<p><strong>ನವದೆಹಲಿ</strong>: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕೇವಲ ಒಂದು ತಿಂಗಳು ಬಾಕಿ ಇರುವಂತೆಯೇ, ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟದ ಪರವಾಗಿ ಸಾರ್ವಜನಿಕ ಅಭಿಪ್ರಾಯವನ್ನು ರೂಪಿಸಲು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ವ್ಯಾಪಕ ಪ್ರಚಾರ ಕಾರ್ಯಕ್ರಮ ಆರಂಭಿಸಿದೆ. </p>.<p>ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಎನಿಸಿರುವ ಆರ್ಎಸ್ಎಸ್ ತನ್ನ ಎಲ್ಲಾ ಅಂಗ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ ಪ್ರಚಾರ ಕಾರ್ಯ ಪ್ರಾರಂಭಿಸಿದೆ ಎಂದು ಮೂಲಗಳು ತಿಳಿಸಿವೆ.</p>.<p>‘ರಾಜ್ಯದಾದ್ಯಂತ ತಂಡಗಳನ್ನು ರಚಿಸಲಾಗಿದ್ದು, ಆ ತಂಡಗಳು ತಮ್ಮ ಸಂದೇಶವನ್ನು ಆಯಾ ಪ್ರದೇಶಗಳ ಜನರಿಗೆ ತಲುಪಿಸುವ ಕೆಲಸವನ್ನು ಆರಂಭಿಸಿವೆ’ ಎಂದೂ ಹೇಳಿವೆ. </p>.<p>ಪ್ರತಿ ತಂಡವು 5 ರಿಂದ 10 ಜನರ ಸಣ್ಣ ಗುಂಪುಗಳನ್ನು ಸೇರಿಸಿಕೊಂಡು ಸಭೆಗಳನ್ನು ನಡೆಸುತ್ತಿವೆ ಮತ್ತು ಆಯಾ ಪ್ರದೇಶಗಳಲ್ಲಿನ 'ಮೊಹಲ್ಲಾ'ಗಳಲ್ಲಿ ತಮ್ಮ ಸ್ಥಳೀಯ ಕಾರ್ಯಕರ್ತರ ಮೂಲಕ ಪ್ರತಿಯೊಂದು ಕುಟುಂಬವನ್ನು ತಲುಪುವ ಕೆಲಸ ಮಾಡುತ್ತಿವೆ ಎಂದು ವಿವರಿಸಿವೆ.</p>.<p>‘ಇಂತಹ ಸಭೆಗಳಲ್ಲಿ, ಅವರು ಬಿಜೆಪಿ ಪರ ನೇರವಾಗಿ ಪ್ರಚಾರ ಮಾಡುತ್ತಿಲ್ಲ. ಆದರೆ, ರಾಷ್ಟ್ರೀಯ ಹಿತಾಸಕ್ತಿ, ಹಿಂದುತ್ವ, ಒಳ್ಳೆಯ ಆಡಳಿತ, ಅಭಿವೃದ್ಧಿ, ಸಾರ್ವಜನಿಕ ಕಲ್ಯಾಣ ಮತ್ತು ಇತರ ಸ್ಥಳೀಯ ವಿಷಯಗಳ ಬಗ್ಗೆ ಚರ್ಚೆಗಳ ಮೂಲಕ ಜನರ ಅಭಿಪ್ರಾಯವನ್ನು ರೂಪಿಸುತ್ತಿದ್ದಾರೆ’ ಎಂದು ಮೂಲಗಳು ತಿಳಿಸಿವೆ.</p>.<p>ಪ್ರಚಾರ ಕೆಲಸಕ್ಕೆ ತಂಡಗಳನ್ನು ರಚಿಸುವ ಮೊದಲು, ಆರ್ಎಸ್ಎಸ್ ಮತ್ತು ಅದರ ಅಂಗಸಂಸ್ಥೆಗಳ ಪದಾಧಿಕಾರಿಗಳು ಕಾರ್ಯತಂತ್ರವನ್ನು ರೂಪಿಸಲು ಸಮನ್ವಯ ಸಭೆಗಳನ್ನು ನಡೆಸಿದ್ದಾರೆ. ಈಚೆಗೆ ನಡೆದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿರುವುದರಿಂದ, ಮಹಾರಾಷ್ಟ್ರದಲ್ಲಿ ಆರ್ಎಸ್ಎಸ್ ಇಟ್ಟಿರುವ ಹೆಜ್ಜೆ ಮಹತ್ವ ಪಡೆದುಕೊಂಡಿದೆ. </p>.<p>ಆರ್ಎಸ್ಎಸ್, ಹರಿಯಾಣದಾದ್ಯಂತ ತನ್ನ ಅಂಗಸಂಸ್ಥೆಗಳೊಂದಿಗೆ ನಡೆಸಿದ್ದ ಸಭೆಗಳು ಅಲ್ಲಿ ಬಿಜೆಪಿಯ ಚುನಾವಣಾ ಯಶಸ್ಸಿನ ಹಿಂದಿನ ಪ್ರಮುಖ ಅಂಶಗಳಲ್ಲಿ ಒಂದಾಗಿದೆ ಎಂದು ಮೂಲಗಳು ಹೇಳಿವೆ. ಆಡಳಿತ ವಿರೋಧ ಅಲೆಯಿದ್ದರೂ, ಹರಿಯಾಣದಲ್ಲಿ 90 ರಲ್ಲಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಹ್ಯಾಟ್ರಿಕ್ಗೆ ಗೆಲುವು ಸಾಧಿಸಿದೆ. </p>.<p>ತಾನು ನೇರವಾಗಿ ಚುನಾವಣಾ ರಾಜಕೀಯದಲ್ಲಿ ಭಾಗಿಯಾಗುವುದಿಲ್ಲ ಎಂದು ಆರ್ಎಸ್ಎಸ್ ಹೇಳುತ್ತಾ ಬಂದಿದೆಯಾದರೂ, ಚುನಾವಣೆಯಲ್ಲಿ ಅದು ಬಿಜೆಪಿಯ ಗುಪ್ತ ಶಕ್ತಿಯಾಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ.</p>.<p>ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಪಕ್ಷಕ್ಕೆ ಅನುಕೂಲಕರವಾದ ಸಾರ್ವಜನಿಕ ಆಭಿಪ್ರಾಯವನ್ನು ರೂಪಿಸಲು ಆರ್ಎಸ್ಎಸ್ ಕಾರ್ಯಕರ್ತರು ಅಖಾಡಕ್ಕೆ ಇಳಿದಿರುವುದು, ಮಹಾರಾಷ್ಟ್ರದ ಬಿಜೆಪಿ ನಾಯಕರಲ್ಲಿ ಆಶಾವಾದವನ್ನು ತುಂಬಿದೆ. ಹರಿಯಾಣದಲ್ಲಿ ಅನುಸರಿಸಿದ ತಂತ್ರವು ಮಹಾರಾಷ್ಟ್ರದಲ್ಲೂ ಯಶಸ್ವಿಯಾಗಬಹುದು ಎಂದು ಆಶಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕೇವಲ ಒಂದು ತಿಂಗಳು ಬಾಕಿ ಇರುವಂತೆಯೇ, ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟದ ಪರವಾಗಿ ಸಾರ್ವಜನಿಕ ಅಭಿಪ್ರಾಯವನ್ನು ರೂಪಿಸಲು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ವ್ಯಾಪಕ ಪ್ರಚಾರ ಕಾರ್ಯಕ್ರಮ ಆರಂಭಿಸಿದೆ. </p>.<p>ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಎನಿಸಿರುವ ಆರ್ಎಸ್ಎಸ್ ತನ್ನ ಎಲ್ಲಾ ಅಂಗ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ ಪ್ರಚಾರ ಕಾರ್ಯ ಪ್ರಾರಂಭಿಸಿದೆ ಎಂದು ಮೂಲಗಳು ತಿಳಿಸಿವೆ.</p>.<p>‘ರಾಜ್ಯದಾದ್ಯಂತ ತಂಡಗಳನ್ನು ರಚಿಸಲಾಗಿದ್ದು, ಆ ತಂಡಗಳು ತಮ್ಮ ಸಂದೇಶವನ್ನು ಆಯಾ ಪ್ರದೇಶಗಳ ಜನರಿಗೆ ತಲುಪಿಸುವ ಕೆಲಸವನ್ನು ಆರಂಭಿಸಿವೆ’ ಎಂದೂ ಹೇಳಿವೆ. </p>.<p>ಪ್ರತಿ ತಂಡವು 5 ರಿಂದ 10 ಜನರ ಸಣ್ಣ ಗುಂಪುಗಳನ್ನು ಸೇರಿಸಿಕೊಂಡು ಸಭೆಗಳನ್ನು ನಡೆಸುತ್ತಿವೆ ಮತ್ತು ಆಯಾ ಪ್ರದೇಶಗಳಲ್ಲಿನ 'ಮೊಹಲ್ಲಾ'ಗಳಲ್ಲಿ ತಮ್ಮ ಸ್ಥಳೀಯ ಕಾರ್ಯಕರ್ತರ ಮೂಲಕ ಪ್ರತಿಯೊಂದು ಕುಟುಂಬವನ್ನು ತಲುಪುವ ಕೆಲಸ ಮಾಡುತ್ತಿವೆ ಎಂದು ವಿವರಿಸಿವೆ.</p>.<p>‘ಇಂತಹ ಸಭೆಗಳಲ್ಲಿ, ಅವರು ಬಿಜೆಪಿ ಪರ ನೇರವಾಗಿ ಪ್ರಚಾರ ಮಾಡುತ್ತಿಲ್ಲ. ಆದರೆ, ರಾಷ್ಟ್ರೀಯ ಹಿತಾಸಕ್ತಿ, ಹಿಂದುತ್ವ, ಒಳ್ಳೆಯ ಆಡಳಿತ, ಅಭಿವೃದ್ಧಿ, ಸಾರ್ವಜನಿಕ ಕಲ್ಯಾಣ ಮತ್ತು ಇತರ ಸ್ಥಳೀಯ ವಿಷಯಗಳ ಬಗ್ಗೆ ಚರ್ಚೆಗಳ ಮೂಲಕ ಜನರ ಅಭಿಪ್ರಾಯವನ್ನು ರೂಪಿಸುತ್ತಿದ್ದಾರೆ’ ಎಂದು ಮೂಲಗಳು ತಿಳಿಸಿವೆ.</p>.<p>ಪ್ರಚಾರ ಕೆಲಸಕ್ಕೆ ತಂಡಗಳನ್ನು ರಚಿಸುವ ಮೊದಲು, ಆರ್ಎಸ್ಎಸ್ ಮತ್ತು ಅದರ ಅಂಗಸಂಸ್ಥೆಗಳ ಪದಾಧಿಕಾರಿಗಳು ಕಾರ್ಯತಂತ್ರವನ್ನು ರೂಪಿಸಲು ಸಮನ್ವಯ ಸಭೆಗಳನ್ನು ನಡೆಸಿದ್ದಾರೆ. ಈಚೆಗೆ ನಡೆದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿರುವುದರಿಂದ, ಮಹಾರಾಷ್ಟ್ರದಲ್ಲಿ ಆರ್ಎಸ್ಎಸ್ ಇಟ್ಟಿರುವ ಹೆಜ್ಜೆ ಮಹತ್ವ ಪಡೆದುಕೊಂಡಿದೆ. </p>.<p>ಆರ್ಎಸ್ಎಸ್, ಹರಿಯಾಣದಾದ್ಯಂತ ತನ್ನ ಅಂಗಸಂಸ್ಥೆಗಳೊಂದಿಗೆ ನಡೆಸಿದ್ದ ಸಭೆಗಳು ಅಲ್ಲಿ ಬಿಜೆಪಿಯ ಚುನಾವಣಾ ಯಶಸ್ಸಿನ ಹಿಂದಿನ ಪ್ರಮುಖ ಅಂಶಗಳಲ್ಲಿ ಒಂದಾಗಿದೆ ಎಂದು ಮೂಲಗಳು ಹೇಳಿವೆ. ಆಡಳಿತ ವಿರೋಧ ಅಲೆಯಿದ್ದರೂ, ಹರಿಯಾಣದಲ್ಲಿ 90 ರಲ್ಲಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಹ್ಯಾಟ್ರಿಕ್ಗೆ ಗೆಲುವು ಸಾಧಿಸಿದೆ. </p>.<p>ತಾನು ನೇರವಾಗಿ ಚುನಾವಣಾ ರಾಜಕೀಯದಲ್ಲಿ ಭಾಗಿಯಾಗುವುದಿಲ್ಲ ಎಂದು ಆರ್ಎಸ್ಎಸ್ ಹೇಳುತ್ತಾ ಬಂದಿದೆಯಾದರೂ, ಚುನಾವಣೆಯಲ್ಲಿ ಅದು ಬಿಜೆಪಿಯ ಗುಪ್ತ ಶಕ್ತಿಯಾಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ.</p>.<p>ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಪಕ್ಷಕ್ಕೆ ಅನುಕೂಲಕರವಾದ ಸಾರ್ವಜನಿಕ ಆಭಿಪ್ರಾಯವನ್ನು ರೂಪಿಸಲು ಆರ್ಎಸ್ಎಸ್ ಕಾರ್ಯಕರ್ತರು ಅಖಾಡಕ್ಕೆ ಇಳಿದಿರುವುದು, ಮಹಾರಾಷ್ಟ್ರದ ಬಿಜೆಪಿ ನಾಯಕರಲ್ಲಿ ಆಶಾವಾದವನ್ನು ತುಂಬಿದೆ. ಹರಿಯಾಣದಲ್ಲಿ ಅನುಸರಿಸಿದ ತಂತ್ರವು ಮಹಾರಾಷ್ಟ್ರದಲ್ಲೂ ಯಶಸ್ವಿಯಾಗಬಹುದು ಎಂದು ಆಶಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>