<p><strong>ಲಖನೌ: </strong>ಉತ್ತರ ಪ್ರದೇಶದ ಜತೆ ಗಡಿಹಂಚಿಕೊಂಡಿರುವ ಬಿಹಾರದ ಬಕ್ಸರ್ ಜಿಲ್ಲೆಯಲ್ಲಿ ಗಂಗಾನದಿಯಲ್ಲಿ ಹೆಣಗಳು ತೇಲಿಬಂದ ಮರುದಿನವೇ, ಉತ್ತರ ಪ್ರದೇಶದ ಗಾಜಿಪುರದಲ್ಲೂ ನದಿಯಲ್ಲಿ ಹೆಣಗಳು ತೇಲಿಬಂದಿವೆ. ಗಾಜಿಪುರ ಜಿಲ್ಲೆಯ ಬಲಿಯಾ ಬಳಿ ಮಂಗಳವಾರ ಹೆಣಗಳು ಕಾಣಿಸಿಕೊಂಡವು.</p>.<p>ಜಿಲ್ಲೆಯ ಬುರಾಲಿ, ನಾರ್ವಾ ಮತ್ತು ಬುಲಕಿ ದಾಸ್ ಘಾಟ್ಗಳಲ್ಲಿ ಹೆಣಗಳು ತೇಲಿಬಂದಿವೆ. ಹೆಣಗಳನ್ನು ಸ್ಥಳೀಯಾಡಳಿತ ಸಿಬ್ಬಂದಿ ಕಲೆಹಾಕಿ, ನಂತರ ಅಂತ್ಯಸಂಸ್ಕಾರ ನಡೆಸಿದ್ದಾರೆ. ಈ ಹೆಣಗಳು ಎಲ್ಲಿಂದ ತೇಲಿ ಬರುತ್ತಿವೆ ಎಂಬುದರ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಗಾಜಿಪುರದ ಗಹ್ಮಾರ್ ಗಡಿಗ್ರಾಮವಾಗಿದೆ. ಬಕ್ಸರ್ನಲ್ಲಿ ಪತ್ತೆಯಾದ ಹೆಣಗಳು ಉತ್ತರ ಪ್ರದೇಶದಿಂದ ತೇಲಿಬಂದಿರಬಹುದು ಎಂದು ಶಂಕಿಸಲಾಗಿದೆ.</p>.<p><strong>ಓದಿ:</strong><a href="https://www.prajavani.net/india-news/bodies-piled-up-on-banks-of-river-ganga-union-jal-shakti-minister-asks-for-probe-829692.html" itemprop="url">ಗಂಗಾ ನದಿ ದಡದಲ್ಲಿ ಮೃತದೇಹಗಳ ರಾಶಿ: ಕೇಂದ್ರ ಜಲಶಕ್ತಿ ಸಚಿವರಿಂದ ತನಿಖೆಗೆ ಸೂಚನೆ</a></p>.<p>‘ಹೆಣಗಳನ್ನು ಸುಡಲು ಅಗತ್ಯವಿರುವ ಕಟ್ಟಿಗೆಯ ಕೊರತೆ ಉಂಟಾಗಿದೆ. ಹೀಗಾಗಿ ಹೆಣಗಳನ್ನು ನದಿಗೆ ಬಿಸಾಡಲಾಗಿದೆ. ಕಟ್ಟಿಗೆಯ ಬೆಲೆ ವಿಪರೀತ ಏರಿಕೆಯಾಗಿದೆ. ಹೀಗಾಗಿ ಯಾರೂ ಹೆಣಗಳನ್ನು ಸುಡುತ್ತಿಲ್ಲ’ ಎಂದು ಕಾನ್ಪುರದ ನಿವಾಸಿಯೊಬ್ಬರು ಹೇಳಿದ್ದಾರೆ.</p>.<p>ಕಟ್ಟಿಗೆ ಇಲ್ಲದ ಕಾರಣ ಉತ್ತರ ಪ್ರದೇಶದ ಉನ್ನಾವ್ ಜಿಲ್ಲೆಯಲ್ಲಿ ನದಿದಂಡೆಯಲ್ಲೇ ಹೆಣಗಳನ್ನು ಹೂಳಲಾಗಿದೆ. ತರಾತುರಿಯಲ್ಲಿ ಕೇವಲ 3-4 ಅಡಿ ಆಳದಲ್ಲಿ ಹೆಣಗಳನ್ನು ಹೂಳಲಾಗಿದೆ. ನದಿ ನೀರಿನ ಮಟ್ಟ ಏರಿಕೆಯಾದ ಕಾರಣ, ಆ ಹೆಣಗಳು ಕೊಚ್ಚಿ ಬಂದಿರುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.</p>.<p>ಸೇತುವೆ ಮೇಲೆ ನಿಂತಿದ್ದ ಆಂಬುಲೆನ್ಸ್ ಒಂದರಿಂದ ಹೆಣಗಳನ್ನು ನದಿಗೆ ಎಸೆಯುತ್ತಿರುವ ದೃಶ್ಯವಿರುವ ವಿಡಿಯೊ ಮಂಗಳವಾರ ವೈರಲ್ ಆಗಿದೆ. ಇದು ಉತ್ತರ ಪ್ರದೇಶದ್ದೇ ಆಂಬುಲೆನ್ಸ್ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹೇಳಲಾಗಿದೆ. ಈ ವಿಡಿಯೊವನ್ನು ಆಧರಿಸಿ ಎನ್ಡಿಟಿವಿ ವರದಿಯನ್ನು ಸಹ ಪ್ರಕಟಿಸಿದೆ.</p>.<p><strong>71 ಹೆಣಗಳು: </strong>ಬಿಹಾರದ ಬಕ್ಸರ್ನಲ್ಲಿ ಸೋಮವಾರ 15ಕ್ಕೂ ಹೆಚ್ಚು ಹೆಣಗಳು ತೇಲಿಬಂದಿದ್ದವು. ಆ ಹೆಣಗಳ ಮರಣೋತ್ತರ ಪರಿಕ್ಷೆ ನಡೆಸಿ, ಅಂತ್ಯಸಂಸ್ಕಾರ ಮಾಡಲಾಗಿದೆ. ಆದರೆ ಮಂಗಳವಾರ ಮತ್ತೆ 71 ಹೆಣಗಳು ಈ ರೀತಿ ತೇಲಿಬಂದಿವೆ. ಈ ಹೆಣಗಳು ಎಲ್ಲಿಂದ ತೇಲಿ ಬರುತ್ತಿವೆ ಎಂಬುದನ್ನು ಪತ್ತೆ ಮಾಡಲು, ಬಕ್ಸರ್ ಜಿಲ್ಲಾಧಿಕಾರಿ ತನಿಖೆಗೆ ಆದೇಶಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/bodies-of-suspected-covid-19-victims-found-floating-in-ganges-in-bihar-829522.html" itemprop="url" target="_blank">ಗಂಗಾ ನದಿಯಲ್ಲಿ ತೇಲುತ್ತಿರುವ ಮೃತದೇಹಗಳು: ಕೋವಿಡ್ ಸೋಂಕಿತರದ್ದೆಂಬ ಶಂಕೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ: </strong>ಉತ್ತರ ಪ್ರದೇಶದ ಜತೆ ಗಡಿಹಂಚಿಕೊಂಡಿರುವ ಬಿಹಾರದ ಬಕ್ಸರ್ ಜಿಲ್ಲೆಯಲ್ಲಿ ಗಂಗಾನದಿಯಲ್ಲಿ ಹೆಣಗಳು ತೇಲಿಬಂದ ಮರುದಿನವೇ, ಉತ್ತರ ಪ್ರದೇಶದ ಗಾಜಿಪುರದಲ್ಲೂ ನದಿಯಲ್ಲಿ ಹೆಣಗಳು ತೇಲಿಬಂದಿವೆ. ಗಾಜಿಪುರ ಜಿಲ್ಲೆಯ ಬಲಿಯಾ ಬಳಿ ಮಂಗಳವಾರ ಹೆಣಗಳು ಕಾಣಿಸಿಕೊಂಡವು.</p>.<p>ಜಿಲ್ಲೆಯ ಬುರಾಲಿ, ನಾರ್ವಾ ಮತ್ತು ಬುಲಕಿ ದಾಸ್ ಘಾಟ್ಗಳಲ್ಲಿ ಹೆಣಗಳು ತೇಲಿಬಂದಿವೆ. ಹೆಣಗಳನ್ನು ಸ್ಥಳೀಯಾಡಳಿತ ಸಿಬ್ಬಂದಿ ಕಲೆಹಾಕಿ, ನಂತರ ಅಂತ್ಯಸಂಸ್ಕಾರ ನಡೆಸಿದ್ದಾರೆ. ಈ ಹೆಣಗಳು ಎಲ್ಲಿಂದ ತೇಲಿ ಬರುತ್ತಿವೆ ಎಂಬುದರ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಗಾಜಿಪುರದ ಗಹ್ಮಾರ್ ಗಡಿಗ್ರಾಮವಾಗಿದೆ. ಬಕ್ಸರ್ನಲ್ಲಿ ಪತ್ತೆಯಾದ ಹೆಣಗಳು ಉತ್ತರ ಪ್ರದೇಶದಿಂದ ತೇಲಿಬಂದಿರಬಹುದು ಎಂದು ಶಂಕಿಸಲಾಗಿದೆ.</p>.<p><strong>ಓದಿ:</strong><a href="https://www.prajavani.net/india-news/bodies-piled-up-on-banks-of-river-ganga-union-jal-shakti-minister-asks-for-probe-829692.html" itemprop="url">ಗಂಗಾ ನದಿ ದಡದಲ್ಲಿ ಮೃತದೇಹಗಳ ರಾಶಿ: ಕೇಂದ್ರ ಜಲಶಕ್ತಿ ಸಚಿವರಿಂದ ತನಿಖೆಗೆ ಸೂಚನೆ</a></p>.<p>‘ಹೆಣಗಳನ್ನು ಸುಡಲು ಅಗತ್ಯವಿರುವ ಕಟ್ಟಿಗೆಯ ಕೊರತೆ ಉಂಟಾಗಿದೆ. ಹೀಗಾಗಿ ಹೆಣಗಳನ್ನು ನದಿಗೆ ಬಿಸಾಡಲಾಗಿದೆ. ಕಟ್ಟಿಗೆಯ ಬೆಲೆ ವಿಪರೀತ ಏರಿಕೆಯಾಗಿದೆ. ಹೀಗಾಗಿ ಯಾರೂ ಹೆಣಗಳನ್ನು ಸುಡುತ್ತಿಲ್ಲ’ ಎಂದು ಕಾನ್ಪುರದ ನಿವಾಸಿಯೊಬ್ಬರು ಹೇಳಿದ್ದಾರೆ.</p>.<p>ಕಟ್ಟಿಗೆ ಇಲ್ಲದ ಕಾರಣ ಉತ್ತರ ಪ್ರದೇಶದ ಉನ್ನಾವ್ ಜಿಲ್ಲೆಯಲ್ಲಿ ನದಿದಂಡೆಯಲ್ಲೇ ಹೆಣಗಳನ್ನು ಹೂಳಲಾಗಿದೆ. ತರಾತುರಿಯಲ್ಲಿ ಕೇವಲ 3-4 ಅಡಿ ಆಳದಲ್ಲಿ ಹೆಣಗಳನ್ನು ಹೂಳಲಾಗಿದೆ. ನದಿ ನೀರಿನ ಮಟ್ಟ ಏರಿಕೆಯಾದ ಕಾರಣ, ಆ ಹೆಣಗಳು ಕೊಚ್ಚಿ ಬಂದಿರುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.</p>.<p>ಸೇತುವೆ ಮೇಲೆ ನಿಂತಿದ್ದ ಆಂಬುಲೆನ್ಸ್ ಒಂದರಿಂದ ಹೆಣಗಳನ್ನು ನದಿಗೆ ಎಸೆಯುತ್ತಿರುವ ದೃಶ್ಯವಿರುವ ವಿಡಿಯೊ ಮಂಗಳವಾರ ವೈರಲ್ ಆಗಿದೆ. ಇದು ಉತ್ತರ ಪ್ರದೇಶದ್ದೇ ಆಂಬುಲೆನ್ಸ್ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹೇಳಲಾಗಿದೆ. ಈ ವಿಡಿಯೊವನ್ನು ಆಧರಿಸಿ ಎನ್ಡಿಟಿವಿ ವರದಿಯನ್ನು ಸಹ ಪ್ರಕಟಿಸಿದೆ.</p>.<p><strong>71 ಹೆಣಗಳು: </strong>ಬಿಹಾರದ ಬಕ್ಸರ್ನಲ್ಲಿ ಸೋಮವಾರ 15ಕ್ಕೂ ಹೆಚ್ಚು ಹೆಣಗಳು ತೇಲಿಬಂದಿದ್ದವು. ಆ ಹೆಣಗಳ ಮರಣೋತ್ತರ ಪರಿಕ್ಷೆ ನಡೆಸಿ, ಅಂತ್ಯಸಂಸ್ಕಾರ ಮಾಡಲಾಗಿದೆ. ಆದರೆ ಮಂಗಳವಾರ ಮತ್ತೆ 71 ಹೆಣಗಳು ಈ ರೀತಿ ತೇಲಿಬಂದಿವೆ. ಈ ಹೆಣಗಳು ಎಲ್ಲಿಂದ ತೇಲಿ ಬರುತ್ತಿವೆ ಎಂಬುದನ್ನು ಪತ್ತೆ ಮಾಡಲು, ಬಕ್ಸರ್ ಜಿಲ್ಲಾಧಿಕಾರಿ ತನಿಖೆಗೆ ಆದೇಶಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/bodies-of-suspected-covid-19-victims-found-floating-in-ganges-in-bihar-829522.html" itemprop="url" target="_blank">ಗಂಗಾ ನದಿಯಲ್ಲಿ ತೇಲುತ್ತಿರುವ ಮೃತದೇಹಗಳು: ಕೋವಿಡ್ ಸೋಂಕಿತರದ್ದೆಂಬ ಶಂಕೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>