<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ಸಂದೇಶ್ಖಾಲಿ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿರುವುದನ್ನು ವಿರೋಧಿಸಿ ವಿವಿಧೆಡೆ ಕೈಬರಹದ ಪೋಸ್ಟರ್ಗಳನ್ನು ಅಂಟಿಸಲಾಗಿದೆ.</p>.<p>ಟಿಎಂಸಿಯಿಂದ ಅಮಾನತುಗೊಂಡಿರುವ ಮುಖಂಡ ಶಾಜಹಾನ್ ಶೇಖ್ ಮತ್ತು ಬೆಂಬಲಿಗರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪ ಮಾಡಿದ್ದ ರೇಖಾ ಪಾತ್ರಾ ಎಂಬವರನ್ನು ಬಿಜೆಪಿಯು ಬಸಿರ್ಹಾತ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಭಾನುವಾರ ಘೋಷಿಸಿತ್ತು. ಸಂದೇಶ್ಖಾಲಿ ಕೂಡ ಈ ಕ್ಷೇತ್ರಕ್ಕೆ ಸೇರಿದೆ. </p>.<p>‘ರೇಖಾ ಅವರು ಅಭ್ಯರ್ಥಿಯಾಗುವುದನ್ನು ನಾವು ಬಯಸುವುದಿಲ್ಲ’ ಎಂಬ ಘೋಷವಾಕ್ಯವಿರುವ ಪೋಸ್ಟರ್ಗಳು ಕ್ಷೇತ್ರದ ವಿವಿಧೆಡೆ ಕಂಡು ಬಂದಿವೆ.</p>.<p>ಆಡಳಿತಾರೂಢ ಟಿಎಂಸಿಯು ಇಂತಹ ಕೀಳು ಮಟ್ಟದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿಯ ಸ್ಥಳೀಯ ಮುಖಂಡರು ಆರೋಪಿಸಿದ್ದಾರೆ. ಈ ಆರೋಪಗಳನ್ನು ಟಿಎಂಸಿ ಮುಖಂಡರು ತಳ್ಳಿಹಾಕಿದ್ದಾರೆ.</p>.<p>‘ಈ ಹಿಂದೆ ನಾವು ಈ ಕ್ಷೇತ್ರದ ಸಂಸದರನ್ನು ನೋಡಿಲ್ಲ. ನಮ್ಮ ಗ್ರಾಮದ ಮಹಿಳೆ ಸ್ಪರ್ಧಿಸುತ್ತಿರುವುದು ಸಂತಸ ತಂದಿದೆ’ ಎಂದು ಸ್ಥಳೀಯ ಮಹಿಳೆಯರು ತಿಳಿಸಿದರು. ಸಂದೇಶ್ಖಾಲಿಯಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ರೇಖಾ ಅವರು ಪ್ರಮುಖ ಪಾತ್ರ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ಸಂದೇಶ್ಖಾಲಿ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿರುವುದನ್ನು ವಿರೋಧಿಸಿ ವಿವಿಧೆಡೆ ಕೈಬರಹದ ಪೋಸ್ಟರ್ಗಳನ್ನು ಅಂಟಿಸಲಾಗಿದೆ.</p>.<p>ಟಿಎಂಸಿಯಿಂದ ಅಮಾನತುಗೊಂಡಿರುವ ಮುಖಂಡ ಶಾಜಹಾನ್ ಶೇಖ್ ಮತ್ತು ಬೆಂಬಲಿಗರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪ ಮಾಡಿದ್ದ ರೇಖಾ ಪಾತ್ರಾ ಎಂಬವರನ್ನು ಬಿಜೆಪಿಯು ಬಸಿರ್ಹಾತ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಭಾನುವಾರ ಘೋಷಿಸಿತ್ತು. ಸಂದೇಶ್ಖಾಲಿ ಕೂಡ ಈ ಕ್ಷೇತ್ರಕ್ಕೆ ಸೇರಿದೆ. </p>.<p>‘ರೇಖಾ ಅವರು ಅಭ್ಯರ್ಥಿಯಾಗುವುದನ್ನು ನಾವು ಬಯಸುವುದಿಲ್ಲ’ ಎಂಬ ಘೋಷವಾಕ್ಯವಿರುವ ಪೋಸ್ಟರ್ಗಳು ಕ್ಷೇತ್ರದ ವಿವಿಧೆಡೆ ಕಂಡು ಬಂದಿವೆ.</p>.<p>ಆಡಳಿತಾರೂಢ ಟಿಎಂಸಿಯು ಇಂತಹ ಕೀಳು ಮಟ್ಟದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿಯ ಸ್ಥಳೀಯ ಮುಖಂಡರು ಆರೋಪಿಸಿದ್ದಾರೆ. ಈ ಆರೋಪಗಳನ್ನು ಟಿಎಂಸಿ ಮುಖಂಡರು ತಳ್ಳಿಹಾಕಿದ್ದಾರೆ.</p>.<p>‘ಈ ಹಿಂದೆ ನಾವು ಈ ಕ್ಷೇತ್ರದ ಸಂಸದರನ್ನು ನೋಡಿಲ್ಲ. ನಮ್ಮ ಗ್ರಾಮದ ಮಹಿಳೆ ಸ್ಪರ್ಧಿಸುತ್ತಿರುವುದು ಸಂತಸ ತಂದಿದೆ’ ಎಂದು ಸ್ಥಳೀಯ ಮಹಿಳೆಯರು ತಿಳಿಸಿದರು. ಸಂದೇಶ್ಖಾಲಿಯಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ರೇಖಾ ಅವರು ಪ್ರಮುಖ ಪಾತ್ರ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>