ಅಯೋಧ್ಯೆ: ಜನವರಿ 22ರಂದು ನಡೆದ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಬಳಿಕ ಕಳೆದ 11 ದಿನಗಳಲ್ಲಿ ಸುಮಾರು 25 ಲಕ್ಷ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ₹11 ಕೋಟಿ ಕಾಣಿಕೆ ಸಂಗ್ರಹವಾಗಿದೆ ಎಂದು ದೇವಸ್ಥಾನದ ಟ್ರಸ್ಟ್ನ ಉಸ್ತುವಾರಿ ಪ್ರಕಾಶ್ ಗುಪ್ತಾ ಮಾಹಿತಿ ನೀಡಿದ್ದಾರೆ.
ಕಳೆದ 11 ದಿನಗಳಲ್ಲಿ ಸುಮಾರು ₹8 ಕೋಟಿ ಕಾಣಿಕೆ ಹುಂಡಿಯಲ್ಲಿ ಸಂಗ್ರಹವಾಗಿದೆ. ಚೆಕ್ ಮತ್ತು ಆನ್ಲೈನ್ ಮೂಲಕ ಸುಮಾರು ₹3.50 ಕೋಟಿ ಸಂಗ್ರಹವಾಗಿದೆ. ದೇಗುಲದ ಗರ್ಭಗುಡಿಯ ಮುಂಭಾಗದ ದರ್ಶನ ಪಥದ ಬಳಿ ನಾಲ್ಕು ದೊಡ್ಡ ಗಾತ್ರದ ಕಾಣಿಕೆ ಡಬ್ಬಿಗಳನ್ನು ಇಡಲಾಗಿದ್ದು, ಅದರಲ್ಲಿ ಭಕ್ತರು ಕಾಣಿಕೆ ಹಾಕಿದ್ದಾರೆ. ಅಲ್ಲದೇ 10 ಗಣಕೀಕೃತ ಕೌಂಟರ್ಗಳಲ್ಲಿಯೂ ಜನರು ದೇಣಿಗೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.