ತೀರ್ಪಿನ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ, ‘ಸುಪ್ರೀಂ ಕೋರ್ಟ್ನ ತೀರ್ಪು ಈ ನೆಲದ ಕಾನೂನು ಆಗುತ್ತದೆ. ಹೀಗಾಗಿ ವಿಶೇಷ ಸ್ಥಾನಮಾನ ರದ್ದತಿ ಕುರಿತ ಚರ್ಚೆಯು ಇಲ್ಲಿಗೆ ಮುಕ್ತಾಯವಾಗಿದೆ. ಜಮ್ಮು ಮತ್ತು ಕಾಶ್ಮೀರದ ಎಲ್ಲರೂ ನಿರಂಕುಶ ಪ್ರಭುತ್ವಕ್ಕೆ ಬದಲಾಗಿ ಪ್ರಜಾಪ್ರಭುತ್ವಕ್ಕೆ ಬೇಡಿಕೆ ಇರಿಸುತ್ತಿದ್ದಾರೆ. ಆದರೆ, ಚುನಾಯಿತ ಸರ್ಕಾರದ ಕುರಿತು ಬಿಜೆಪಿ ಏಕೆ ಹೆದರುತ್ತಿದೆ’ ಎಂದು ಪ್ರಶ್ನಿಸಿದ್ದಾರೆ.