ಪವಾರ್ ಅವರ ನಿವಾಸದಲ್ಲಿ ಮಂಗಳವಾರ ಎಂಟು ವಿರೋಧ ಪಕ್ಷಗಳ ನಾಯಕರ ಸಭೆ ನಡೆದಿತ್ತು. ಈ ಸಭೆಯ ಅಧ್ಯಕ್ಷತೆಯನ್ನು ಪವಾರ್ ಅವರೇ ವಹಿಸಿದ್ದರು. ಮರುದಿನವೇ ನಡೆದ ಈ ಭೇಟಿಯು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಪವಾರ್– ಕಿಶೋರ್ ಅವರ ಈ ಮಾತುಕತೆಗಳು, ವಿರೋಧಪಕ್ಷಗಳನ್ನು ಒಗ್ಗೂಡಿಸಿ, ಬಿಜೆಪಿಯ ವಿರುದ್ಧ ಬಲಿಷ್ಠವಾದ ತೃತೀಯ ರಂಗದ ರಚನೆಯ ಪ್ರಯತ್ನಗಳಾಗಿವೆ ಎಂದು ಹೇಳಲಾಗುತ್ತಿದೆ.