<p><strong>ಅಮೃತಸರ</strong>: ಪಂಜಾಬ್ನ ಅಮೃತಸರದ ಬಸ್ನಿಲ್ದಾಣದಲ್ಲಿ ನಿಲುಗಡೆ ಮಾಡಲಾಗಿದ್ದ ಹಿಮಾಚಲಪ್ರದೇಶದ ನಾಲ್ಕು ಸರ್ಕಾರಿ ಬಸ್ಗಳ ಗಾಜಿಗೆ ಅಪರಿಚಿತ ವ್ಯಕ್ತಿಗಳು ಶನಿವಾರ ಹಾನಿ ಉಂಟುಮಾಡಿದ್ದಾರೆ.</p><p>ಹಾನಿಗೊಳಗಾಗಿರುವ ಬಸ್ಗಳ ಮೇಲೆ ಖಾಲಿಸ್ತಾನಿ ಪರ ಬರಹಗಳನ್ನು ಬರೆಯಲಾಗಿದೆ. ಘಟನೆ ನಡೆದಿರುವ ವೇಳೆ ಬಸ್ ಒಳಗಡೆ ಯಾರೂ ಇರಲಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.</p><p>ಇತ್ತೀಚೆಗೆ ಮೊಹಾಲಿಯ ಕರಾರ್ನಲ್ಲಿಯೂ ಹಿಮಾಚಲಪ್ರದೇಶದ ಸರ್ಕಾರಿ ಬಸ್ನ ಮುಂಭಾಗದ ಗಾಜು ಮತ್ತು ಕಿಟಕಿಗಳನ್ನು ಒಡೆದುಹಾಕಲಾಗಿತ್ತು</p><p>ಖಾಲಿಸ್ತಾನಿ ಪರ ಹೋರಾಟಗಾರ ಜರ್ನೈಲ್ ಸಿಂಗ್ ಚಿತ್ರವಿದ್ದ ಬಾವುಟವನ್ನು, ಪಂಜಾಬ್ನಿಂದ ಬಂದಿದ್ದ ಯುವಕರ ಬೈಕ್ನಿಂದ ಹಿಮಾಚಲ ಪ್ರದೇಶದ ಸ್ಥಳೀಯರು ಇತ್ತೀಚೆಗೆ ತೆರವುಗೊಳಿಸಿದ್ದರು. ಇದು ಖಾಲಿಸ್ತಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.</p><p>ದಾಲ್ ಖಾಲ್ಸಾ ಮತ್ತು ಸಿಖ್ ಯೂತ್ ಆಫ್ ಪಂಜಾಬ್ನ ಕಾರ್ಯಕರ್ತರು ಭಿಂದ್ರನ್ವಾಲೆಯ ಚಿತ್ರಗಳನ್ನು ಹಿಮಾಚಲಪ್ರದೇಶದ ಸರ್ಕಾರಿ ಮತ್ತು ಖಾಸಗಿ ಬಸ್ಗಳಿಗೆ ಅಂಟಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮೃತಸರ</strong>: ಪಂಜಾಬ್ನ ಅಮೃತಸರದ ಬಸ್ನಿಲ್ದಾಣದಲ್ಲಿ ನಿಲುಗಡೆ ಮಾಡಲಾಗಿದ್ದ ಹಿಮಾಚಲಪ್ರದೇಶದ ನಾಲ್ಕು ಸರ್ಕಾರಿ ಬಸ್ಗಳ ಗಾಜಿಗೆ ಅಪರಿಚಿತ ವ್ಯಕ್ತಿಗಳು ಶನಿವಾರ ಹಾನಿ ಉಂಟುಮಾಡಿದ್ದಾರೆ.</p><p>ಹಾನಿಗೊಳಗಾಗಿರುವ ಬಸ್ಗಳ ಮೇಲೆ ಖಾಲಿಸ್ತಾನಿ ಪರ ಬರಹಗಳನ್ನು ಬರೆಯಲಾಗಿದೆ. ಘಟನೆ ನಡೆದಿರುವ ವೇಳೆ ಬಸ್ ಒಳಗಡೆ ಯಾರೂ ಇರಲಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.</p><p>ಇತ್ತೀಚೆಗೆ ಮೊಹಾಲಿಯ ಕರಾರ್ನಲ್ಲಿಯೂ ಹಿಮಾಚಲಪ್ರದೇಶದ ಸರ್ಕಾರಿ ಬಸ್ನ ಮುಂಭಾಗದ ಗಾಜು ಮತ್ತು ಕಿಟಕಿಗಳನ್ನು ಒಡೆದುಹಾಕಲಾಗಿತ್ತು</p><p>ಖಾಲಿಸ್ತಾನಿ ಪರ ಹೋರಾಟಗಾರ ಜರ್ನೈಲ್ ಸಿಂಗ್ ಚಿತ್ರವಿದ್ದ ಬಾವುಟವನ್ನು, ಪಂಜಾಬ್ನಿಂದ ಬಂದಿದ್ದ ಯುವಕರ ಬೈಕ್ನಿಂದ ಹಿಮಾಚಲ ಪ್ರದೇಶದ ಸ್ಥಳೀಯರು ಇತ್ತೀಚೆಗೆ ತೆರವುಗೊಳಿಸಿದ್ದರು. ಇದು ಖಾಲಿಸ್ತಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.</p><p>ದಾಲ್ ಖಾಲ್ಸಾ ಮತ್ತು ಸಿಖ್ ಯೂತ್ ಆಫ್ ಪಂಜಾಬ್ನ ಕಾರ್ಯಕರ್ತರು ಭಿಂದ್ರನ್ವಾಲೆಯ ಚಿತ್ರಗಳನ್ನು ಹಿಮಾಚಲಪ್ರದೇಶದ ಸರ್ಕಾರಿ ಮತ್ತು ಖಾಸಗಿ ಬಸ್ಗಳಿಗೆ ಅಂಟಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>