<p><strong>ಗುವಾಹಟಿ:</strong> ಭಾರತವು ಸಿಂಧೂ ಜಲ ಒಪ್ಪಂದವನ್ನು (ಐಡಬ್ಲ್ಯುಟಿ) ಅಮಾನತಿಲ್ಲಿಟ್ಟ ಬಳಿಕ, ‘ಭಾರತಕ್ಕೆ ಬ್ರಹ್ಮಪುತ್ರ ನೀರಿನ ಹರಿವನ್ನು ಚೀನಾ ತಡೆದರೆ ಏನಾಗಬಹುದು’ ಎಂಬ ಹೊಸ ‘ಬೆದರಿಕೆಯ ಸಂಕಥನ’ವನ್ನು ಪಾಕಿಸ್ತಾನ ಹುಟ್ಟುಹಾಕುತ್ತಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ ಟೀಕಿಸಿದ್ದಾರೆ.</p>.<p>‘ಬ್ರಹ್ಮಪುತ್ರ ನೀರಿನ ಹರಿವನ್ನು ತಡೆಯುವ ಕುರಿತಂತೆ ಯಾವುದೇ ಘೋಷಣೆಯನ್ನು ಚೀನಾ ಮಾಡಿಲ್ಲ. ಒಂದು ವೇಳೆ ಇಂತಹ ಕ್ರಮಕ್ಕೆ ಚೀನಾ ಮುಂದಾದಲ್ಲಿ, ಅದು ಅಸ್ಸಾಂನಲ್ಲಿ ಪ್ರತಿ ವರ್ಷ ಸಂಭವಿಸುವ ಪ್ರವಾಹಗಳನ್ನು ದೂರ ಮಾಡಲು ನೆರವಾಗಲಿದೆ’ ಎಂದು ಅವರು ‘ಎಕ್ಸ್’ನಲ್ಲಿ ಹೇಳಿದ್ದಾರೆ.</p>.<p>‘ಈಶಾನ್ಯ ಭಾರತದಲ್ಲಿ ಬೀಳುವ ಮಳೆಯೇ ಬ್ರಹ್ಮಪುತ್ರ ನದಿಯಲ್ಲಿ ನೀರಿನ ಹರಿವು ಹೆಚ್ಚಳಕ್ಕೆ ಪ್ರಮುಖ ಕಾರಣ. ಬ್ರಹ್ಮಪುತ್ರದಲ್ಲಿ ಉಂಟಾಗುವ ಪ್ರವಾಹಕ್ಕೆ ಹಿಮಬಂಡೆಗಳ ಕರಗುವಿಕೆ ಹಾಗೂ ಟಿಬೆಟ್ನಲ್ಲಿ ಸುರಿಯುವ ಮಳೆಯ ಕೊಡುಗೆ ಶೇ 30–35 ಮಾತ್ರ’ ಎಂದಿದ್ದಾರೆ.</p>.<p>‘ಹಳೆಯದಾದ ಸಿಂಧೂ ಜಲ ಒಪ್ಪಂದವನ್ನು ಭಾರತ ಅಮಾನತಿನಲ್ಲಿಡುವ ನಿರ್ಧಾರ ತೆಗೆದುಕೊಂಡ ನಂತರ ಪಾಕಿಸ್ತಾನ ಇಂತಹ ಬೆದರಿಕೆಯ ಸಂಕಥನವನ್ನು ಸೃಷ್ಟಿಸುತ್ತಿದೆ. ಇಂತಹ ಸಂಕಥನಗಳಿಗೆ ನಾವು ಹೆದರಬೇಕಿಲ್ಲ. ಆದರೆ, ವಾಸ್ತವ ಸಂಗತಿಗಳು ಹಾಗೂ ಸ್ಪಷ್ಟತೆಯೊಂದಿಗೆ ಇಂತಹ ಮಿಥ್ಯೆಗಳನ್ನು ಬಯಲು ಮಾಡೋಣ’ ಎಂದೂ ಶರ್ಮಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong> ಭಾರತವು ಸಿಂಧೂ ಜಲ ಒಪ್ಪಂದವನ್ನು (ಐಡಬ್ಲ್ಯುಟಿ) ಅಮಾನತಿಲ್ಲಿಟ್ಟ ಬಳಿಕ, ‘ಭಾರತಕ್ಕೆ ಬ್ರಹ್ಮಪುತ್ರ ನೀರಿನ ಹರಿವನ್ನು ಚೀನಾ ತಡೆದರೆ ಏನಾಗಬಹುದು’ ಎಂಬ ಹೊಸ ‘ಬೆದರಿಕೆಯ ಸಂಕಥನ’ವನ್ನು ಪಾಕಿಸ್ತಾನ ಹುಟ್ಟುಹಾಕುತ್ತಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ ಟೀಕಿಸಿದ್ದಾರೆ.</p>.<p>‘ಬ್ರಹ್ಮಪುತ್ರ ನೀರಿನ ಹರಿವನ್ನು ತಡೆಯುವ ಕುರಿತಂತೆ ಯಾವುದೇ ಘೋಷಣೆಯನ್ನು ಚೀನಾ ಮಾಡಿಲ್ಲ. ಒಂದು ವೇಳೆ ಇಂತಹ ಕ್ರಮಕ್ಕೆ ಚೀನಾ ಮುಂದಾದಲ್ಲಿ, ಅದು ಅಸ್ಸಾಂನಲ್ಲಿ ಪ್ರತಿ ವರ್ಷ ಸಂಭವಿಸುವ ಪ್ರವಾಹಗಳನ್ನು ದೂರ ಮಾಡಲು ನೆರವಾಗಲಿದೆ’ ಎಂದು ಅವರು ‘ಎಕ್ಸ್’ನಲ್ಲಿ ಹೇಳಿದ್ದಾರೆ.</p>.<p>‘ಈಶಾನ್ಯ ಭಾರತದಲ್ಲಿ ಬೀಳುವ ಮಳೆಯೇ ಬ್ರಹ್ಮಪುತ್ರ ನದಿಯಲ್ಲಿ ನೀರಿನ ಹರಿವು ಹೆಚ್ಚಳಕ್ಕೆ ಪ್ರಮುಖ ಕಾರಣ. ಬ್ರಹ್ಮಪುತ್ರದಲ್ಲಿ ಉಂಟಾಗುವ ಪ್ರವಾಹಕ್ಕೆ ಹಿಮಬಂಡೆಗಳ ಕರಗುವಿಕೆ ಹಾಗೂ ಟಿಬೆಟ್ನಲ್ಲಿ ಸುರಿಯುವ ಮಳೆಯ ಕೊಡುಗೆ ಶೇ 30–35 ಮಾತ್ರ’ ಎಂದಿದ್ದಾರೆ.</p>.<p>‘ಹಳೆಯದಾದ ಸಿಂಧೂ ಜಲ ಒಪ್ಪಂದವನ್ನು ಭಾರತ ಅಮಾನತಿನಲ್ಲಿಡುವ ನಿರ್ಧಾರ ತೆಗೆದುಕೊಂಡ ನಂತರ ಪಾಕಿಸ್ತಾನ ಇಂತಹ ಬೆದರಿಕೆಯ ಸಂಕಥನವನ್ನು ಸೃಷ್ಟಿಸುತ್ತಿದೆ. ಇಂತಹ ಸಂಕಥನಗಳಿಗೆ ನಾವು ಹೆದರಬೇಕಿಲ್ಲ. ಆದರೆ, ವಾಸ್ತವ ಸಂಗತಿಗಳು ಹಾಗೂ ಸ್ಪಷ್ಟತೆಯೊಂದಿಗೆ ಇಂತಹ ಮಿಥ್ಯೆಗಳನ್ನು ಬಯಲು ಮಾಡೋಣ’ ಎಂದೂ ಶರ್ಮಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>