಚಿಸಲು ಸಂಪುಟ ನಿರ್ಧರಿಸಿದೆ. ಜಿಲ್ಲಾಧಿಕಾರಿಗಳ ಶಿಫಾರಸಿನ ಮೇರೆಗೆ ಮುಖ್ಯಮಂತ್ರಿಗಳು ಈ ಮೊತ್ತ ಇನ್ನಷ್ಟು ಹೆಚ್ಚಿಸಲು ಸಭೆ ಅನುಮೋದನೆ ನೀಡಿದೆ.</p>.<p>ಹೋಟೆಲ್ಗಳು ಮತ್ತು ವಸತಿ ಘಟಕಗಳಲ್ಲಿ ನಿರ್ಮಿಸಲಾದ ತಾತ್ಕಾಲಿಕ ಪರಿಹಾರ ಶಿಬಿರಗಳಲ್ಲಿ ತಂಗಿರುವ ಪ್ರತಿ ಸಂತ್ರಸ್ತ ಕುಟುಂಬಕ್ಕೆ ವಾಸ್ತವ್ಯಕ್ಕಾಗಿ ದಿನಕ್ಕೆ ₹950 ಮತ್ತು ವೆಚ್ಚಕ್ಕಾಗಿ ತಲಾ ₹450 ನೀಡಲಾಗುವುದು ಎಂದು ಸಂಧು ತಿಳಿಸಿದ್ದಾರೆ.</p>.<p>ಕೇಂದ್ರ ಸರ್ಕಾರ ಪರಿಹಾರ ಧನ ಲಭಿಸುವವರೆಗೆ ರಾಜ್ಯ ಸರ್ಕಾರದ ಸ್ವಂತ ಸಂಪನ್ಮೂಲಗಳಿಂದ ದೀರ್ಘ ಮತ್ತು ಅಲ್ಪಾವಧಿಯ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಸಂಧು ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡೆಹ್ರಾಡೂನ್:</strong> ಜೋಶಿಮಠದಲ್ಲಿ ಭೂಕುಸಿತದಿಂದ ಸಂತ್ರಸ್ತ ಕುಟುಂಬಗಳು ಮತ್ತು ವ್ಯಕ್ತಿಗಳಿಗೆ ಆರು ತಿಂಗಳ ಕಾಲ ವಿದ್ಯುತ್ ಮತ್ತು ನೀರಿನ ಬಿಲ್ಗಳ ಮನ್ನಾ ಸೇರಿದಂತೆ ಅನೇಕ ಪರಿಹಾರ ಕ್ರಮಗಳಿಗೆ ಉತ್ತರಾಖಂಡ ಸರ್ಕಾರ ಮುಂದಾಗಿದೆ. </p>.<p>ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಣಿವೆ ರಾಜ್ಯದ ಎಲ್ಲಾ ಪಟ್ಟಣಗಳ ವಾಹಕ ಸಾಮರ್ಥ್ಯದ ಬಗ್ಗೆ ಅಧ್ಯಯನ ನಡೆಸಲು ನಿರ್ಧರಿಸಲಾಗಿದೆ.</p>.<p>ಕೋಟಿ ಫಾರ್ಮ್, ಪಿಪಲಕೋಟಿ, ಗೌಚಾರ್ ಮೊದಲಾದೆಡೆ ಗುರುತಿಸಲಾದ ಸ್ಥಳಗಳಲ್ಲಿ ಜೋಶಿಮಠದ ಸಂತ್ರಸ್ತರಿಗೆ ತಾತ್ಕಾಲಿಕ ಪುನರ್ವಸತಿ ಕಲ್ಪಿಸಲು ಸಂಪುಟ ತಾತ್ವಿಕ ಅನುಮೋದನೆ ನೀಡಿತು.</p>.<p>ಒಂದು ವರ್ಷದವರೆಗೆ ಸಂತ್ರಸ್ತರ ಬ್ಯಾಂಕ್ ಸಾಲ ಮರುಪಾವತಿ ತಡೆಗೆ ಸರ್ಕಾರ ನಿರ್ಧರಿಸಿದೆ. ಸಹಕಾರಿ ಬ್ಯಾಂಕ್ಗಳ ಸಾಲ ಮರುಪಾವತಿಗೆ ಈ ನಿರ್ಧಾರ ತಕ್ಷಣದಿಂದಲೇ ಅನ್ವಯವಾಗಲಿದೆ. ವಾಣಿಜ್ಯ ಬ್ಯಾಂಕ್ಗಳು ಕೂಡ ಇದೇ ರೀತಿ ಒಂದು ವರ್ಷ ಕಾಲಾವಕಾಶ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಲಿದೆ ಎಂದು ಮುಖ್ಯ ಕಾರ್ಯದರ್ಶಿ ಎಸ್.ಎಸ್. ಸಂಧು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಸಂತ್ರಸ್ತ ಕುಟುಂಬಗಳಿಗೆ ಮಾಸಿಕ ಬಾಡಿಗೆ ಪಾವತಿಸಲು ರಾಜ್ಯ ಸರ್ಕಾರ ನೀಡುತ್ತಿರುವ ಮೊತ್ತವನ್ನು ತಿಂಗಳಿಗೆ ₹4,000 ನಿಂದ ₹5,000 ಕ್ಕೆ ಹೆಚ್ಚಿಸಲು ಸಂಪುಟ ನಿರ್ಧರಿಸಿದೆ. ಜಿಲ್ಲಾಧಿಕಾರಿಗಳ ಶಿಫಾರಸಿನ ಮೇರೆಗೆ ಮುಖ್ಯಮಂತ್ರಿಗಳು ಈ ಮೊತ್ತ ಇನ್ನಷ್ಟು ಹೆಚ್ಚಿಸಲು ಸಭೆ ಅನುಮೋದನೆ ನೀಡಿದೆ.</p>.<p>ಹೋಟೆಲ್ಗಳು ಮತ್ತು ವಸತಿ ಘಟಕಗಳಲ್ಲಿ ನಿರ್ಮಿಸಲಾದ ತಾತ್ಕಾಲಿಕ ಪರಿಹಾರ ಶಿಬಿರಗಳಲ್ಲಿ ತಂಗಿರುವ ಪ್ರತಿ ಸಂತ್ರಸ್ತ ಕುಟುಂಬಕ್ಕೆ ವಾಸ್ತವ್ಯಕ್ಕಾಗಿ ದಿನಕ್ಕೆ ₹950 ಮತ್ತು ವೆಚ್ಚಕ್ಕಾಗಿ ತಲಾ ₹450 ನೀಡಲಾಗುವುದು ಎಂದು ಸಂಧು ತಿಳಿಸಿದ್ದಾರೆ.</p>.<p>ಕೇಂದ್ರ ಸರ್ಕಾರ ಪರಿಹಾರ ಧನ ಲಭಿಸುವವರೆಗೆ ರಾಜ್ಯ ಸರ್ಕಾರದ ಸ್ವಂತ ಸಂಪನ್ಮೂಲಗಳಿಂದ ದೀರ್ಘ ಮತ್ತು ಅಲ್ಪಾವಧಿಯ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಸಂಧು ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>