<p><strong>ಭುವನೇಶ್ವರ:</strong> ಸಂಸದ ಸೇರಿ ರಷ್ಯಾದ ಇಬ್ಬರು ಪ್ರಜೆಗಳ ಅಸಹಜ ಸಾವಿನ ಬೆನ್ನಲ್ಲೆ ಅಲ್ಲಿನ ಮತ್ತೊಬ್ಬ ಪ್ರಜೆ ಕೂಡ ಒಡಿಶಾದಲ್ಲಿ ನಾಪತ್ತೆಯಾಗಿದ್ದು, ಪೊಲೀಸರು ಅವರ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ನಾಪತ್ತೆಯಾಗಿರುವ ವ್ಯಕ್ತಿ ಪುರಿಯಲ್ಲಿ ತಂಗಿದ್ದು, ಉಕ್ರೇನ್ ಯುದ್ಧ ವಿರೋಧಿ ಕಾರ್ಯಕರ್ತರಾಗಿದ್ದರು. ಅವರು ಪುಟಿನ್ ವಿರೋಧಿ ಘೋಷಣೆಗಳಿದ್ದ ಫಲಕವನ್ನು ಹಿಡಿದು ಹಣಕಾಸಿನ ನೆರವು ಕೋರಿದ್ದರು ಎಂದೂ ಹೇಳಿವೆ.</p>.<p>ರಷ್ಯಾದ ಸಂಸದ ಪಾವೆಲ್ ಆ್ಯಂಥವ್ ಹಾಗೂ ವಕೀಲ ವಾಡ್ಲಿಮಿರ್ ಬಿದೆವೊ ಅವರು ರಾಯಗಡದ ಹೋಟೆಲೊಂದರಲ್ಲಿ ಈಚೆಗೆ ಅಸಹಜವಾಗಿ ಸಾವಿಗಿಡಾಗಿದ್ದರು. ಪಾವೆಲ್ ಅವರು ಕೂಡ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಟೀಕಾಕಾರರಾಗಿದ್ದರು.</p>.<p>ನಾಪತ್ತೆಯಾಗಿರುವ ವ್ಯಕ್ತಿಯು ತಿಂಗಳ ಹಿಂದೆ ಭುವನೇಶ್ವರ ರೈಲು ನಿಲ್ದಾಣದಲ್ಲಿ ಪುಟಿನ್ ವಿರೋಧಿ ಬರಹಗಳಿದ್ದ ಫಲಕ ಹಿಡಿದು ನಿಂತಿರುವ ಫೋಟೊವನ್ನು ಕೆಲ ಪ್ರಯಾಣಿಕರು ತೆಗೆದಿದ್ದು, ಅದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು ಎಂದೂ ಮೂಲಗಳು ತಿಳಿಸಿವೆ.</p>.<p>‘ರೈಲು ನಿಲ್ದಾಣದಲ್ಲಿ ತಿರುಗಾಡುತ್ತಿದ್ದ ರಷ್ಯಾ ಪ್ರಜೆಯನ್ನು ಮಾತನಾಡಿಸಿದ್ದೆ ಮತ್ತು ಅವರ ಪಾಸ್ಪೋರ್ಟ್ ಮತ್ತು ವೀಸಾವನ್ನು ಪರಿಶೀಲಿಸಿದ್ದೇನೆ. ಎಲ್ಲಾ ದಾಖಲೆಗಳು ಸರಿ ಇದ್ದವು’ ಎಂದು ಭುವನೇಶ್ವರ ರೈಲು ನಿಲ್ದಾಣದ ರೈಲ್ವೆ ಪೊಲೀಸ್ ಇನ್ಸ್ಪೆಕ್ಟರ್ ಜಯದೇವ್ ಬಿಸ್ವಜಿತ್ ಹೇಳಿದ್ದಾರೆ.</p>.<p>ಅವರಿಗೆ ಇಂಗ್ಲಿಷ್ ಮಾತನಾಡಲು ಬಾರದ ಕಾರಣ ಹೆಚ್ಚಿನ ಮಾಹಿತಿ ಸಂಗ್ರಹಿಸಲು ಸಾದ್ಯವಾಗಿಲ್ಲ ಎಂದೂ ವಿವರಿಸಿದ್ದಾರೆ.</p>.<p>ರಷ್ಯಾ ಪ್ರಜೆ ನಾಪತ್ತೆಯಾಗಿರುವ ಬಗ್ಗೆ ರೈಲ್ವೆ ಪೊಲೀಸರು ನಮಗೆ ಮಾಹಿತಿ ನೀಡಿದ್ದಾರೆ. ನಾವು ಅವರ ಪತ್ತೆಗೆ ಹುಡುಕಾಟ ನಡೆಸುತ್ತಿದ್ದೇವೆ ಎಂದು ಪುರಿಯ ಪೊಲೀಸ್ ವರಿಷ್ಠಾಧಿಕಾರಿ ಕನ್ವರ್ ವಿಶಾಲ್ ಸಿಂಗ್ ಹೇಳಿದ್ದಾರೆ.</p>.<p>ಪಾವೆಲ್ ಆ್ಯಂಥವ್ ಹಾಗೂ ವಾಡ್ಲಿಮಿರ್ ಬಿದೆವೊ ಅವರ ಸಾವಿನ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ:</strong> ಸಂಸದ ಸೇರಿ ರಷ್ಯಾದ ಇಬ್ಬರು ಪ್ರಜೆಗಳ ಅಸಹಜ ಸಾವಿನ ಬೆನ್ನಲ್ಲೆ ಅಲ್ಲಿನ ಮತ್ತೊಬ್ಬ ಪ್ರಜೆ ಕೂಡ ಒಡಿಶಾದಲ್ಲಿ ನಾಪತ್ತೆಯಾಗಿದ್ದು, ಪೊಲೀಸರು ಅವರ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ನಾಪತ್ತೆಯಾಗಿರುವ ವ್ಯಕ್ತಿ ಪುರಿಯಲ್ಲಿ ತಂಗಿದ್ದು, ಉಕ್ರೇನ್ ಯುದ್ಧ ವಿರೋಧಿ ಕಾರ್ಯಕರ್ತರಾಗಿದ್ದರು. ಅವರು ಪುಟಿನ್ ವಿರೋಧಿ ಘೋಷಣೆಗಳಿದ್ದ ಫಲಕವನ್ನು ಹಿಡಿದು ಹಣಕಾಸಿನ ನೆರವು ಕೋರಿದ್ದರು ಎಂದೂ ಹೇಳಿವೆ.</p>.<p>ರಷ್ಯಾದ ಸಂಸದ ಪಾವೆಲ್ ಆ್ಯಂಥವ್ ಹಾಗೂ ವಕೀಲ ವಾಡ್ಲಿಮಿರ್ ಬಿದೆವೊ ಅವರು ರಾಯಗಡದ ಹೋಟೆಲೊಂದರಲ್ಲಿ ಈಚೆಗೆ ಅಸಹಜವಾಗಿ ಸಾವಿಗಿಡಾಗಿದ್ದರು. ಪಾವೆಲ್ ಅವರು ಕೂಡ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಟೀಕಾಕಾರರಾಗಿದ್ದರು.</p>.<p>ನಾಪತ್ತೆಯಾಗಿರುವ ವ್ಯಕ್ತಿಯು ತಿಂಗಳ ಹಿಂದೆ ಭುವನೇಶ್ವರ ರೈಲು ನಿಲ್ದಾಣದಲ್ಲಿ ಪುಟಿನ್ ವಿರೋಧಿ ಬರಹಗಳಿದ್ದ ಫಲಕ ಹಿಡಿದು ನಿಂತಿರುವ ಫೋಟೊವನ್ನು ಕೆಲ ಪ್ರಯಾಣಿಕರು ತೆಗೆದಿದ್ದು, ಅದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು ಎಂದೂ ಮೂಲಗಳು ತಿಳಿಸಿವೆ.</p>.<p>‘ರೈಲು ನಿಲ್ದಾಣದಲ್ಲಿ ತಿರುಗಾಡುತ್ತಿದ್ದ ರಷ್ಯಾ ಪ್ರಜೆಯನ್ನು ಮಾತನಾಡಿಸಿದ್ದೆ ಮತ್ತು ಅವರ ಪಾಸ್ಪೋರ್ಟ್ ಮತ್ತು ವೀಸಾವನ್ನು ಪರಿಶೀಲಿಸಿದ್ದೇನೆ. ಎಲ್ಲಾ ದಾಖಲೆಗಳು ಸರಿ ಇದ್ದವು’ ಎಂದು ಭುವನೇಶ್ವರ ರೈಲು ನಿಲ್ದಾಣದ ರೈಲ್ವೆ ಪೊಲೀಸ್ ಇನ್ಸ್ಪೆಕ್ಟರ್ ಜಯದೇವ್ ಬಿಸ್ವಜಿತ್ ಹೇಳಿದ್ದಾರೆ.</p>.<p>ಅವರಿಗೆ ಇಂಗ್ಲಿಷ್ ಮಾತನಾಡಲು ಬಾರದ ಕಾರಣ ಹೆಚ್ಚಿನ ಮಾಹಿತಿ ಸಂಗ್ರಹಿಸಲು ಸಾದ್ಯವಾಗಿಲ್ಲ ಎಂದೂ ವಿವರಿಸಿದ್ದಾರೆ.</p>.<p>ರಷ್ಯಾ ಪ್ರಜೆ ನಾಪತ್ತೆಯಾಗಿರುವ ಬಗ್ಗೆ ರೈಲ್ವೆ ಪೊಲೀಸರು ನಮಗೆ ಮಾಹಿತಿ ನೀಡಿದ್ದಾರೆ. ನಾವು ಅವರ ಪತ್ತೆಗೆ ಹುಡುಕಾಟ ನಡೆಸುತ್ತಿದ್ದೇವೆ ಎಂದು ಪುರಿಯ ಪೊಲೀಸ್ ವರಿಷ್ಠಾಧಿಕಾರಿ ಕನ್ವರ್ ವಿಶಾಲ್ ಸಿಂಗ್ ಹೇಳಿದ್ದಾರೆ.</p>.<p>ಪಾವೆಲ್ ಆ್ಯಂಥವ್ ಹಾಗೂ ವಾಡ್ಲಿಮಿರ್ ಬಿದೆವೊ ಅವರ ಸಾವಿನ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>