<p><strong>ನವದೆಹಲಿ</strong>: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಮುಂದೆ ಖುದ್ದಾಗಿ ಅಥವಾ ವಕೀಲರ ಮೂಲಕವಾಗಿ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಮಂಗಳವಾರ ತಿಳಿಸಿದ್ದಾರೆ.</p><p>ಸ್ವರ್ಣಕಾಂತ ಶರ್ಮಾ ಅವರ ಮುಂದೆ ವಿಚಾರಣೆ ಹಾಜರಾಗುವುದಿಲ್ಲ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ನಿರ್ಧರಿಸಿದ ಮರುದಿನವೇ ಸಿಸೋಡಿಯಾ ಈ ನಿರ್ಧಾರ ಕೈಗೊಂಡಿದ್ದಾರೆ.</p><p>ಈ ಕುರಿತು ಶರ್ಮಾ ಅವರಿಗೆ ಸಿಸೋಡಿಯಾ ಪತ್ರ ಬರೆದಿದ್ದಾರೆ.</p><p>‘ವಿಚಾರಣೆಗೆ ನಾನು ಖುದ್ದಾಗಿ ಹಾಜರಾಗುವುದಿಲ್ಲ ಮತ್ತು ನನ್ನ ಪರವಾಗಿಯೂ ಯಾವುದೇ ವಕೀಲರು ಹಾಜರಿರುವುದಿಲ್ಲ. ನಿಮ್ಮ ಮಕ್ಕಳ ಭವಿಷ್ಯ ತುಷಾರ್ ಮೆಹ್ತಾ ಅವರ ಕೈಯಲ್ಲಿದೆ’ ಎಂದು ಸಿಸೋಡಿಯಾ ಹೇಳಿದ್ದಾರೆ.</p><p>‘ನಿಮ್ಮಿಂದ ನಾನು ನ್ಯಾಯವನ್ನು ನಿರೀಕ್ಷಿಸುತ್ತಿಲ್ಲ. ಸತ್ಯಾಗ್ರಹವನ್ನು ಹೊರತುಪಡಿಸಿ ಬೇರೆ ಯಾವುದೇ ದಾರಿ ಉಳಿದಿಲ್ಲ’ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.</p><p>ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯಬೇಕು ಎಂದು ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಶರ್ಮಾ ಅವರು ತಿರಸ್ಕರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ ಮುಂದೆ ಖುದ್ದಾಗಿ ಅಥವಾ ವಕೀಲರ ಮೂಲಕವಾಗಿ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಮಂಗಳವಾರ ತಿಳಿಸಿದ್ದಾರೆ.</p><p>ಸ್ವರ್ಣಕಾಂತ ಶರ್ಮಾ ಅವರ ಮುಂದೆ ವಿಚಾರಣೆ ಹಾಜರಾಗುವುದಿಲ್ಲ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ನಿರ್ಧರಿಸಿದ ಮರುದಿನವೇ ಸಿಸೋಡಿಯಾ ಈ ನಿರ್ಧಾರ ಕೈಗೊಂಡಿದ್ದಾರೆ.</p><p>ಈ ಕುರಿತು ಶರ್ಮಾ ಅವರಿಗೆ ಸಿಸೋಡಿಯಾ ಪತ್ರ ಬರೆದಿದ್ದಾರೆ.</p><p>‘ವಿಚಾರಣೆಗೆ ನಾನು ಖುದ್ದಾಗಿ ಹಾಜರಾಗುವುದಿಲ್ಲ ಮತ್ತು ನನ್ನ ಪರವಾಗಿಯೂ ಯಾವುದೇ ವಕೀಲರು ಹಾಜರಿರುವುದಿಲ್ಲ. ನಿಮ್ಮ ಮಕ್ಕಳ ಭವಿಷ್ಯ ತುಷಾರ್ ಮೆಹ್ತಾ ಅವರ ಕೈಯಲ್ಲಿದೆ’ ಎಂದು ಸಿಸೋಡಿಯಾ ಹೇಳಿದ್ದಾರೆ.</p><p>‘ನಿಮ್ಮಿಂದ ನಾನು ನ್ಯಾಯವನ್ನು ನಿರೀಕ್ಷಿಸುತ್ತಿಲ್ಲ. ಸತ್ಯಾಗ್ರಹವನ್ನು ಹೊರತುಪಡಿಸಿ ಬೇರೆ ಯಾವುದೇ ದಾರಿ ಉಳಿದಿಲ್ಲ’ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.</p><p>ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯಬೇಕು ಎಂದು ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಶರ್ಮಾ ಅವರು ತಿರಸ್ಕರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>