ಅಪರಾಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್, ಅನಿರುದ್ಧ ಬೋಸ್ ಮತ್ತು ಹೃಷಿಕೇಶ್ ರಾಯ್ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠ, ‘ಕೊಲೆ ಸಂದರ್ಭದಲ್ಲಿ ಆತನಿಗೆ 12 ವರ್ಷ 6 ತಿಂಗಳು ವಯಸ್ಸಾಗಿತ್ತು ಎಂಬುದು ಶಾಲಾ ದಾಖಲಾತಿ ಪುಸ್ತಕದಿಂದ ದೃಢಪಟ್ಟಿದೆ. ಜೊತೆಗೆ ಆತ ಈಗಾಗಲೇ 28 ವರ್ಷಗಳ ಜೈಲು ಶಿಕ್ಷೆಯನ್ನು ಪೂರೈಸಿದ್ದಾನೆ. ಇದರ ಆಧಾರದಲ್ಲಿ ಆತನನ್ನು ಖುಲಾಸೆಗೊಳಿಸಲಾಗುತ್ತಿದೆ’ ಎಂದು ಹೇಳಿದೆ.