<p><strong>ನವದೆಹಲಿ</strong>: ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗಮೋಹನ್ ರೆಡ್ಡಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ ನಿರಾಕರಿಸಿದ್ದ ಅಟಾರ್ನಿ ಜನರಲ್ ಕೆ. ಕೆ. ವೇಣುಗೋಪಾಲ್, ತಮ್ಮ ನಿರ್ಧಾರವನ್ನು ಮರುಪರಿಶೀಲಿಸದಿರಲೂ ತೀರ್ಮಾನಿಸಿದ್ದಾರೆ.</p>.<p>ನ್ಯಾಯಮೂರ್ತಿಗಳ ವಿರುದ್ಧ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಜಗಮೋಹನ್ ಮತ್ತು ಅವರ ಪ್ರಧಾನ ಸಲಹೆಗಾರನ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಒಪ್ಪಿಗೆ ನೀಡುವಂತೆ ಬಿಜೆಪಿ ಮುಖಂಡ ಹಾಗೂ ವಕೀಲ ಅಶ್ವಿನಿ ಉಪಾಧ್ಯಾಯ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು. ಈ ಅರ್ಜಿಯನ್ನುಈ ತಿಂಗಳ 2ರಂದು ವೇಣುಗೋಪಾಲ್ ತಿರಸ್ಕರಿಸಿದ್ದರು.</p>.<p>ನ್ಯಾಯಾಂಗದ ನಿಂದನೆಯು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ, ಮುಖ್ಯಮಂತ್ರಿ ಜಗಮೋಹನ್ ಹಾಗೂ ಅವರ ಪ್ರಧಾನ ಸಲಹೆಗಾರ ಅಜಯ್ ಕಲ್ಲಂ ಅವರ ನಡುವಣ ವಿಚಾರವಾಗಿದೆ ಎಂದು ವೇಣುಗೋಪಾಲ್ ಅವರು ಉಪಾಧ್ಯಾಯ ಅವರ ಪತ್ರಕ್ಕೆ ಉತ್ತರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗಮೋಹನ್ ರೆಡ್ಡಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ ನಿರಾಕರಿಸಿದ್ದ ಅಟಾರ್ನಿ ಜನರಲ್ ಕೆ. ಕೆ. ವೇಣುಗೋಪಾಲ್, ತಮ್ಮ ನಿರ್ಧಾರವನ್ನು ಮರುಪರಿಶೀಲಿಸದಿರಲೂ ತೀರ್ಮಾನಿಸಿದ್ದಾರೆ.</p>.<p>ನ್ಯಾಯಮೂರ್ತಿಗಳ ವಿರುದ್ಧ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಜಗಮೋಹನ್ ಮತ್ತು ಅವರ ಪ್ರಧಾನ ಸಲಹೆಗಾರನ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಒಪ್ಪಿಗೆ ನೀಡುವಂತೆ ಬಿಜೆಪಿ ಮುಖಂಡ ಹಾಗೂ ವಕೀಲ ಅಶ್ವಿನಿ ಉಪಾಧ್ಯಾಯ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು. ಈ ಅರ್ಜಿಯನ್ನುಈ ತಿಂಗಳ 2ರಂದು ವೇಣುಗೋಪಾಲ್ ತಿರಸ್ಕರಿಸಿದ್ದರು.</p>.<p>ನ್ಯಾಯಾಂಗದ ನಿಂದನೆಯು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ, ಮುಖ್ಯಮಂತ್ರಿ ಜಗಮೋಹನ್ ಹಾಗೂ ಅವರ ಪ್ರಧಾನ ಸಲಹೆಗಾರ ಅಜಯ್ ಕಲ್ಲಂ ಅವರ ನಡುವಣ ವಿಚಾರವಾಗಿದೆ ಎಂದು ವೇಣುಗೋಪಾಲ್ ಅವರು ಉಪಾಧ್ಯಾಯ ಅವರ ಪತ್ರಕ್ಕೆ ಉತ್ತರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>