ದೇಶದ್ರೋಹದ ಆರೋಪದ ಮೇಲೆ ಬಂಧನದಲ್ಲಿರುವ ತನ್ನ ಸಹ–ಹೋರಾಟಗಾರ ಅಲ್ಪೇಶ್ ಕಥೇರಿಯಾ ಬಿಡುಗಡೆಗೂ ಇದೇ ವೇಳೆ ಪಟೇಲ್ ಗುಜರಾತ್ ಸರ್ಕಾರವನ್ನು ಒತ್ತಾಯಿಸಿದ್ದರು. ಉಪವಾಸ ಸತ್ಯಾಗ್ರಹದ 14ನೇ ದಿನ ಪಟೇಲ್ ಆರೋಗ್ಯ ಸ್ಥಿತಿ ಗಂಭೀರಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮತ್ತೆ ಉಪವಾಸ ಸತ್ಯಾಗ್ರಹ ಮುಂದುವರಿಸಿದ್ದರು. ದೇಶದ ಹಲವು ಮುಖಂಡರಿಂದ ಪಟೇಲ್ ಹೋರಾಟಕ್ಕೆ ಬೆಂಬಲ ವ್ಯಕ್ತವಾಗಿತ್ತು.