<p><strong>ನವದೆಹಲಿ</strong>: ವಿದೇಶ ಪ್ರವಾಸಕ್ಕೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯಿಂದ ಅನುಮತಿ ಸಿಗದ ಹಿನ್ನೆಲೆ ಅಫ್ಗಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರ ಭಾರತ ಭೇಟಿ ರದ್ದಾಗಿದೆ ಎಂದು ಮೂಲಗಳು ತಿಳಿಸಿವೆ.</p><p>ಮುತ್ತಕಿ ಅವರ ಭಾರತ ಭೇಟಿಯನ್ನು ಈ ತಿಂಗಳು ನಿಗದಿಪಡಿಸಲಾಗಿತ್ತು. ಯೋಜನೆಯಂತೆ ಮುತ್ತಕಿ ಅವರು ಭಾರತಕ್ಕೆ ಭೇಟಿ ನೀಡಿದ್ದರೆ, ಅಫ್ಗಾನಿಸ್ಥಾನದಲ್ಲಿ ತಾಲಿಬಾನ್ ಅಧಿಕಾರ ವಹಿಸಿಕೊಂಡ ನಂತರ ಅಲ್ಲಿನ ಸಚಿವರೊಬ್ಬರ ಮೊದಲ ಭಾರತ ಭೇಟಿ ಇದಾಗುತ್ತಿತ್ತು.</p><p>ತಾಲಿಬಾನ್ನ ಎಲ್ಲಾ ಪ್ರಮುಖ ನಾಯಕರ ವಿರುದ್ಧ ವಿಶ್ವಸಂಸ್ಥೆ ಭದ್ರತಾ ಮಂಡಳಿ ಹಲವು ನಿರ್ಬಂಧಗಳನ್ನು ಹೇರಿದೆ. ಇದರನ್ವಯ ವಿದೇಶ ಪ್ರಯಾಣಕ್ಕೆ ವಿನಾಯಿತಿ ಪಡೆಯುವುದು ಕಡ್ಡಾಯವಾಗಿದೆ.</p><p>ಮೇ 15 ರಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಮುತ್ತಕಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದರು. ಈ ವೇಳೆ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಮುತ್ತಕಿ ಬಲವಾಗಿ ಖಂಡಿಸಿದ್ದರು.</p><p>ಭಾರತವು ತಾಲಿಬಾನ್ ರಚನೆಯನ್ನು ಇನ್ನೂ ಗುರುತಿಸಿಲ್ಲ. ಆದರೆ ಯಾವುದೇ ದೇಶದ ವಿರುದ್ಧ ಭಯೋತ್ಪಾದಕ ಚಟುವಟಿಕೆಗಳಿಗೆ ಅಫ್ಗಾನಿಸ್ಥಾನದ ನೆಲವನ್ನು ಬಳಸಬಾರದು ಎಂದು ಒತ್ತಾಯಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವಿದೇಶ ಪ್ರವಾಸಕ್ಕೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯಿಂದ ಅನುಮತಿ ಸಿಗದ ಹಿನ್ನೆಲೆ ಅಫ್ಗಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರ ಭಾರತ ಭೇಟಿ ರದ್ದಾಗಿದೆ ಎಂದು ಮೂಲಗಳು ತಿಳಿಸಿವೆ.</p><p>ಮುತ್ತಕಿ ಅವರ ಭಾರತ ಭೇಟಿಯನ್ನು ಈ ತಿಂಗಳು ನಿಗದಿಪಡಿಸಲಾಗಿತ್ತು. ಯೋಜನೆಯಂತೆ ಮುತ್ತಕಿ ಅವರು ಭಾರತಕ್ಕೆ ಭೇಟಿ ನೀಡಿದ್ದರೆ, ಅಫ್ಗಾನಿಸ್ಥಾನದಲ್ಲಿ ತಾಲಿಬಾನ್ ಅಧಿಕಾರ ವಹಿಸಿಕೊಂಡ ನಂತರ ಅಲ್ಲಿನ ಸಚಿವರೊಬ್ಬರ ಮೊದಲ ಭಾರತ ಭೇಟಿ ಇದಾಗುತ್ತಿತ್ತು.</p><p>ತಾಲಿಬಾನ್ನ ಎಲ್ಲಾ ಪ್ರಮುಖ ನಾಯಕರ ವಿರುದ್ಧ ವಿಶ್ವಸಂಸ್ಥೆ ಭದ್ರತಾ ಮಂಡಳಿ ಹಲವು ನಿರ್ಬಂಧಗಳನ್ನು ಹೇರಿದೆ. ಇದರನ್ವಯ ವಿದೇಶ ಪ್ರಯಾಣಕ್ಕೆ ವಿನಾಯಿತಿ ಪಡೆಯುವುದು ಕಡ್ಡಾಯವಾಗಿದೆ.</p><p>ಮೇ 15 ರಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಮುತ್ತಕಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದರು. ಈ ವೇಳೆ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಮುತ್ತಕಿ ಬಲವಾಗಿ ಖಂಡಿಸಿದ್ದರು.</p><p>ಭಾರತವು ತಾಲಿಬಾನ್ ರಚನೆಯನ್ನು ಇನ್ನೂ ಗುರುತಿಸಿಲ್ಲ. ಆದರೆ ಯಾವುದೇ ದೇಶದ ವಿರುದ್ಧ ಭಯೋತ್ಪಾದಕ ಚಟುವಟಿಕೆಗಳಿಗೆ ಅಫ್ಗಾನಿಸ್ಥಾನದ ನೆಲವನ್ನು ಬಳಸಬಾರದು ಎಂದು ಒತ್ತಾಯಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>