<p><strong>ನವದೆಹಲಿ:</strong> ನೂತನ ಕೃಷಿ ಕಾಯ್ದೆಗಳ ಕುರಿತು ವಿವಿಧ ರೈತ ಸಂಘಟನೆಗಳು ಎತ್ತಿರುವ ಪ್ರಮುಖ ಅಂಶಗಳನ್ನಿಟ್ಟುಕೊಂಡು ಸರ್ಕಾರ ತಯಾರಿಸಿದ ‘ಕರಡು ಪ್ರಸ್ತಾವನೆ’ಯನ್ನು ಬುಧವಾರ ರೈತರ ಮುಖಂಡರಿಗೆ ತಲುಪಿಸಲಾಗಿದೆ.</p>.<p>ಭಾರತೀಯ ಕಿಸಾನ್ ಯೂನಿಯನ್ (ಏಕ್ತಾ ಉಗ್ರಹಾನ್) ಸಂಘದ ಜೋಗಿಂದರ್ ಸಿಂಗ್ ಉಗ್ರಾಹಾನ್ ಸೇರಿದಂತೆ ಪ್ರತಿಭಟನಾ ನಿರತ ಪ್ರಮುಖ 13 ವಿವಿಧ ರೈತ ಸಂಘಗಳ ನಾಯಕರಿಗೆ ಕರಡು ಪ್ರಸ್ತಾವನೆಯನ್ನು ಸರ್ಕಾರ ಕಳುಹಿಸಿಕೊಟ್ಟಿದೆ.</p>.<p>ಕೇಂದ್ರ ಕೃಷಿ ಇಲಾಖೆಯ ಜಂಟಿ ಕಾರ್ಯದರ್ಶಿ ವಿವೇಕ್ ಅಗರ್ವಾಲ್ ಅವರ ಮೂಲಕ ಸರ್ಕಾರ ಕರಡು ಪ್ರಸ್ತಾವನೆಯನ್ನು ರೈತ ಸಂಘಗಳ ಮುಖಂಡರಿಗೆ ತಲುಪಿಸಿತು.</p>.<p>‘ಸರ್ಕಾರ ಕಳುಹಿಸಿರುವ ಕರಡು ಪ್ರಸ್ತಾವನೆ ರೈತ ಸಂಘಟನೆಗಳನ್ನು ತಲುಪಿವೆ‘ ಎಂದು ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ. ಕೃಷಿ ಕಾಯ್ದೆಗಳ ಕುರಿತು ಸರ್ಕಾರದೊಂದಿಗೆ ಮಾತುಕತೆ ನಡೆಸಲು ಮಂದಾಗುವ ವಿವಿಧ ರೈತ ಸಂಘಗಳ ಮುಖಂಡರಲ್ಲಿ ರಾಖೇಶ್ ಕೂಡ ಪ್ರಮುಖರು.</p>.<p>ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಮಂಗಳವಾರ ರಾತ್ರಿ 13 ಯೂನಿಯನ್ ನಾಯಕರೊಂದಿಗೆ ನಡೆಸಿದ ಸಭೆಯಲ್ಲಿ, ಮೂರು ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ರೈತರು ಎತ್ತಿರುವ ಪ್ರಮುಖ ವಿಷಯಗಳನ್ನು ಸೇರಿಸಿ ಸಿದ್ಧಪಡಿಸಿದ್ದ ಕರಡು ಪ್ರಸ್ತಾವನೆಯನ್ನು, ರೈತ ನಾಯಕರಿಗೆ ತಲುಪಿಸುವುದಾಗಿ ಹೇಳಿದ್ದರು.</p>.<p>ಕೃಷಿ ಕಾಯ್ದೆಗಳ ರದ್ಧತಿ ಕುರಿತು ಪ್ರತಿಭಟನಾ ನಿರತ ರೈತ ಮುಖಂಡರು ಮತ್ತು ಸರ್ಕಾರದ ನಡುವೆ ಬುಧವಾರ ಬೆಳಿಗ್ಗೆ ನಿಗದಿಯಾಗಿದ್ದ ಆರನೇ ಸುತ್ತಿನ ಮಾತುಕತೆ ರದ್ದಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನೂತನ ಕೃಷಿ ಕಾಯ್ದೆಗಳ ಕುರಿತು ವಿವಿಧ ರೈತ ಸಂಘಟನೆಗಳು ಎತ್ತಿರುವ ಪ್ರಮುಖ ಅಂಶಗಳನ್ನಿಟ್ಟುಕೊಂಡು ಸರ್ಕಾರ ತಯಾರಿಸಿದ ‘ಕರಡು ಪ್ರಸ್ತಾವನೆ’ಯನ್ನು ಬುಧವಾರ ರೈತರ ಮುಖಂಡರಿಗೆ ತಲುಪಿಸಲಾಗಿದೆ.</p>.<p>ಭಾರತೀಯ ಕಿಸಾನ್ ಯೂನಿಯನ್ (ಏಕ್ತಾ ಉಗ್ರಹಾನ್) ಸಂಘದ ಜೋಗಿಂದರ್ ಸಿಂಗ್ ಉಗ್ರಾಹಾನ್ ಸೇರಿದಂತೆ ಪ್ರತಿಭಟನಾ ನಿರತ ಪ್ರಮುಖ 13 ವಿವಿಧ ರೈತ ಸಂಘಗಳ ನಾಯಕರಿಗೆ ಕರಡು ಪ್ರಸ್ತಾವನೆಯನ್ನು ಸರ್ಕಾರ ಕಳುಹಿಸಿಕೊಟ್ಟಿದೆ.</p>.<p>ಕೇಂದ್ರ ಕೃಷಿ ಇಲಾಖೆಯ ಜಂಟಿ ಕಾರ್ಯದರ್ಶಿ ವಿವೇಕ್ ಅಗರ್ವಾಲ್ ಅವರ ಮೂಲಕ ಸರ್ಕಾರ ಕರಡು ಪ್ರಸ್ತಾವನೆಯನ್ನು ರೈತ ಸಂಘಗಳ ಮುಖಂಡರಿಗೆ ತಲುಪಿಸಿತು.</p>.<p>‘ಸರ್ಕಾರ ಕಳುಹಿಸಿರುವ ಕರಡು ಪ್ರಸ್ತಾವನೆ ರೈತ ಸಂಘಟನೆಗಳನ್ನು ತಲುಪಿವೆ‘ ಎಂದು ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ. ಕೃಷಿ ಕಾಯ್ದೆಗಳ ಕುರಿತು ಸರ್ಕಾರದೊಂದಿಗೆ ಮಾತುಕತೆ ನಡೆಸಲು ಮಂದಾಗುವ ವಿವಿಧ ರೈತ ಸಂಘಗಳ ಮುಖಂಡರಲ್ಲಿ ರಾಖೇಶ್ ಕೂಡ ಪ್ರಮುಖರು.</p>.<p>ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಮಂಗಳವಾರ ರಾತ್ರಿ 13 ಯೂನಿಯನ್ ನಾಯಕರೊಂದಿಗೆ ನಡೆಸಿದ ಸಭೆಯಲ್ಲಿ, ಮೂರು ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ರೈತರು ಎತ್ತಿರುವ ಪ್ರಮುಖ ವಿಷಯಗಳನ್ನು ಸೇರಿಸಿ ಸಿದ್ಧಪಡಿಸಿದ್ದ ಕರಡು ಪ್ರಸ್ತಾವನೆಯನ್ನು, ರೈತ ನಾಯಕರಿಗೆ ತಲುಪಿಸುವುದಾಗಿ ಹೇಳಿದ್ದರು.</p>.<p>ಕೃಷಿ ಕಾಯ್ದೆಗಳ ರದ್ಧತಿ ಕುರಿತು ಪ್ರತಿಭಟನಾ ನಿರತ ರೈತ ಮುಖಂಡರು ಮತ್ತು ಸರ್ಕಾರದ ನಡುವೆ ಬುಧವಾರ ಬೆಳಿಗ್ಗೆ ನಿಗದಿಯಾಗಿದ್ದ ಆರನೇ ಸುತ್ತಿನ ಮಾತುಕತೆ ರದ್ದಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>